Headlines

ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಯುವಕರು – ಇಬ್ಬರ ಬಂಧನ | Firing

ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಇಬ್ಬರು ಯುವಕರ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದಂತ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿರೋದಾಗಿ ತಿಳಿದು ಬಂದಿದೆ. ಈ ಘಟನೆ ಸಂಬಂಧ ಪುಂಡಾಟ ಮೆರೆದಂತ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಶಿವಮೊಗ್ಗ ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಅಲ್ಲದೇ ಕಾರಿನಿಂದ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ ಪಿಎಸ್‌ಐ ಪ್ರವೀಣ್ ಎಸ್ ಪಿ, ಎಎಸ್…

Read More

Ripponpete | ರಸ್ತೆ ಕಾಮಗಾರಿಗೆ ಅಡ್ಡಲಾದ ಕಟ್ಟಡ ತೆರವಿಗೆ ಮುಂದಾದ ಅಧಿಕಾರಿಗಳು – ಕಟ್ಟಡ ಮಾಲೀಕರ ಹೈಡ್ರಾಮ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ಹಿಟಾಚಿ ಯಂತ್ರದ ಮೂಲಕ ತೆರವುಗೊಳಿಸಲು ಮುಂದಾದ ಅಧಿಕಾರಿಗಳು ಹಾಗೂ ಕಟ್ಟಡದ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ…

Read More

ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…

Read More

ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident

ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident ಆಪೆ ಗಾಡಿಗೆ ಬೈಕ್‌ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಗಾಜನೂರು ಬಳಿಯಲ್ಲಿ ನಡೆದಿದೆ. ಗಾಜನೂರು ಸಮೀಪದ ವೀರಾಪುರದ ಬಳಿಯ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟೈಲ್ಸ್‌ ತುಂಬಿಕೊಂಡು ಬರುತ್ತಿದ್ದ ಆಪೆ ಗಾಡಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಪೆಟ್ಟು ಬಿದ್ದು ‍ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಸೊರಬ ಮೂಲದವನೆಂದು…

Read More

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ – ದೇಸಿ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಪ್ರದಾಯಿಕ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿ ಉಡುಗೆ ತೊಟ್ಟು ಮಿಂಚಿದರು. ತಳಿರು ತೋರಣ ರಂಗೋಲಿಗಳಿಂದ ಸಿಂಗಾರಗೊಂಡಿದ್ದ ಕಾಲೇಜು, ಹೂವು, ಬಾಳೆ ಹಣ್ಣು, ಕಬ್ಬುಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಕಾಲೇಜಿನ ಮುಂಭಾಗದಲ್ಲಿ ಹಾಕಿದ್ದ ಚಪ್ಪರ ಸೀರೆ, ಪಂಚೆ, ಶಲ್ಯದಲ್ಲಿ ಆಗಮಿಸಿದ್ದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಪರಸ್ಪರ ಸೆಲ್ಫಿ ತೆಗೆದುಕೊಳ್ಳುತ್ತಿದ್ದದ್ದು ಸಾಮಾನ್ಯವಾಗಿತ್ತು. ಕಾರ್ಯಕ್ರಮಕ್ಕೆ ಸಿಂಗಾರಗೊಂಡು ಬಂದಿದ್ದ ಗೂಳಿ ಸೂಗೂರು ಆದಿಶೇಷನನ್ನು…

Read More

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara  ಹೊಸನಗರ ತಾಲೂಕಿನ ಚಕ್ರಾ , ಸಾವೇಹಕ್ಲು ಜಲಾಶಯ ಭರ್ತಿಯಾಗಿದ್ದು ಗಮನ ಸೆಳೆಯುತ್ತಿದ್ದು ಜನರ ಮನಸೂರೆಗೊಂಡಿದೆ. ಶುಕ್ರವಾರ ಅವಳಿ ಜಲಾಶಯಗಳಿಗೆ ತಾಲೂಕು ಆಡಳಿತ ಮತ್ತು ಕರಿಮನೆ ಗ್ರಾಪಂ ವತಿಯಿಂದ ತಹಶೀಲ್ದಾರ್ ರಶ್ಮೀ ಹಾಲೇಶ್, ಶುಕ್ರವಾರ ಎರಡು ಜಲಾಶಯಗಳಿಗೆ ಗಂಗಾರತಿ ಬೆಳಗಿ ಬಾಗಿನ ತೇಲಿ ಬಿಡುವ ಮೂಲಕ‌ ಗೌರವ ಅರ್ಪಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ನಾಡಿನ ಬೆಳಕಿಗಾಗಿ ಸುಧೀರ್ಘ…

Read More

ಕೆಂಚನಾಳದಲ್ಲಿ ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಬೃಹದಾಕಾರದ ಮರ : ರೈಲ್ವೆ ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಕೆಂಚನಾಳ ರೈಲ್ವೆ ನಿಲ್ದಾಣದ ಮುಂಭಾಗದ ರೈಲು ಹಳಿಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ. ಕೆಂಚನಾಳ ರೈಲ್ವೆ ನಿಲ್ದಾಣದ ಎದುರುಗಡೆ ಇರುವ ಸುಮಾರು ನೂರು ವರ್ಷಕ್ಕೂ ಹಳೆಯ ಮರಕ್ಕೆ ನೆಲಕ್ಕುರುಳಿದೆ.ಇದರಿಂದ ತಾಳಗುಪ್ಪ-ಬೆಂಗಳೂರು ರೈಲು ಎರಡು ಗಂಟೆ ತಡವಾಗಿ ಸಂಚರಿಸಿತು. ತಾಳಗುಪ್ಪ-ಬೆಂಗಳೂರು ರೈಲು ಸಾಗರ ರೈಲ್ವೆ ನಿಲ್ದಾಣಕ್ಕೆ 06.30ಕ್ಕೆ ಆಗಮಿಸಬೇಕಾಗಿತ್ತು ಆದರೆ ಎರಡು ಗಂಟೆ ತಡವಾಗಿ ಅಂದರೆ 8:30ಕ್ಕೆ ಆಗಮಿಸಿದೆ. ಹಾಗೂ ಸಾಗರದಿಂದ-ಮೈಸೂರಿಗೆ ಹೋಗುವ ರೈಲು ಅರ್ಧ ಗಂಟೆ ತಡವಾಗಿ ಸಂಚರಿಸಿದೆ….

Read More

ಮಲೆನಾಡಿನಲ್ಲಿ ಟಗರಿನ ಕಾಳಗ ಸಂಭ್ರಮ: ನಾಳೆಯಿಂದ ಕೆಂಚನಾಳದಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

A state-level ram fight competition is set to take place in Kenchanala village near Ripponpet, marking a first for the Malnad region and promoting traditional rural sports and culture. ರಿಪ್ಪನ್ ಪೇಟೆ : ಕೆಂಚನಾಲ ಗ್ರಾಮವು ಭಾನುವಾರ (ಮಾ.29) ಗ್ರಾಮೀಣ ಕ್ರೀಡೆಗಳ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದು, ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ರಾಜ್ಯ ಮಟ್ಟದ ಟಗರಿನ ಕಾಳಗವನ್ನು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ…

Read More

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More
Exit mobile version