Headlines

BREAKING NEWS : ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ..! ಶಿವಮೊಗ್ಗ ಸುದ್ದಿಗೋಷ್ಠಿಯಲ್ಲೇ ರಾಜೀನಾಮೆ ಕೊಡ್ತಾರಾ ?

 ಬೆಳಗಾವಿ ಮೂಲಕ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಚ್ಚಿಸಿದ್ದು, ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮತ್ತೊಂದೆಡೆ ಸಚಿವ ಈಶ್ವರಪ್ಪ ತಲೆದಂಡಕ್ಕೆ ಒತ್ತಡ ಹೆಚ್ಚಾಗತೊಡಗಿದೆ. ಇದರ ಬೆನ್ನಲ್ಲೇ ಸಚಿವ ಈಶ್ವರಪ್ಪ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಹಿನ್ನೆಲೆ ಮೈಸೂರಿನಿಂದ ಶಿವಮೊಗ್ಗಕ್ಕೆ ಈಶ್ವರಪ್ಪ ಹೊರಟಿದ್ದು, ಮಧ್ಯಾಹ್ನ 12.30ಕ್ಕೆ ಆಗಮಿಸುವ ಸಾಧ್ಯತೆಯಿದೆ ಬಳಿಕ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂತೋಷ್‌ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಯಾವುದೇ…

Read More

ಅಧಿಕಾರ ಕಳೆದುಕೊಂಡು ಹಪಹಪಿಸುತ್ತಿರುವ ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ : ಬಿ ವೈ ವಿಜಯೇಂದ್ರ

ಶಿವಮೊಗ್ಗ : ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಮೇಲೆ ಭಾರತದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ. ಅವರ ಜನಪ್ರಿಯತೆ ಸಹಿಸದ ಕಾಂಗ್ರೆಸ್ ಅನಗತ್ಯ ಟೀಕೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ್ಣಿಸಿದರು.  ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮೋದಿ ಅವರ 71ನೇ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪಕ್ಷದ ವಿಶೇಷ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿ ಅವರು ದೇಶದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ ಉಗ್ರರರನ್ನು ಮಣಿಸಿದರು. 370ನೇ…

Read More

HUMCHA | ನವೋದಯ ಶಾಲೆ ಉಚಿತ ತರಬೇತಿ ಶಿಬಿರ ಉದ್ಘಾಟನೆ | ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯ ; ಮಂಜಪ್ಪ ಗುಳುಕೊಪ್ಪ

HUMCHA | ನವೋದಯ ಶಾಲೆ ಉಚಿತ ತರಬೇತಿ ಶಿಬಿರ ಉದ್ಘಾಟನೆ | ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯ ; ಮಂಜಪ್ಪ ಗುಳುಕೊಪ್ಪ ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯವಾಗಿದೆ.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಆಭ್ಯಾಸ ಮಾಡಿದಲ್ಲಿ ಮಾತ್ರ ಗುರಿ ತಲುಪಲು ಸಾದ್ಯ ಶಿಕ್ಷಣ ಶ್ರೇಷ್ಟ ನಾಗರೀಕರನ್ನಾಗಿ ಮಾಡುತ್ತದೆಂದು ನಿವೃತ್ತ  ಶಿಕ್ಷಕ ಮಂಜಪ್ಪ ಗುಳುಕೊಪ್ಪ ಹೇಳಿದರು. ಹುಂಚ ಶ್ರೀಪದ್ಮಾಂಬ ಪ್ರೌಢಶಾಲೆಯ ಶ್ರೀರಂಗರಾವ್ ಸಭಾಭವನದಲ್ಲಿ ಭಾನುವಾರ ಮಿಲನ ಆಲೂಮ್ನಿ ಅಸೋಸಿಯೇಷನ್‌ ವತಿಯಿಂದ ಆಯೋಜಿಸಲಾದ 5ನೇ ವರ್ಷದ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವಕರು ಸಾವು, ಓರ್ವ ಗಂಭೀರ|Accident

ಎರಡು ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಸಾಗರ ತಾಲೂಕಿನ ಹೊಸಂತೆ ಗೌತಮಪುರ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಚನ್ನಾಪುರದ ಪ್ರಮೋದ್(23) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆಸಿಫ್(21) ಎಂಬವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಪ್ರಮೋದ್ ತನ್ನ ಅಜ್ಜಿ 70 ವರ್ಷದ ದೇವಮ್ಮರನ್ನು ತ್ಯಾಗರ್ತಿಗೆ ಕರೆದುಕೊಂಡು ಹೋಗುತ್ತಿದ್ದರು. ಇವರು ಸಂಚರಿಸುತ್ತಿದ್ದ ಬೈಕ್ ಶಿವಮೊಗ್ಗದಿಂದ ಹೊಸಂತೆಗೆ ಬರುತ್ತಿದ್ದ ಆಸಿಫ್ ಅವರ ಬೈಕ್‍ ಮುಖಾಮುಖಿ ಢಿಕ್ಕಿಯಾಗಿದೆ. ಆಸಿಫ್ ಬೈಕಿನಲ್ಲಿದ್ದ ಶಿವಮೊಗ್ಗದ ತೌಸೀಫ್(20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,…

Read More

ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ಅರಸಾಳಿನ ನಮಿತಾ ಹೆಗಡೆ ಆಯ್ಕೆ|volleyball

ರಿಪ್ಪನ್ ಪೇಟೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ದಕ್ಷಿಣ ವಿಭಾಗದ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾವಳಿಯಲ್ಲಿ  ಕರ್ನಾಟಕವನ್ನು ಪ್ರತಿನಿಧಿಸುವ  ತಂಡದಲ್ಲಿ  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ನಮಿತಾ ಹೆಗಡೆ ಆಯ್ಕೆಯಾಗಿದ್ದಾರೆ. ಡಿಸೆಂಬರ್ 27 ರಿಂದ 31 ರವರೆಗೆ ಕೇರಳದ ಕೊಟ್ಟಾಯಂ ನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅರಸಾಳು ಗ್ರಾಮದ ನಿವಾಸಿಗಳಾದ ಸತೀಶ್ ಹೆಗ್ಡೆ ಮತ್ತು ಐಶ್ವರ್ಯ ದಂಪತಿಗಳ ಪುತ್ರಿಯಾದ ನಮಿತಾ ಹೆಗ್ಡೆ ಪ್ರಸ್ತುತ ಮಂಗಳೂರಿನ ಕೆನರಾ…

Read More

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್  ಟ್ಯಾಂಕರ್  ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ‌ ವ್ಯಕ್ತಿ ಮೃತ ದುರ್ದೇವಿ.   ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ  ಅರಣ್ಯ ಇಲಾಖೆಯ ನೌಕರ ಎದುರಾದಾಗ…

Read More

ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ :

ರಿಪ್ಪನ್‌ಪೇಟೆ : ಇಂದು ಶಾಸಕರು ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಸಾಗರದಿಂದ ರಿಪ್ಪನ್‌ಪೇಟೆ ಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿದ್ದ ಮಹಿಳೆಯೊಬ್ಬರನ್ನು ತಮ್ಮ ವಾಹನದಲ್ಲಿಯೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ನೆವಟೂರು ಸಮೀಪದ ಆನೆಕೆರೆ ಗ್ರಾಮದ ಬಳಿ, ದೀಪಾ (CRP ಆಚಾಪುರ ಕ್ಲಸ್ಟರ್, ಶಿಕ್ಷಣ ಇಲಾಖೆ) ಎಂಬುವವರು ಅಪಘಾತಗೊಂಡು, ತೀವ್ರ  ರಕ್ತಸ್ರಾವದಲ್ಲಿರುವುದನ್ನು ಗಮನಿಸಿದ ಶಾಸಕರು ಕೂಡಲೇ ತಮ್ಮ ವಾಹನ ನಿಲ್ಲಿಸಿ ಅವರನ್ನು ತಮ್ಮ ವಾಹನದಲ್ಲಿಯೇ ರಿಪ್ಪನಪೇಟೆ ಪ್ರಾ.ಆ. ಕೇಂದ್ರಕ್ಕೆ ಸಾಗಿಸಿ, ಚಿಕಿತ್ಸೆ…

Read More

ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ |112 police saved man life

ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಸಾಹಸದಿಂದಾಗಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ಜೀವ ಉಳಿದ ಘಟನೆ ಭಾನುವಾರ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ನಗರದ ಕೊಮ್ಮನಾಳು ಗ್ರಾಮದಲ್ಲಿ ನಡೆದಿದೆ. ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯೊಂದರ ಬಳಿ ಭಾರೀ ಮಳೆಯಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿತ್ತು. ಗುಡ್ಡದ ಮೇಲೆ ಬಿದ್ದ ಮಳೆಯ ನೀರು ರಸ್ತೆ ಮೇಲೆ ಹರಿದು ತಗ್ಗು ಪ್ರದೇಶಗಳಿಗೆ ನುಗ್ಗಿತ್ತು. ಈ ವೇಳೆ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಕೆಲಸ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ :

ಹೊಸನಗರ ವಿಧಾನಸಭಾ ಕ್ಷೇತ್ರವು ತಾಲ್ಲೂಕಿನಲ್ಲಿ 2001 ರ ಹಿಂದೆ ಅಸ್ತಿತ್ವದಲ್ಲಿತ್ತು. ಆದರೆ ನಂತರದ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯ ಸಮಯದಲ್ಲಿ ಹೊಸನಗರ ಕ್ಷೇತ್ರವನ್ನು ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ ಸೇರಿಸಿ ಹೊಸನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಾಗಿತ್ತು. ಇಂದು ಹೊಸನಗರ ತಾಲ್ಲೂಕಿನ ಎಲ್ಲ ಪಕ್ಷದ ನಾಯಕರು ಪಕ್ಷಾತೀತವಾಗಿ ಪಾಲ್ಗೊಂಡು ಮಾಜಿ ಶಾಸಕ ಬಿ.ಸ್ವಾಮಿರಾವ್‌ ರವರ ನೇತೃತ್ವದಲ್ಲಿ ಹಳೇ ಕೋರ್ಟ್ ರಸ್ತೆಯಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಹೊಸನಗರದ ತಹಶೀಲ್ದಾರ್‌ ಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು….

Read More

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೂಡಾ ಶತಕ ದಾಟಿದ ಕೋವಿಡ್ ಪಾಸಿಟಿವ್ : 12 ಜನ ಗುಣಮುಖ

ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ…

Read More