ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News ಬಲೂನ್ ಗೆ ಗಾಳಿ ತುಂಬಿದರೆ ಹೇಗೆ ಊದಿಕೊಳ್ಳುತ್ತೆ ನೋಡಿದ್ದೀರಲ್ವಾ? ಅದೇ ರೀತಿ ಮನುಷ್ಯರಿಗೆ ಗಾಳಿ ತುಂಬಿದ್ರೆ ಹೇಗೆ ಕಾಣ್ತೀವಿ.? ಕಾರ್ಟೂನ್‌ ಚಿತ್ರಗಳ ನೆನಪಾಗುತ್ತೆ. ಅಲ್ವಾ..? ಆದರೆ ಇಲ್ಲೊಬ್ಬ ಸ್ನೇಹಿತನೊಂದಿಗೆ ತಮಾಷೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬೈಕ್‌ ಸರ್ವೀಸ್‌ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದವನು ಅರೆಸ್ಟ್‌ ಆಗುವಂತ ಕೆಲಸ ಏನಪ್ಪ ಮಾಡಿದ್ದು ಅನ್ನೋದನ್ನು ನೋಡೋದಾದರೆ, ಈ ಫೋಟೋದಲ್ಲಿ…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್‌ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್‌ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು….

Read More

ನಮ್ಮೂರು ನಮಗೆ ಕಾಶಿ – ನಮ್ಮ ಮನೆಯೇ ಅಯೋಧ್ಯೆ ಆಗಬೇಕು : ಅವಧೂತ ವಿನಯ್ ಗುರೂಜಿ|avadhootha

ರಿಪ್ಪನ್‌ಪೇಟೆ: ಶಾಲೆ ಎಂಬುದು ಅರಿವಿನ ದೇಗುಲ, ಮನುಷ್ಯನಿಗೆ ನಾಗರೀಕತೆ ಬರುವುದು ಶಾಲೆಯಿಂದ. ಸಮಾಜಮುಖಿ ಜ್ಞಾನಾರ್ಜನೆ ಪಡೆದವರು ಕಾಶಿ ಯಾತ್ರೆ ಮಾಡುವ, ರಾಮ ಮಂದಿರ ನಿರ್ಮಿಸುವ  ಬದಲು ನಮ್ಮೂರೇ ನಮಗೆ ಕಾಶಿಯಾಗಬೇಕು, ನಮ್ಮ ಮನೆಯನ್ನೇ ರಾಮ ಮಂದಿರ ಅಯೋಧ್ಯೆಯನ್ನಾಗಿ ಪರಿವರ್ತಿಸಬೇಕು ಎಂದು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ತಿಳಿಸಿದರು. ಸಮೀಪದ ಹೆದ್ದಾರಿಪುರದ ಸಾವಿತ್ರಮ್ಮ ಶ್ರೀರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ  ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಾಲೆಗಳ ಮುಖ್ಯ ಉದ್ದೇಶವೇ ಮಕ್ಕಳನ್ನು ಸಮಾಜದಲ್ಲಿ ಸುಸಂಸ್ಕೃತರನ್ನಾಗಿಸುವುದು ಸಾವಿತ್ರಮ್ಮ…

Read More

ಹೃದಯಾಘಾತದಿಂದ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ್ ಗೌಡ್ರು ನಿಧನ

ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರಾಗಿದ್ದ ವಿನಯ್ ಗೌಡ್ರು (35) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ವಿನಯ್ ಗೌಡ್ರು 12/05/21 ರಂದು ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆಯನ್ನು ಇಂದು ರಾತ್ರಿ 10 ಕ್ಕೆ ಅವರ ಸ್ವಗ್ರಾಮವಾದ ತಡಗಳಲೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಬಸ್ ಹತ್ತುವಾಗ ಮಹಿಳೆಯ ಸರ ಅಪಹರಣ

ಬಸ್ ಹತ್ತುವಾಗ ಮಹಿಳೆಯ ಸರ ಅಪಹರಣ ಶಿವಮೊಗ್ಗ: ತಮ್ಮ ಮಗಳನ್ನು ಭೇಟಿಯಾಗಲು ಮೈಸೂರಿಗೆ ಪ್ರಯಾಣ ಬೆಳೆಸಿದ್ದ ಶಿವಮೊಗ್ಗದ 63 ವರ್ಷದ ವೃದ್ಧೆ ಯೊಬ್ಬರು ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಧ್ಯರಾತ್ರಿ ಮಾಂಗಲ್ಯ ಸರ ಕಳೆದುಕೊಂಡಿರುವ ಘಟನೆ ನಡೆದಿದೆ. ಪ್ರಯಾಣಕ್ಕಾಗಿ ಬಸ್ ಹತ್ತುತ್ತಿದ್ದಾಗ ನಿಲ್ದಾಣದಲ್ಲಿ ಭಾರೀ ಜನದಟ್ಟಣೆ ಇತ್ತು. ಜನದಟ್ಟಣೆಯ ಮಧ್ಯೆ ಬಸ್‌ನಲ್ಲಿ ಸೀಟು ಹಿಡಿಯಲು ಮುಂದಾಗಿದ್ದ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ. ಬಸ್‌ನಲ್ಲಿ ಸೀಟು ಹಿಡಿದ ಬಳಿಕ ರಾತ್ರಿ…

Read More

18 ಕೊಲೆ,20 ಅತ್ಯಾಚಾರದ ಆರೋಪಿ ವಿಕೃತಕಾಮಿ ಉಮೇಶ್ ರೆಡ್ಡಿಯ ಗಲ್ಲು ಶಿಕ್ಷೆ ರದ್ದು!!!!!!!|Umesh Reddy

ಕರ್ನಾಟಕ ಹೈಕೋರ್ಟ್ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ (CJI) ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸುಮಾರು ಹತ್ತು ವರ್ಷಗಳ ಕಾಲ ಅಕ್ರಮ ಏಕಾಂತವಾಸವನ್ನು ಪರಿಗಣಿಸಿ ವಿಕೃತ ಕಾಮಿ ಉಮೇಶ್‌ ರೆಡ್ಡಿಯ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.  1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು…

Read More

ಶಿವಮೊಗ್ಗಕ್ಕೂ ಕಾಲಿಟ್ಟ ಹಿಜಾಬ್​ ವಿವಾದ: ಕೇಸರಿ ಶಾಲು ಧರಿಸಿ ಬಂದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು

 ಶಿವಮೊಗ್ಗಕ್ಕೂ ಹಿಜಾಬ್ ಹಾಗೂ ಕೇಸರಿ ಶಾಲು​ ವಿವಾದ ಕಾಲಿಟ್ಟಿದ್ದು, ಇಂದು ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಶಿವಮೊಗ್ಗದ ವಿದ್ಯಾನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನಲ್ಲಿ ಹಿಜಾಬ್​​ಗೆ ಅವಕಾಶ ನೀಡದಂತೆ, ಹಾಗೂ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳ ಹೊರಗಿಡುವಂತೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಮನವೊಲಿಸಲು ಕಾಲೇಜಿನ ಪ್ರಾಂಶುಪಾಲರು ಪ್ರಯತ್ನಿಸಿದ್ದು, ಈ ವೇಳೆ ವಿದ್ಯಾರ್ಥಿಳು ವಂದೇ ಮಾತರಂ ಹಾಗೂ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸಹ್ಯಾದ್ರಿ ವಾಣಿಜ್ಯ…

Read More

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು. ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ  ಸಭಾ ಸದಸ್ಯ ಟಿಪ್​…

Read More

Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು

Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಸರ್ಕಾರಿ ಶಾಲಾ ಆವರಣದಲ್ಲಿ ಇಂದು ನಡೆದ ಸುಣ್ಣಬಣ್ಣ ಅಭಿಯಾನವು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹೌದು… ಕಾನೂನು ಸುವ್ಯವಸ್ಥೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪಟ್ಟಣದ ಪೊಲೀಸ್ ಸಿಬ್ಬಂದಿಗಳು ಇಂದು ಬೆಳಿಗ್ಗೆ ಠಾಣೆಯಲ್ಲಿ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಸಮವಸ್ತ್ರ ಕಳಚಿಟ್ಟು ಏಳು ದಶಕಗಳ ಇತಿಹಾಸವಿರುವ ಸರ್ಕಾರಿ ಶಾಲೆಯ ಪುನರ್ ನವೀಕರಣಕ್ಕಾಗಿ ಶ್ರಮದಾನ ಮಾಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಭಾಜನರಾಗಿದ್ದಾರೆ. ಪಟ್ಟಣದ…

Read More

ತೀರ್ಥಹಳ್ಳಿ ತಾಲೂಕಿನ ವ್ಯಕ್ತಿಯೊಬ್ಬನಿಗೆ ಮಂಗನ ಖಾಯಿಲೆ (KFD) ಧೃಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಗುತ್ತಿಯಡೆಹಳ್ಳಿ  ಬಳಿಯ ಹಳ್ಳಿ ಬೈಲು ಗ್ರಾಮದ 54 ವರ್ಷದ ವ್ಯಕ್ತಿಗೆ ಕೆಎಫ್ಡಿ ಪಾಸಿಟಿವ್ ದೃಢಪಟ್ಟಿದೆ. ನಾಲ್ಕೈದು ದಿನದಿಂದ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಮಂಗನ ಖಾಯಿಲೆ ಇರುವುದು ಪತ್ತೆಯಾಗಿದೆ. ಜ್ವರ ಲಕ್ಷಣ ಇಲ್ಲದಿದ್ದರೂ ಎರಡು ದಿನ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ನಿಗಾದಲ್ಲಿಡಲಾಗಿತ್ತು. ಅವರ ಮನೆಯ ಉಳಿದ ಸದಸ್ಯರಿಗೆ ಯಾವುದೇ ಲಕ್ಷಣಗಳಿಲ್ಲ. ಆ ಊರಿನ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಡಿಎಚ್ಒ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದರು.

Read More