Headlines

RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ

RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ ಹಾಕಿದ ನಂತರದಲ್ಲಿ ಈ ರೀತಿಯಾಗಿ ಸಮಸ್ಯೆಯಾಗಿದೆ ಎಂದು ಪೋಷಕರು ಆರೋಪಿಸುತಿದ್ದರೆ ಸ್ಥಳೀಯ ನೀರಿನ ಸಮಸ್ಯೆಯಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿರಬಹುದು ಎಂದು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳುತಿದ್ದಾರೆ. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ…

Read More

ರಿಪ್ಪನ್‌ಪೇಟೆ : ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಯುವ ಪ್ರತಿಭೆಗೆ ಮಾಜಿ ಸಚಿವರಿಂದ ಅಭಿನಂದನೆ|pro kabbadi

ರಿಪ್ಪನ್‌ಪೇಟೆ : ಹತ್ತನೇ ಆವೃತ್ತಿಯ ಪ್ರೋ ಕಬ್ಬಡಿ ಲೀಗ್ ನಲ್ಲಿ ಯುಪಿ ಯೋಧ ತಂಡಕ್ಕೆ ಆಯ್ಕೆಯಾದ ಯುವ ಪ್ರತಿಭೆ ಗಗನ್ ಗೌಡ ರವರಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿದ್ದಾರೆ. ಇಂದು ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದಲ್ಲಿರುವ ಗಗನ್ ಗೌಡ ರವರ ಮನೆಗೆ ತೆರಳಿದ ಮಾಜಿ ಸಚಿವರು ಯುವ ಪ್ರತಿಭೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಮುಖಂಡರಾದ ದೇವೆಂದ್ರಪ್ಪ ಗೌಡ ,ಆನಂದ್ ಮೆಣಸೆ, ನೇಮಾಕ್ಷಿ ಗೌಡ್ರು, ಜಯದೇವ, ರಾಜೇಂದ್ರ ಘಂಟೆ, ಗಣಪತಿ,…

Read More

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ನಡೆಸಿರುವ ಬಗ್ಗೆ ಮಾಹಿತಿಯೊಂದು ಲಭ್ಯವಾಗಿದೆ. ಈ ಘಟನೆ ಮುತ್ತಿನಕೊಪ್ಪದ ಮುಂದೆ ಸಿಗುವ ತೋಟದ ಕೆರೆ ಬಳಿ ನಿನ್ನೆ ರಾತ್ರಿ ಏಳು ಮೂವತ್ತರ ಹೊತ್ತಿಗೆ ನಡೆದಿದೆ. ಘಟನೆಯಲ್ಲಿ ಶಶಿಧರ್‌ ಎಂಬವರು ಗಾಯಗೊಂಡಿದ್ದು, ಅವರನ್ನ ಸ್ಥಳೀಯ ಹಳ್ಳಿಯವರು ಉಪಚರಿಸಿದ್ದಾರೆ. ಆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಶಿಧರ್‌ ಎಂಬವರು ನಿನ್ನೆ ದಾವಣಗೆರೆಗೆ ಹೋಗಿ ಕೆಲಸ…

Read More

ಸಚಿವ ಈಶ್ವರಪ್ಪ ರಾಜೀನಾಮೆ ನೀಡುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ :

ರಿಪ್ಪನ್ ಪೇಟೆ : ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಘಟನೆಗೆ ಸಂಬಂಧಿಸಿದಂತೆ ಸಚಿವರಾದ ಕೆ.ಎಸ್. ಈಶ್ವರಪ್ಪನವರ ಹೆಸರು ಲಂಚಾರೋಪದಲ್ಲಿ ಪ್ರಸ್ತಾಪವಾಗಿದ್ದು, ಉಲ್ಲೇಖಿಸಿದ ವ್ಯಕ್ತಿಯು ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಘಟನೆಗೆ ಸಚಿವರು ಕಾರಣವೆಂದು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಸಚಿವರು ನೈತಿಕ ಹೊಣೆಹೊತ್ತು ಕೂಡಲೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ರಿಪ್ಪನ್ ಪೇಟೆ ಆಮ್ ಆದ್ಮಿ ಪಕ್ಷದ ವತಿಯಿಂದ ನಾಡ ಕಛೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಆಮ್ ಅದ್ಮಿ ಪಕ್ಷದ ತಾಲೂಕ್ ಉಪಾಧ್ಯಕ್ಷರಾದ ಹಸನಬ್ಬ…

Read More

ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ : ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸಿ :ನಾಗರಾಜ ಪರಿಸರ.

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನದಲ್ಲಿ  ಶಿಕ್ಷಣ  ಪಡೆಯುತ್ತಿರುವ ಯುವ ಸಮೂಹ  ಪ್ರತಿಯೊಬ್ಬರನ್ನು  ಗೌರವಿಸುವ  ಮನೋಭಾವನೆಯನ್ನು ಬೆಳೆಸಿಕೊಂಡರೆ  ಉತ್ತಮ ಸಮಾಜ  ನಿರ್ಮಾಣ ಮಾಡಬಹುದು ಎಂದು ಕುವೆಂಪು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜನೆ ಅಧಿಕಾರಿ  ಡಾ. ನಾಗರಾಜ  ಪರಿಸರ  ಹೇಳಿದರು.  ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದಿನ ಯುವ ಸಮೂಹ ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸುವಂತಾಗಬೇಕು. ಅಂತ ಮನೋಭಾವನೆಯನ್ನು…

Read More

ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಲಾರಿ ಅಡಿಗೆ ಸಿಲುಕಿಕೊಂಡ ಬೈಕ್ ಸವಾರ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸಿದ್ದಪನಗುಡಿ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಲಾರಿಯಡಿ ಸಿಲುಕಿಕೊಂಡ ಘಟನೆ ನಡೆದಿದೆ. ಆಯನೂರಿನಿಂದ ರಿಪ್ಪನ್‌ಪೇಟೆಗೆ ಬೈಕ್ ನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ರಿಪ್ಪನ್‌ಪೇಟೆ ಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿ ಬೈಕ್ ಸಮೇತ ಇಬ್ಬರು ಯುವಕರು ಲಾರಿಯಡಿಗೆ ಸಿಲುಕಿಕೊಂಡ ಘಟನೆ ನಡೆದಿದೆ. ನಡೆದಿದ್ದೇನು…. ರಿಪ್ಪನ್‌ಪೇಟೆಗೆ ಗಾರೆ ಕೆಲಸಕ್ಕೆಂದು ಬೈಕ್ ನಲ್ಲಿ ಬರುತ್ತಿದ್ದ ಆಯನೂರಿನ ನಿವಾಸಿಗಳಾದ ಶ್ರೀನಿವಾಸ್ (29) ಮತ್ತು ಮಂಜುನಾಥ್ (28) ಹಾಗೂ…

Read More

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ವರ್ಗಾವಣೆ – ನೂತನ ಡಿಸಿ ಆಗಿ ಫ್ರಭುಲಿಂಗ ಕವಳಿಕಟ್ಟಿ ನೇಮಕ

The government has appointed IAS officer Prabhulinga Kavalikatti to the post of Shivamogga District Commissioner vacated by the transfer of Dr. Gurudatta Hegde. He is currently serving as the Director of the Directorate of Municipal Administration, Karnataka. ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ವರ್ಗಾವಣೆ – ನೂತನ ಡಿಸಿ ಆಗಿ ಫ್ರಭುಲಿಂಗ ಕವಳಿಕಟ್ಟಿ ನೇಮಕ shivamogga-dc-gurudatta-hegde-transfer-prabhuling-kavalikatti ಶಿವಮೊಗ್ಗ – ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ…

Read More

ರಿಪ್ಪನ್ ಪೇಟೆ : ನಿಂತಿದ್ದ ಟಿಪ್ಪರ್ ಗೆ ಆಟೋ ಡಿಕ್ಕಿ ,ಚಾಲಕನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಹಳೂರಿನಲ್ಲಿ  ನಿಲ್ಲಿಸಿದ್ದ ಟಿಪ್ಪರ್ ಗೆ ಹಿಂಬದಿಯಿಂದ ಬಂದ  ಪ್ಯಾಸೇಂಜರ್ ಆಟೋ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ರಿಪ್ಪನ್ ಪೇಟೆ ವಾಸಿ ಕಿರಣ್  ತೀವ್ರವಾಗಿ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಹೊಸನಗರ-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿ ಗವಟೂರು ಹೊಳೆ ಸಮೀಪ ಮಧ್ಯ ರಸ್ತೆಯಲ್ಲಿ ಯಾವುದೇ ಇಂಡಿಕೇಟರ್ ಹಾಕದೇ ನಿಲ್ಲಿಸಿದ್ದ ಟಿಪ್ಪರ್ ಗೆ ರಿಪ್ಪನ್ ಪೇಟೆ ಕಡೆಯಿಂದ ಜೇನಿ ಕಡೆಗೆ ಹೋಗುತ್ತಿದ್ದ ಪ್ಯಾಸೇಂಜರ್ ಆಟೋ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…

Read More

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಜಾ ಗಿರಾಕಿಗಳಿಗೆ ಸಿಂಹ ಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟಲು ಟೊಂಕ ಕಟ್ಟಿ ನಿಂತಿದ್ದಾರೆ. ಕೊಲೆ, ದರೋಡೆ, ಅತ್ಯಾಚಾರ, ಅಪಘಾತ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಗಾಂಜಾ ಸೇವಿಸಿ ಕೃತ್ಯವೆಸಗಿರುವುದು ಸಾಬೀತಾಗಿದೆ. ಅಪರಾಧ ಕೃತ್ಯಗಳಿಗೆ ಪ್ರೇರೇಪಿಸುವ ಗಾಂಜಾ ಚಟಕ್ಕೆ ಬಿದ್ದ ಯುವ…

Read More