ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ ಟಾಟಾ ಏಸ್ ವಾಹನವೊಂದಕ್ಕೆ ಬೆಂಕಿ ಹತ್ತಿಕೊಂಡು ಉರಿದು ಭಸ್ಮವಾಗಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ. ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹಾದಿಗಲ್ಲು ಗ್ರಾಮದಲ್ಲಿ ಇಂದು ಬೆಳಗಿನ ಜಾವ ಟಾಟಾ ಏಸ್ ವಾಹನವೊಂದು ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಹಾದಿಗಲ್ಲು – ಹುಂಚದ ಕಟ್ಟೆ ನಡುವಿನ ಮುನಿಯೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ವಾಹನವು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸೋಮವಾರ ಬೆಳಗಿನ ಜಾವ…

Read More

HOSANAGARA | ಚಲಿಸುತಿದ್ದ KSRTC ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ – ತಪ್ಪಿದ ಭಾರಿ ಅನಾಹುತ

HOSANAGARA | ಚಲಿಸುತಿದ್ದ KSRTC ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ – ತಪ್ಪಿದ ಭಾರಿ ಅನಾಹುತ ಚಲಿಸುತ್ತಿದ್ದ KSRTC ಬಸ್ ಮೇಲೆ ವಿದ್ಯುತ್ ಕಂಬವೊಂದು ಉರುಳಿಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದಲ್ಲಿ ನಡೆದಿದೆ. ಸಂಪೆಕಟ್ಟೆ – ನಿಟ್ಟೂರು ಮಾರ್ಗದಲ್ಲಿ ಚಲಿಸುತಿದ್ದ KSRTC ಬಸ್‌ನ ಹಿಂಬದಿಗೆ ತಂತಿ ಸಮೇತ ವಿದ್ಯುತ್ ಕಂಬ ಬಿದ್ದಿದೆ.ಅದೃಷ್ಟವಶಾತ್ ಈ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ಹೊಸನಗರ – ನಗರ ಮಾರ್ಗವಾಗಿ ಕೊಲ್ಲೂರು…

Read More

ಹೊಸನಗರ ತಾಲೂಕಿನ ಮರಳು ಮಾಫ಼ಿಯಾದ ಗರ್ಭಗುಡಿ – “ರಿಪಬ್ಲಿಕ್ ಆಫ್ ಹರಿದ್ರಾವತಿ”

ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು,ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬ “ರಿಪಬ್ಲಿಕ್ ಆಫ್ ಹರಿದ್ರಾವತಿ” ಅಧಿಪತ್ಯ ಘೋಷಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಹೌದು ಮಲೆನಾಡಿನಾದ್ಯಂತ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರು ಅಲ್ಪ ಮಟ್ಟಿಗೆ ಅದಕ್ಕೆ ಕಡಿವಾಣ ಹಾಕುವಲ್ಲಿ‌ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಯಶಸ್ವಿಯು ಆಗಿದೆ.ಆದರೆ ಹೊಸನಗರ ತಾಲೂಕಿನ ಹರಿದ್ರಾವತಿ ಎಂಬ ಸುಸಂಸ್ಕೃತ ಗ್ರಾಮದ ಶರಾವತಿ ಹಿನ್ನೀರಿನ ಕೆರೆಹಳ್ಳಿ ಪಾಯಿಂಟ್ ನಲ್ಲಿ ಸ್ಥಳೀಯ ಪ್ರಭಾವಿ…

Read More

ನೇಣು ಬಿಗಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡ ರಿಪ್ಪನ್‌ಪೇಟೆಯ ಯುವಕ ಸಚಿನ್ :

ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ನೇಣು ಬಿಗಿದುಕೊಂಡಿರುವ ಘಟನೆ ರಿಪ್ಪನ್‌ಪೇಟೆಯ ನೆಹರು ಬಡಾವಣೆಯಲ್ಲಿ ನಡೆದಿದೆ. ರಿಪ್ಪನ್ ಪೇಟೆ ಗವಟೂರು ಗ್ರಾಮದ ನೆಹರು ಬಡಾವಣೆಯ ನಿವಾಸಿ  ದಿ|| ಶ್ರೀನಿವಾಸ್ ರವರ ಪುತ್ರ ಯುವಕ ಸಚಿನ್(25) ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಾತ್ರಿ ಮನೆಯಲ್ಲಿ ತಾಯಿಯೊಂದಿಗೆ ಊಟ ಮುಗಿಸಿಕೊಂಡು ಪಕ್ಕದ ರೂಮಿನಲ್ಲಿ ಮಲಗಿದ್ದ ಸಚಿನ್ ಬೆಳಿಗ್ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತನ ಮರಣೋತ್ತರ ಪರೀಕ್ಷೆ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ…

Read More

ಬಿಜೆಪಿ ಪಕ್ಷದ ಯುವ ಮುಖಂಡನ ಬರ್ಬರ ಹತ್ಯೆ : ಶಿವಮೊಗ್ಗ ನಗರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ

ಬಿಜೆಪಿ ಯುವ ಮುಖಂಡನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ನೆಟ್ಟಾರು(32) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಫಾರ್ಮ್ ಹೊಂದಿರುವ ಪ್ರವೀಣ್ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಫಾರ್ಮ್ ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು…

Read More

mETA

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…

Read More

ತೀರ್ಥಹಳ್ಳಿ: ನವವಿವಾಹಿತೆಯನ್ನು ಬಲಿ ತೆಗೆದುಕೊಂಡ ನಾಯಿ ಚೈನ್…! ವಾಕಿಂಗ್ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು

ತೀರ್ಥಹಳ್ಳಿ: ಸಾಕುನಾಯಿಯನ್ನು ಕರೆದುಕೊಂಡು ವಾಯುವಿಹಾರಕ್ಕೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ನವ ವಿವಾಹಿತೆಯೊಬ್ಬಳು ಕೆರೆಗೆ  ಬಿದ್ದು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕು ಕೈಮರದಲ್ಲಿ ನಡೆದಿದೆ. ನಿಶ್ಮಿತಾ(26) ಮೃತ ವಿವಾಹಿತೆ.ತೀರ್ಥಹಳ್ಳಿಯ ಕೈಮರದ ನಾಗಪ್ಪ ಗೌಡ ಅವರ ಪುತ್ರ ಮಂಜುನಾಥ್ ಅವರ ಪತ್ನಿ ನಿಶ್ಮಿತಾ ಮೂಲತಃ ಹೊಸನಗರ ತಾಲೂಕು ಹುಲಿಕಲ್ ಗ್ರಾಮದವರು. ಕಳೆದ 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಶನಿವಾರ ಬೆಳಿಗ್ಗೆ ಸಾಕುನಾಯಿಯನ್ನು ಕರೆದುಕೊಂಡು ವಾಯು ವಿಹಾರಕ್ಕೆ ಹೋಗಿದ್ದಾಳೆ. ಈ ವೇಳೆ ಕರೆದಂಡೆ ಮೇಲೆ ಹೋಗುವಾಗ ನಾಯಿ ಚೈನ್ ಎಳೆದು ಓಡಿದೆ….

Read More

ಇಂಜಿನಿಯರ್ ಪತ್ನಿ ಕೊಲೆ ಪ್ರಕರಣದಲ್ಲಿ ಏಳು ಆರೋಪಿಗಳ ಬಂಧನ|arrested

ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ ಶಿವಮೊಗ್ಗ ನಗರದ ವಿಜಯನಗರದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ನಿಯನ್ನು ಕೊಲೆ ಮಾಡಿದ್ದ  ಪ್ರಕರಣವನ್ನು ಬೇಧಿಸಿರುವ ತುಂಗಾನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 33.74  ಲಕ್ಷ ನಗದು, 1 ಕಾರು 3 ಬೈಕ್ 7 ಹೊಸ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 41.14  ಲಕ್ಷ ರೂ. ಮೌಲ್ಯದ ನಗದು ಹಾಗೂ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ ಮಿಥುನ್‌ಕುಮಾರ್, ಮುಖ್ಯ ಆರೋಪಿ…

Read More

ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆ..!!|deadbody

ತೀರ್ಥಹಳ್ಳಿ : ಪಟ್ಟಣದ ಹೊಸ ಕೋರ್ಟ್ ಬಳಿ  ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. 4 ದಿನಗಳ ಹಿಂದೆಯೇ ಲಾರಿಯಲ್ಲೇ ಹೃದಯಾಘಾತದಿಂದ  ಸಾವನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯಿಂದ ಲಾರಿಯಲ್ಲಿ ಲೋಡ್ ತುಂಬಿಸಿಕೊಂಡು ಬಂದು ತೀರ್ಥಹಳ್ಳಿಯಲ್ಲಿ ಇಳಿಸಿ ರಾತ್ರಿ ಊಟ ಮಾಡಿ ಲಾರಿಯಲ್ಲಿ ಮಲಗಿದ್ದಾಗ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಅಂದಾಜು 50 ವರ್ಷದ ವ್ಯಕ್ತಿ ಎನ್ನಲಾಗುತಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜೆಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.  ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ!|accident

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಶಿವಮೊಗ್ಗ ಜಿಲ್ಲೆ  ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್-ಅರಹತೊಳಲು ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.  ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡ ಮೃತ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಒಂದೇ ಬೈಕ್‌ನಲ್ಲಿ ಪ್ರಯಾ ಣಿಸುತ್ತಿದ್ದ ವಿಕಾಸ್ (18), ಯಶ್ವಂತ‌(17) ಶಶಾಂಕ (17) ಸ್ಥಳದಲ್ಲೇ…

Read More