ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More

ನೀಲಕಂಠೇಶ್ವರ ಸಹಕಾರ ಸಂಘ ಚುನಾವಣೆ – ಗೆದ್ದು ಬೀಗಿದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದ ಬಣ | ಹಾಲಗದ್ದೆ ಉಮೇಶ್ ಬಣಕ್ಕೆ ಸೋಲು

ನೀಲಕಂಠೇಶ್ವರ ಸಹಕಾರ ಸಂಘ ಚುನಾವಣೆ – ಗೆದ್ದು ಬೀಗಿದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದ ಬಣ | ಹಾಲಗದ್ದೆ ಉಮೇಶ್ ಬಣಕ್ಕೆ ಸೋಲು ಹೊಸನಗರ : ತಾಲೂಕಿನ ನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ  ಸಂಘ ಚುನಾವಣೆಯಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದಲ್ಲಿ ಏಳು ಸ್ಥಾನಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. 12 ಸ್ಥಾನಗಳನ್ನು ಹೊಂದಿರುವ ನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದಲ್ಲಿ ಏಳು ಸ್ಥಾನಗಳನ್ನು ಪಡೆದು ಆಡಳಿತ…

Read More

ಸಾಗರದ ಬಳಿ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ:

ಸಾಗರ: ಇಲ್ಲಿನ ಗುಡ್ಡೆಕೌತಿ ಬಳಿ ಹತ್ತಿರ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ನಿನ್ನೆ ಮಧ್ಯಾಹ್ನದ ವೇಳೆ ತಲೆಕೊಟ್ಟು ಮೃತ ಪಟ್ಟಿದ ವ್ಯಕ್ತಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೋಕ್ ನ ನಾಗನೂರು ಬಸವರಾಜ್ (36) ಎಂದು ಗುರುತು ಪತ್ತೆಮಾಡಿ, ಸಾಗರದ ರೈಲ್ವೆ ಪೋಲೀಸರು ಆತನ ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದಾರೆ. ಮೃತ ಬಸವರಾಜ್ ಅವರು ಸಾಗರ ದ ಬಿ ಹೆಚ್ ರಸ್ತೆ ಯಲ್ಲಿ ನಂದಿನಿ ಹಾಲಿನ ಬೂತ್ ನಡೆಸುತಿದ್ದರು.ರೈಲಿಗೆ ಸಿಲುಕಿ ಸಾವನಪ್ಪಲು ಕಾರಣ ಏನು ಎಂಬುದನ್ನು ಪೊಲೀಸ್ ರು ತನಿಖೆ…

Read More

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ರೌಡಿ ಡಾಕ್ಟರ್

ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಡಾ ಪ್ರತಿಮಾ ರಂತಹ ವೈದ್ಯರು ಬಡವರಿಗೆ ಅತ್ಯುತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಜಿಲ್ಲೆಯಲ್ಲಿಯೇ ಹೆಸರು ಮಾಡಿದೆ ಎಂದರೆ ತಪ್ಪಾಗಲಾರದು ಆದರೆ ಇಲ್ಲಿರುವ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!! ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ…

Read More

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು ಸ್ನೇಹಿತನ ತೋಟದ ಮನೆಯಲ್ಲಿ ಪಾರ್ಟಿ ನಡೆಸಲು ತೆರಳಿದ್ದ ವೇಳೆ ತಾಲ್ಲೂಕಿನ ಯಡವಾಲದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಶನಿವಾರ ತಡರಾತ್ರಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯಡವಾಲ ಗ್ರಾಮದ ಕುಮಾರನಾಯ್ಜ ಅವರ ಪುತ್ರ, ಬಿ.ಕಾಂ ಓದುತ್ತಿದ್ದ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಚೌಡಮ್ಮನ ದೇವಸ್ಥಾನ ಸಮೀಪದ ನಿವಾಸಿ ವಿಜಯ್ ಅವರ ಪುತ್ರ ಚಿರಂಜೀವಿ (22) ಸಾವಿಗೀಡಾದವರು. ಸ್ನೇಹಿತ ಗೌತಮ್ ಸಹೋದರಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ಹೊಸನಗರ ಉಪ ವಿಭಾಗದ ರಿಪ್ಪನ್ ಪೇಟೆ ಶಾಖೆಯಲ್ಲಿ ತುರ್ತು ನಿರ್ವಹಣೆ ಇರುವುದರಿಂದ ನಾಳೆ (20-07-2022) ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ರಿಪ್ಪನ್‌ಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಾದ ಕೆಂಚನಾಲ,ಬೆಳ್ಳೂರು,ಗರ್ತಿಕೆರೆ,ಅರಸಾಳು,ಕೋಡೂರು ಮತ್ತು ಚಿಕ್ಕ ಜೇನಿ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ  9-30 ರಿಂದ ಸಂಜೆ 6 ರವರೆಗೆ  ವಿದ್ಯುತ್ ವ್ಯತ್ಯಯ ಇರುತ್ತದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ

ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…

Read More

ಆನಂದಪುರದಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ – ಮೆಗ್ಗಾನ್ ಗೆ ದಾಖಲು

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗಿತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಘಟನೆ ನೂತನ ಪೊಲೀಸ್ ಠಾಣೆಯ ಮುಂಭಾಗದ ತಿರುವಿನಲ್ಲಿ ನಡೆದಿದೆ. ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರಿಬ್ಬರು ಶಾಲೆ ಮುಗಿಸಿ ತಮ್ಮ ಊರಾದ ಮೊದ್ಲೇಸರ ಕಡೆಗೆ ನಡೆದುಕೊಂಡು ಹೋಗುತಿದ್ದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಮುಂಭಾಗದ ತಿರುವಿನಲ್ಲಿ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬರುತಿದ್ದ ಫೋರ್ಡ್ ಕಾರು(Ka 18 N 5812) ಮುಂಭಾಗದಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ…

Read More

ಆಸ್ತಿ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ :

ಸಾಗರ ತಾಲೂಕಿನ ಹುಲಿದೇವರಬನ ಸಮೀಪ ಸಣ್ಣಕೊಪ್ಪ ಗ್ರಾಮದ ಗುರುಬಸಪ್ಪ ಎಂಬ ವ್ಯಕ್ತಿಯು ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿ ಎದುರು ಪಾರ್ಟಿಗಳಿಗೆ ಸಮನ್ಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ಗುರುಬಸಪ್ಪ ರವರ ಮೇಲೆ  ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. >ಗುರುಬಸಪ್ಪ ಎಂಬ ವ್ಯಕ್ತಿಗೆ ಬೇಸೂರು ಗ್ರಾಮದ ಸರ್ವೆ ನಂಬರ್ 33 ರಲ್ಲಿ ಕುಟುಂಬದ ಹಿಸ್ಸೆ ಮೂಲಕ ಬರಬೇಕಾದ ಜಮೀನನ್ನು ಪಡೆಯುವ ಸಲುವಾಗಿ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಇದರಿಂದ ರೊಚ್ಚಿಗೆದ್ದ ಇದೇ  ಗ್ರಾಮದವರಾದ ರಾಮನಾಯ್ಕ,…

Read More

ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ!!!! – ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ|Sandmafia

ಗುರುವಾರ ರಾತ್ರಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪ ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಪಟಗುಪ್ಪ ಸೇರುವೆ ಬಳಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ KA 19 B 7450 ಮತ್ತು KA 15 8294 ನೋಂದಣಿ ಸಂಖ್ಯೆಯ ಎರಡು ಟಿಪ್ಪರ್ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರ್‌ಎಫ್‌ಓ ಎಂ. ರಾಘವೇಂದ್ರ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು ದಾಳಿಯಲ್ಲಿ ಉಪ ವಲಯ ಅರಣ್ಯಧಿಕಾರಿ ಯುವರಾಜ್, ಮೌನೇಶ್ ಬಿರದಾರ್,…

Read More