ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೂಡಾ ಶತಕ ದಾಟಿದ ಕೋವಿಡ್ ಪಾಸಿಟಿವ್ : 12 ಜನ ಗುಣಮುಖ

ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ ಶಿಕಾರಿಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ಪಟ್ಟಣದ ಹೊರವಲಯ ಕೊಟ್ಟ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಜೈನುಲ್ಲಾ ಬಿನ್‌ ಇಬ್ರಾಹಿಂ (26) ಮತ್ತು ಕೋಯಲ್ (18) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಕಾರು ಚಾಲಕ ಅಭಿಷೇಕ್ (24) ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ…

Read More

ವಿದ್ಯುತ್ ತಗುಲಿ ಇಬ್ಬರು ಸಾವು – ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ತೆರವಿನ ವೇಳೆ ನಡೆದ ದುರಂತ|electric-shock

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ಕಟಾವ್ ಮಾಡಲು ಹೋಗಿದ್ದ ಇಬ್ಬರು ಕರೆಂಟ್ ತಗುಲಿ ಸಾವನ್ನಪ್ಪಿದ್ಧಾರೆ.  ಶಿವಮೊಗ್ಗ ನಗರದ ಊರುಗಡೂರ್​ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ  ಓರ್ವರು ಗುಂಟೂರು ಮೂಲದ ಚಲ್ಲಾ ಸೋಮಶೇಖರ್ ಎಂದು ಗೊತ್ತಾಗಿದ್ದು, ಇನ್ನೊಬ್ಬರ ಸುಳಿವು ಸಿಗಬೇಕಿದೆ. ಘಟನೆಯಲ್ಲಿ ಮರ ಕಡಿಯುತ್ತಿರುವ ಸಂದರ್ಭದಲ್ಲಿ ಮೇನ್​ ಲೇನ್​ ಸಂಪರ್ಕಗೊಂಡಿದ್ದು, ಅದರಿಂದ ಹರಿದ ವಿದ್ಯುತ್ನಿಂದಾಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ತಕ್ಷಣವೇ ಸ್ಥಳೀಯರು 108 ಗೆ ಕರೆ ಮಾಡಿ ಆ್ಯಂಬುಲೆನ್ಸ್​ನ್ನ ಕರೆಸಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಇಬ್ಬರನ್ನು ಶಿಫ್ಟ್ ಮಾಡಲಾಗಿದ್ದು,…

Read More