Headlines

ಹಂದಿ ಅಣ್ಣಿ‌ ಹತ್ಯೆ ಆರೋಪಿಗಳ ಮೇಲಿನ ದಾಳಿ ಪ್ರಕರಣ – ತಮಿಳ್ ರಮೇಶ್ ಮತ್ತು ದೀಪು ಬೆಂಗಳೂರಲ್ಲಿ ಸೆರೆಂಡರ್|surrender

ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದ ಡಬ್ಬಲ್​ ಅಟ್ಯಾಕ್ ಪ್ರಕರಣ ಸಂಬಂಧ  ದಾವಣಗೆರೆ ಪೊಲೀಸರು ಆರೋಪಿಗಳು ತನಿಖೆ ಇನ್ನೂ ಸಹ ಮುಂದುವರಿಸಿದ್ದಾರೆ. ಈ ಮಧ್ಯೆ ಆಂಧ್ರದಲ್ಲಿ ಆರೋಪಿಗಳು ಸೆರೆಂಡರ್ ಆಗಿದ್ದರು ಎಂಬ ಫೇಕ್​ ನ್ಯೂಸ್​ನ್ನ ಕೂಡ ಉದ್ದೇಶ ಪೂರ್ವಕ ಕಾಣದ ಕೈಯ್ಯೊಂದು ಹರಿಬಿಟ್ಟಿತ್ತು. ಆದರೆ ಇದೇ ಶರಣಾಗತಿ ಸುದ್ದಿ ಇದೀಗ ನಿಜವಾಗಿದೆ. ಕಳೆದ ಮಾರ್ಚ್ 15 ರಂದು ಹಂದಿ ಅಣ್ಣಿ ಕೊಲೆಯ ಆರೋಪಿಗಳಾದ ಆಂಜನೇಯ ಮತ್ತು ಮಧು ಮೇಲೆ ತಮಿಳ್ ರಮೇಶ್​ ನ ಗ್ಯಾಂಗ್ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು….

Read More

Coffee shop ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವೀಡಿಯೋ – ಶಿವಮೊಗ್ಗ ಮೂಲದ ಆರೋಪಿಯ ಬಂಧನ

Coffee shop ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವೀಡಿಯೋ – ಶಿವಮೊಗ್ಗ ಮೂಲದ ಆರೋಪಿಯ ಬಂಧನ ಕಾಫಿ ಶಾಪ್ ನ ವಾಶ್ ರೂಮ್ ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ ಬಂಧಿತ ಆರೋಪಿ. ಬೆಂಗಳೂರಿನ ಬಿಇಎಲ್ ರಸ್ತೆಯ ಥರ್ಡ್ ವೇವ್ ಕೆಫೆಯಲ್ಲಿ ಈ ಘಟನೆ ನಡೆದಿದೆ. ಕೆಫೆಯಲ್ಲಿ ಕಾಫಿ ಮೇಕರ್ ಆಗಿದ್ದ ಮನೋಜ್ ತನ್ನ ಮೊಬೈಲ್ ನ್ನು ಫ್ಲೈಟ್ ಮೋಡ್ ನಲ್ಲಿ…

Read More

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ ಬೆಂಗಳೂರು:ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ ಹೆಸರಿನ ಭದ್ರತಾ ಪಡೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

Read More

HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಮ್ನ್ ನ ಬೈಸರನ್ ವ್ಯಾಲಿಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ದಾಳಿಯನ್ನು ಹೊಸನಗರ ತಾಲೂಕಿನ ವಿವಿಧ ಹಿಂದುಪರ ಸಂಘಟನೆ ಗಳು ತೀವ್ರವಾಗಿ ಖಂಡಿಸಿದ್ದಲ್ಲದೆ ಭಯೋತ್ಪಾದಕ ಸಂಘಟನೆಗಳನ್ನು ಮೂಲದಿಂದ ನಿರ್ನಾಮ ಮಾಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು. ಪ್ರತಿಭಟನಾ ಮೆರವಣಿಗೆಗು ಮುನ್ನ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ದೇವಾನಂದ್ ವಿಶ್ವಕ್ಕೆ  ಶಾಂತಿಯ ಸಂದೇಶವನ್ನು ನೀಡುತ್ತಿರುವಂತಹ ಭಾರತಕ್ಕೆ…

Read More

ವಲಯ ಮಟ್ಟದ ಕ್ರೀಡಾಕೂಟ – ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ|Rpet news

ವಲಯ ಮಟ್ಟದ ಕ್ರೀಡಾಕೂಟ – ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ ರಿಪ್ಪನ್‌ಪೇಟೆ : ಹೆದ್ದಾರಿಪುರದಲ್ಲಿ ಬುಧವಾರ ನಡೆದ ವಲಯ ಮಟ್ಟದ ಪ್ರೌಢಶಾಲೆಯ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬಾಲಕರ ಹಾಗೂ ಬಾಲಕಿಯರ ಖೋಖೋ ಪಂದ್ಯಾವಳಿಯಲ್ಲಿ ಬಾಲಕರ ತಂಡ ಪ್ರಥಮ,ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದರೆ,ಥ್ರೋ ಬಾಲ್ ನಲ್ಲಿ ಬಾಲಕರ ತಂಡ…

Read More

ಭದ್ರಾವತಿಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆ ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ:

ಭದ್ರಾವತಿ : ತಾಲ್ಲೂಕಿನ ಕಡದಕಟ್ಟೆಯ ನವಚೇತನ ಕನ್ನಡ ಹಿ.ಪ್ರಾ.ಶಾಲೆಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ ಲಭಿಸಿದೆ. ಧಾರವಾಡದ ಚೇತನ್ ಫೌಂಡೇಶನ್  ವತಿಯಿಂದ ಡಾ.ಪಾಟೀಲ್ ಪುಟ್ಟಪ್ಪ  ಸಭಾಭವನದ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಂಡಿದ್ದ ದಸರಾ ಉತ್ಸವದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸೇವೆ ಹಾಗೂ ಕನ್ನಡ ಸಾಹಿತ್ಯದ ಸೇವೆ ಸಾಧನೆ ಪರಿಗಣಿಸಿ ಸಿ.ಎಚ್.ನಾಗೇಂದ್ರಪ್ಪರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read More

ಸ್ನೇಹಿತರ ನಡುವಿನ ಗಲಾಟೆ ಚೂರಿ ಇರಿತದಲ್ಲಿ ಅಂತ್ಯ : ಗಾಯಾಳು ಆಸ್ಪತ್ರೆಗೆ ದಾಖಲು-ಆರೋಪಿ ಪರಾರಿ|Stabbed

ಹೊಟೇಲ್ ನಲ್ಲಿ ಊಟ ಮಾಡುತಿದ್ದ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತು ಮಾತಲ್ಲೇ ಗಲಾಟೆಯಾಗಿ ಒಬ್ಬನಿಗೆ ಚೂರಿ ಇರಿತವಾಗಿರುವ ಘಟನೆ ನಡೆದಿದೆ. ಸಾಗರ ನಗರದ ಬಿ.ಎಚ್ ರಸ್ತೆಯ ಮಂಜುಶ್ರೀ ಹೋಟೆಲಿಗೆ ಗ್ರಾಹಕರಾಗಿ ಇಬ್ಬರು ಯುವಕರು ಬಂದಿದ್ದಾರೆ. ಅವರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದೆ. ಗಲಾಟೆ ತಾರಕಕ್ಕೇರಿ, ಒಬ್ಬ ಮತ್ತೊಬ್ಬನಿಗೆ ಚೂರಿಯಿಂದ ಚುಚ್ಚಿದ್ದಾನೆ. ಇರಿತಕ್ಕೆ ಒಳಗಾದವನನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಚೂರಿಯಿಂದ ಹಲ್ಲೆ ನಡೆಸಿದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.  ಘಟನಾ ಸ್ಥಳಕ್ಕೆ ಪೊಲೀಸರು ಬಂದು ಸ್ಥಳ ಪರಿಶೀಲನೆ…

Read More

ಅಡುಗೆ ಮಾಡುವ ವಿಚಾರಕ್ಕೆ ಜಗಳ : ಅತ್ತೆಯ ಮೈಮೇಲೆ ಬಿಸಿ ಅನ್ನದ ತಿಳಿ ಸುರಿದ ಸೊಸೆ

ಸಾಗರ: ಅಡುಗೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತೆ ಮತ್ತು ಸೊಸೆಯ ನಡುವೆ ಮಾತಿಗೆ ಮಾತು ಬೆಳೆದು ಸೊಸೆಯು ಅತ್ತೆಯ ಮೈಮೇಲೆ ಬಿಸಿ ಗಂಜಿಯ ತಿಳಿಯನ್ನು ಸುರಿದ ಘಟನೆ ಸಾಗರದ ಮುಳ್ಳಕೆರೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮುಳ್ಳಕೆರೆ ನಿವಾಸಿ ಪಾರ್ವತಮ್ಮ (58) ಎಂಬುವವರ ತಲೆ ಮೇಲೆ ಅವರ ಸೊಸೆ ನೇತ್ರಾ ಗಂಜಿ ಸುರಿದ ಪರಿಣಾಮ ತೀವ್ರ ಸುಟ್ಟ ಗಾಯಗಳಿಂದ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಸಿ ತಿಳಿಯನ್ನು ತಲೆ ಮೇಲೆ ಸುರಿಯುತ್ತಿದ್ದಂತೆ ಪಾರ್ವತಮ್ಮ ಅವರು ಜೋರಾಗಿ ಕೂಗಿಕೊಂಡು ಹೊರಗೆ…

Read More

ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ|volleyball

ರಿಪ್ಪನ್‌ಪೇಟೆ : ಬೆಂಗಳೂರಿನಲ್ಲಿ ನಡೆದ 14 ವರ್ಷದ ಒಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ಗಣೇಶ್ ಕೆ ಎನ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ನಾಗಸಂದ್ರದಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಭೀಮರಾಜ್ ಮತ್ತು ರೇಣುಕಾ ದಂಪತಿಗಳ…

Read More

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕಳೆದ ಕೆಲವು ವರ್ಷಗಳಿಂದ ಹಿಡಿದಿರುವ ಗ್ರಹಣ ಬಿಡುವ ಲಕ್ಷಣಗಳು ಗೋಚರಿಸುತ್ತಿದೆ. ಹೌದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ದಿಟ್ಟ ನಿರ್ಧಾರದಿಂದ ಸರ್ಕಾರಿ ಆಸ್ಪತ್ರೆಗೆ ಅಂಟಿದ ಗ್ರಹಣ ಕೊನೆಗೂ ಬಿಟ್ಟಿದೆ. ಇಂದಿನಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮೂರು ವೈದ್ಯರು ಕಾರ್ಯ ನಿರ್ವಹಿಸಲಿದ್ದು ದಿನದ 24 ಗಂಟೆಯೂ…

Read More