Headlines

ನಾನು ಸಚಿವ ಸ್ಥಾನದ ಆಕಾಂಕ್ಷಿ,ಸಚಿವ ಸ್ಥಾನ ಕೊಟ್ಟರೆ ಉತ್ತಮವಾಗಿ ನಿರ್ವಹಿಸುವ ಸಾಮರ್ಥ್ಯ ನನ್ನಲ್ಲಿದೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಸಚಿವ ಸಂಪುಟದ ವಿಸ್ತರಣೆಯತ್ತ ಇದೀಗ ಎಲ್ಲರ ಚಿತ್ತ ಮೂಡುತ್ತಿದೆ.ಯಾರು ಯಾರಿಗೆ ಮಂತ್ರಿ ಸ್ಥಾನ ಒಲಿಯಲಿದೆ ಎಂಬುದು ಇದೀಗ ಎಲ್ಲರಲ್ಲೂ ಕಾಡುತ್ತಿರುವಂತಹ ಕುತೂಹಲ ಯಾವುದೇ ಶಾಸಕರನ್ನು ವಿಚಾರಿಸಿದಾಗ ನಾವು ಮಂತ್ರಿಯಾಗುವ ಆಸೆ ಹೊಂದಿದ್ದೇವೆ ಅವಕಾಶವೂ ಸಿಗುವ ಸಾಧ್ಯತೆಗಳು ಹೆಚ್ಚಿದೆ ಎಂದು ಹೇಳುವುದು ಇದೀಗ ಸಹಜವಾಗಿದೆ.   ಜಿಲ್ಲೆಯ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರತಾಳು ಹಾಲಪ್ಪನವರು ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮದಲ್ಲಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ …

Read More

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ರಿಪ್ಪನ್‌ಪೇಟೆ : ಗರ್ತಿಕೆರೆ ಸಮೀಪದ ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ಡಿ.18ರ ಸೋಮವಾರ 17ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ದೇವಸ್ಥಾನದ ವ್ಯವಸ್ಥಾಪಕರಾದ ಸುನಂದ, ಚಂದ್ರಶೇಖರ್(ಪುಟ್ಟ) ಹಾಗೂ ನಾಗರಾಜ್ ರಾಮನರಸ ಅವರು, ಅಂದು ಬೆಳಿಗ್ಗೆ ದೇವರಿಗೆ ಗಣಹೋಮ, ಪಂಚ ವಿಂಶತಿ ಕಲಶ, ಕಲಾತತ್ವ ಅಧಿವಾಸ ಹೋಮ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ, ಆಶ್ಲೇಷ ಬಲಿ, ರಾತ್ರಿ…

Read More

ಕೊರೊನಾ ಭೀತಿ: ಆಗುಂಬೆ ಚೆಕ್ ಪೋಸ್ಟ್ ಬಿಗಿಗೊಳಿಸಲು ಮುಖ್ಯಮಂತ್ರಿಗಳಿಂದ ಆದೇಶ:

ತೀರ್ಥಹಳ್ಳಿ: ಕರಾವಳಿ ಭಾಗ ಹಾಗೂ ಕೇರಳದೊಂದಿಗೆ ನಿಕಟ ಸಂಪರ್ಕ ಹೊಂದಿರುವ ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತೀರ್ಥಹಳ್ಳಿಯಲ್ಲಿ ಕೊರೋನಾ ತಪಾಸಣಾ ಕೇಂದ್ರ ಸ್ಥಾಪಿಸಲು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಅನುಮತಿ ನೀಡಿದ್ದಾರೆ.  ಶಿವಮೊಗ್ಗ ಜಿಲ್ಲೆ ಹಾಗೂ ತೀರ್ಥಹಳ್ಳಿ ಭಾಗದಲ್ಲಿ ಇನ್ನೂ ಕೂಡಾ ಕೋವಿಡ್ ಸಂಪೂರ್ಣ ಹತೋಟಿಗೆ ಬಾರದಾಗಿದೆ ಜತೆಗೆ ಮೂರನೆಯ ಅಲೆ ಪ್ರಾರಂಭವಾಗುವ ಅನುಮಾನಗಳಿದ್ದು ತ್ವರಿತ ತಪಾಸಣೆ ಹಾಗೂ ಚಿಕಿತ್ಸೆಗೆ ಸರಕಾರ ಮಹತ್ವದ ಕ್ರಮ ಕೈಗೊಂಡಿದೆ. ಇದರ ಜತೆಗೆ ಆಗುಂಬೆಯಲ್ಲಿ ಚೆಕ್ ಪೋಸ್ಟ್…

Read More

ಹರತಾಳು ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷೆ ಸೇರಿದಂತೆ 7 ಜನ ಸದಸ್ಯರು ಕೆಡಿಪಿ ಸಭೆಗೆ ಗೈರು :

ಹರತಾಳು ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷರು ಮತ್ತು 6 ಜನ ಸದಸ್ಯರು ಗೈರಾಗಿದ್ದರು. 8 ಸದಸ್ಯ ಬಲದ ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಹಮ್ಮಿಕೊಳ್ಳಲಾಗಿತ್ತು  ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ವಸತಿ ಮನೆ ಹಂಚಿಕೆಯಲ್ಲಿ ತಾರತಮ್ಯ ಮಾಡುವ ಮೂಲಕ ಸದಸ್ಯ ಸ್ಥಾನಕ್ಕೆ ಹಕ್ಕು ಚ್ಯುತಿ ತರುವ ಪ್ರಯತ್ನ ಮಾಡಿದ್ದಾರೆ .ನರೇಗಾ ಯೋಜನೆ ಮತ್ತು…

Read More

ಆನಂದಪುರ : ಉರುಳಿಗೆ ಸಿಲುಕಿ ಪ್ರಾಣ ಬಿಟ್ಟ ಚಿರತೆ|Leopard

ಆನಂದಪುರ ವಲಯ ಅರಣ್ಯದ ಚೋರಡಿ ತುಪ್ಪೂರು ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಿದೆ. ಅದೇ ರೀತಿ ವನ್ಯ ಪ್ರಾಣಿಗಳ ಭೇಟೆ ಕೂಡ ಅವ್ಯಾಹತವಾಗಿ ನಡೆಯುತ್ತಿದೆ. ಜಮೀನಿಗೆ ಲಗ್ಗೆ ಇಡುವ ಕಾಡುಹಂದಿಗಳ ಬೇಟೆಗೆ ಉರುಳು ಹಾಕುವುದು, ಎಲೆಕ್ಟ್ರಿಕ್ ಕರೆಂಟ್ ಕೊಡುವುದು ಸಾಮಾನ್ಯ ಎಂಬಂತಾಗಿದೆ. ಇದಕ್ಕೆ ಪೂರಕ ಎಂಬಂತೆ,  ಆನಂದಪುರ ರೇಂಜ್ ನ ಚೋರಡಿ ಸಮೀಪದ ಕೋಣೆಹೊಸೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಹಾಕಿದ ಉರುಳಿಗೆ ಸಿಲುಕಿ ಚಿರತೆಯೊಂದು ಒದ್ದಾಡಿ ಪ್ರಾಣಬಿಟ್ಟಿದೆ.  ಸುಮಾರು 5 ರಿಂದ 6 ವರ್ಷ ಪ್ರಾಯದ ಗಂಡು…

Read More

ತಮ್ಮಡಿಕೊಪ್ಪ ಶಾಲೆಯ ಮುಖ್ಯ ಶಿಕ್ಷಕ ಗಂಗಾನಾಯ್ಕ್ ಅಮಾನತ್ತು|suspend

ತಮ್ಮಡಿಕೊಪ್ಪ ಶಾಲೆಯ ಮುಖ್ಯ ಶಿಕ್ಷಕ ಗಂಗಾನಾಯ್ಕ್ ಅಮಾನತ್ತು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಗಂಗನಾಯ್ಕ್ ರವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯಲೋಪ, ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ತಮ್ಮಡಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡ್ತಿ ಮುಖ್ಯಶಿಕ್ಷಕ ಡಿ.ಗಂಗಾನಾಯ್ಕ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಆದೇಶಿಸಿದ್ದಾರೆ.  ಗಂಗಾನಾಯ್ಕ ವಿರುದ್ಧ ಆ.25ರಂದು ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ಸ್ಥಳೀಯರು ಶಾಲಾ ಆವರಣದಲ್ಲೇ ಪ್ರತಿಭಟನೆ ನಡೆಸಿದ್ದರು. ಸರಿಯಾದ ಸಮಯಕ್ಕೆ…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|arrest

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಾರಿಗುಡ್ಡದ ಹೆಲಿಪ್ಯಾಡ್ ಬಳಿ ಇಬ್ಬರು ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದು ಈ ಆರೋಪಿಗಳನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಟ್ಟೆಮಲ್ಲಪ ಗ್ರಾಮದ ಫಯಾಜ್ ಬಿನ್ ಕರೀಂ ಸಾಬ್ ಹಾಗೂ ಮೊಹಮ್ಮದ್ ತಾಯಿಜ್ ಬಿನ್ ಮೊಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ನೀರರಾಜ್ ನರಲಾರರವರ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿಗಳು ಕೇಸ್ ದಾಖಲಿಸಿಕೊಂಡು ತನಿಖೆ ಕಾರ್ಯ ಕೈಗೊಂಡಿದ್ದಾರೆ.

Read More

ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು – ಎ ಆರ್ ಪ್ರಸನ್ನ ಕುಮಾರ್|hombuja

ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಇದರ ಉಪಾಧ್ಯಕ್ಷರಾದ ಎ.ಆರ್ ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಶ್ರೀಕ್ಷೇತ್ರ ಹೊಂಬುಜದಲ್ಲಿ ನಡೆದ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಎರಡು ದಿನದ “ಆಡಳಿತ ಪರಿಣಿತಿ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಸಹಕಾರ ಸಂಸ್ಥೆಗಳ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಓರ್ವ ಗಂಭೀರ|Accident

ತೀರ್ಥಹಳ್ಳಿ : ಪಟ್ಟಣದ ಸೀಬಿನಕೆರೆ ಸಮೀಪದ ಯಡೆಹಳ್ಳಿ ಕೆರೆ ಬಳಿ ಬೈಕ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್‌ಗೆ ನಡುವೆ ಭೀಕರ ಅಪಘಾತವಾದ ಘಟನೆ ನಡೆದಿದೆ. ಯಡೆಹಳ್ಳಿ ಕೆರೆ ಏರಿ ಮೇಲೆ ಬಸ್ ಬೈಕ್ ಗೆ  ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.   ತೀರ್ಥಹಳ್ಳಿಯ ಮಾರ್ಕೆಟ್ ರಸ್ತೆಯ ಸಿರಾಜ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಾಜ್ ಅವರು ತೀರ್ಥಹಳ್ಳಿ ಯಿಂದ ಯಡೆಹಳ್ಳಿ…

Read More

ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸದ ಶಾಸಕ ಹರತಾಳು ಹಾಲಪ್ಪ : ಬೇಳೂರು ಗೋಪಾಲಕೃಷ್ಣ ಆರೋಪ.

ರಿಪ್ಪನ್ ಪೇಟೆ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಹಾಗೂ ಅನುಷ್ಠಾನಗೊಂಡಿರುವ ಸರಕಾರಿ ಯೋಜನೆಗಳು ಜಾರಿಗೊಳ್ಳುತ್ತಿಲ್ಲ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಾಗರ ಪಟ್ಟಣದ ಗಣಪತಿ ಕೆರೆ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದ ಗ್ರಾಮಪಂಚಾಯಿತಿಯ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಗರ  ವಿಧಾನಸಭಾ ಕ್ಷೇತ್ರದಲ್ಲಿ ಉದ್ಯೋಗಖಾತ್ರಿ ಯೋಜನೆ ಹಾಗೂ ಆಶ್ರಯ ಯೋಜನೆಗಳು ಕಾಣೆಯಾಗಿದ್ದು ಕಳೆದ ಕೆಲವು ವರ್ಷಗಳಿಂದ 94ಸಿ ಅಡಿಯಲ್ಲಿ…

Read More