Headlines

ಅಮೃತ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆ

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಮಂಜುಳಾ ರಾಜು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಮಂಜುಳಾ ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ. 11 ಜನ ಸದಸ್ಯರಿರುವ ಗ್ರಾಮ ಪಂಚಾಯತಿ 2 ಕಾಂಗ್ರೆಸ್ ಸದಸ್ಯರಿದ್ದು 9 ಸ್ಥಾನ ಬಿಜೆಪಿ ಪಾಲಾಗಿತ್ತು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರ ನೇತೃತ್ವದಲ್ಲಿ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ರಿಪ್ಪನ್‌ಪೇಟೆ- ಹುಂಚಾ ಬಿಜೆಪಿ ಮಹಾಶಕ್ತಿ…

Read More

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಶ್ವೇತಾ ಬಂಡಿ ರವರ ಅಧಿಕಾರ ಸ್ವೀಕಾರ ಸಮಾರಂಭ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಬಂಜಾರ ಭವನದಲ್ಲಿ ಜರುಗಲಿದೆ. ​’ಸಮರ್ಥ ನಾಯಕತ್ವದ ಕಡೆಗೆ ನೂತನ ಪದಾಧಿಕಾರಿಗಳ ಹೆಜ್ಜೆ’ ಎಂಬ ಧ್ಯೇಯದಡಿ ಈ ಸಮಾರಂಭವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್‌ನ ಹಿರಿಯ ನಾಯಕರು, ಜನಪ್ರತಿನಿಧಿಗಳು ಮತ್ತು ಸಾವಿರಾರು ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ…

Read More

ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ: ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ

ಶಿವಮೊಗ್ಗ : ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ ಶನಿವಾರ ಆಗಸ್ಟ್ 28 ರಂದು ಅಮಾಯಕ ಶಿಕ್ಷಕರೊಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ಮೊದಲಿನಿಂದಲು ನಾಗರಿಕರು ಸ್ಮಾರ್ಟ್ ಸಿಟಿಯ ನಿಧಾನಗತಿಯ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿದ್ದಾರೆ ಆದರೆ ಇದರ ಬಗ್ಗೆ ಪಾಲಿಕೆಯಾಗಲೀ ಜಿಲ್ಲಾಡಳಿತವಾಗಲಿ ಉಸ್ತುವಾರಿ ಸಚಿವರಾಗಲಿ ಗಮನ ಹರಿಸಿದಿರುವುದು ನಿಜಕ್ಕೂ ವಿಷಾದನೀಯ,ಈಗಾಗಲೇ ನಗರದ ಮುಖ್ಯ ರಸ್ತೆಯನ್ನು ದ್ವಿಪಥ ರಸ್ತೆ 2 ವರ್ಷದಿಂದ ಅಗೆದು ಹಾಕಿ ಜನರಿಗೆ ತೊಂದರೆಯಾಗುವಂತೆ ಮಾಡಲಾಗಿದೆ ಎಂಜಿನಿಯರ್ ಮತ್ತು ಗುತ್ತಿಗೆದಾರರು…

Read More

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ ಬಂಕಾಪುರ್ : ಹಾವೇರಿ ಜಿಲ್ಲೆಯ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಾವೇರಿ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಿಗ್ಗಾವಿ ತಾಲೂಕಿನ ಪತ್ರಕರ್ತರಾದ ಪರಸಪ್ಪ ಸತ್ಯಪ್ಪನವರ ಅವರು ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಬಂಕಾಪುರ ಪಟ್ಟಣದ ಶ್ರೀ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಳಿ ಯುವಕರು ಪರಸಪ್ಪ ಸತ್ಯಪ್ಪನವರ ಅವರಿಗೆ…

Read More

ರಿಪ್ಪನ್ ಪೇಟೆ ಬಾಲಕಿಯರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಯರ ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ :

ರಿಪ್ಪನ್ ಪೇಟೆ: ಪಟ್ಟಣದ ಹಳೆ ಸಂತೆ ಮಾರ್ಕೆಟ್ ರಸ್ತೆಯಲ್ಲಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿನಿಯರ ನಿಲಯದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ  ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ ನೀಡಿ ವಿದ್ಯಾರ್ಥಿಗಳ ತೊಂದರೆಗಳನ್ನು  ಕುಂದುಕೊರತೆಗಳನ್ನು ಆಲಿಸಿದರು.  ಮಾಜಿ ಶಾಸಕರು ವಿದ್ಯಾರ್ಥಿನಿಯರ ನಿಲಯಕ್ಕೆ ಭೇಟಿ ನೀಡುತ್ತಿದ್ದಂತೆ ವಿದ್ಯಾರ್ಥಿಗಳು ಹಾಸ್ಟೆಲ್ ವಾರ್ಡನ್ ಹಾಗೂ ಕಳಪೆ  ಆಹಾರದ ಬಗ್ಗೆ ಅಡುಗೆ ತಯಾರಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  ವಿದ್ಯಾರ್ಥಿನಿಯರ ದೂರಿನ ಆಧಾರದ ಮೇಲೆ ಮಾಜಿ ಶಾಸಕರು ವಾರ್ಡನ್ ಹಾಗೂ…

Read More

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಗವಟೂರು ಗ್ರಾಮದಲ್ಲಿ ನಡೆದಿದೆ. ಗವಟೂರು ಗ್ರಾಮದ ಹಳೂರು ನಿವಾಸಿ ನಾಗೇಶ್ (35) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಳಗಿನಜಾವ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಾಗಲೇ ನಾಗೇಶ್ ಮೃತಪಟ್ಟಿದ್ದಾರೆ. ಮೃತರು ಪತ್ನಿ , ಒರ್ವ ಪುತ್ರ , ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ…

Read More
Van on sunset

Vestibulum sapien elit, fringilla id varius non

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ A tragic accident in Shivamogga where a 1.5-year-old child lost life after being hit by a school bus. Police have registered a case and investigation is underway. ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

Ripponpete | ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ

ರಿಪ್ಪನ್‌ಪೇಟೆ – ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 117ನೇ ಜನ್ಮ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು‌. ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಡಾ.ಶಿವಕುಮಾರ ಸ್ವಾಮೀಜಿರವರ ಭಕ್ತ ವೃಂದ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡಿ ಕಲಿಯುಗದ ನಡೆದಾಡುವ ದೇವರಾದ…

Read More