Headlines

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ ನ.28 ,29 ಮತ್ತು 30 ರಂದು ಅದ್ದೂರಿ ಸಿದ್ದತೆ | ಕೆಸರುಗದ್ದೆ ಓಟದ ಸ್ಪರ್ಧೆ , ಬಿಜೂ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ , ಪಟ್ಲ ಸತೀಶ್ ನೇತ್ರತ್ವದಲ್ಲಿ ಯಕ್ಷಗಾನ ರಿಪ್ಪನ್‌ಪೇಟೆ : 31 ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಸುಧೀರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ಲೀಲಾ…

Read More

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು -ಡಾ|| ಧನಂಜಯ ಕೆ ಬಿ|gfgc

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು  -ಡಾ|| ಧನಂಜಯ ಕೆ .ಬಿ. ರಿಪ್ಪನ್‌ಪೇಟೆ : ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಎನ್. ಆರ್. ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ  ಡಾ|| ಧನಂಜಯ ಕೆ .ಬಿ ಅಭಿಪ್ರಾಯಪಟ್ಟರು.  ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಿಪ್ಪನ್ ಪೇಟೆಯ ಅರ್ಥಶಾಸ್ತ್ರ ವೇದಿಕೆ ಹಾಗೂ ಐಕ್ಯೂಎಸಿ ಘಟಕದ  ವತಿಯಿಂದ  ಹಮ್ಮಿಕೊಳ್ಳಲಾಗಿದ್ದ ವಿಶೇಷ ಉಪನ್ಯಾಸ “ಕರ್ನಾಟಕ  ರಾಜ್ಯ ಮುಂಗಡ…

Read More

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು  ಭಾರಿ ಮಳೆ ಮತ್ತು ಗಾಳಿಗೆ ಜಾನುವಾರು ಕೊಟ್ಟಿಗೆ ಕುಸಿದು ಬಿದ್ದು ಒಂದು ಎಮ್ಮೆ ಸಾವನ್ನಪ್ಪಿ ಇನ್ನೆರಡು ಎಮ್ಮೆಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಕೆರೆಹಳ್ಳಿಯಲ್ಲಿ ನಡೆದಿದೆ.  ಕೆರೆಹಳ್ಳಿ ಗ್ರಾಮದ ಶಿವಾಜಿರಾವ್ ಎಂಬುವವರ ಮನೆಯ ಹಿಂಭಾಗದ ಕೊಟ್ಟಿಗೆ ಭಾರಿ ಮಳೆ ಗಾಳಿಗೆ ಕುಸಿದು ಬಿದ್ದು ಎಮ್ಮೆಯೊಂದು ಸಾವನ್ನಪೊಇರುವ ಘಟನೆ ನಡೆದಿದೆ.  ಶನಿವಾರ ಬೆಳಗಿನಜಾವ ನಾಲ್ಕು ಗಂಟೆಗೆ ಈ ಘಟನೆ ಸಂಭವಿಸಿದ್ದು…

Read More

ಅಮೃತ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆ

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಮಂಜುಳಾ ರಾಜು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಮಂಜುಳಾ ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ. 11 ಜನ ಸದಸ್ಯರಿರುವ ಗ್ರಾಮ ಪಂಚಾಯತಿ 2 ಕಾಂಗ್ರೆಸ್ ಸದಸ್ಯರಿದ್ದು 9 ಸ್ಥಾನ ಬಿಜೆಪಿ ಪಾಲಾಗಿತ್ತು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರ ನೇತೃತ್ವದಲ್ಲಿ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ರಿಪ್ಪನ್‌ಪೇಟೆ- ಹುಂಚಾ ಬಿಜೆಪಿ ಮಹಾಶಕ್ತಿ…

Read More

ರಿಪ್ಪನ್‌ಪೇಟೆ : ಅನಾಥ ನಾಯಿ ಮರಿಗಳ ಆರೈಕೆ – ಮಾನವೀಯತೆ ಮೆರೆದ ಪಶು ಪರಿವೀಕ್ಷಕ|rpet

ಮಾನವೀಯತೆ ಮೆರೆದ  ಪಶು ಪರಿವೀಕ್ಷಕ ವಿ ರಂಗಪ್ಪ ರಿಪ್ಪನ್ ಪೇಟೆ : ಪೊದೆಯೊಂದರಲ್ಲಿ ಐದು ಮರಿಗಳಿಗೆ ಜನ್ಮವಿತ್ತ ಬೀದಿ ನಾಯಿ  ಮೂರು ದಿನಗಳ ಒಳಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು.ಇನ್ನೂ ಕಣ್ಣು ಬಿಡದ ಆ ಮರಿಗಳಿಗೆ ಹಾಲುಣಿಸುವ ತಾಯಿ ಬಾರದಿದ್ದಾಗ ಹಸಿವಿನಿಂದ ಕಂಗೆಟ್ಟು ತೀರಾ ಹಠ ಮಾಡುವುದನ್ನು ಕಂಡು ದಾರಿ ಹೋಕರು ಗಮನಿಸಿ ಪಟ್ಟಣದ ಪಶು ವೈದ್ಯಕೀಯ ಪರಿವೀಕ್ಷಕ ವಿ ರಂಗಪ್ಪ ಅವರ ಗಮನಕ್ಕೆ ತಂದರು. ದಿಕ್ಕಿಲ್ಲದ ಆ ಐದು ಮರಿಗಳನ್ನು ಆಸ್ಪತ್ರೆಗೆ ತಂದು ರಟ್ಟಿನ ಬಾಕ್ಸ್ ನಲ್ಲಿ …

Read More

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ ಹೊಳೆಹೊನ್ನೂರು ಸಮೀಪದ ಅರಹತೊಳಲು- ಕೈಮರದಲ್ಲಿ ಅಡಿಕೆ ಗೋಡೌನ್‌ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 23 ಕ್ವಿಂಟಾಲ್‌ ಅಡಕೆ ಮುಟ್ಟುಗೋಲು ಹಾಕಿಕೊಂಡು ತೆರಿಗೆ ಕಟ್ಟುವಂತೆ ರೈತರಿಗೆ ನೋಟೀಸ್‌ ನೀಡಿದ್ದಾರೆ. ಚಂದ್ರಪ್ಪ ಎಂಬುವವರಿಗೆ ಸೇರಿದ ಗೋಡೌನ್‌ನಲ್ಲಿ ಸುಮಾರು 65 ಕ್ವಿಂಟಾಲ್‌ ಅಡಿಕೆ ದಾಸ್ತಾನು ಮಾಡಲಾಗಿದ್ದು, ಎಮ್ಮೆಹಟ್ಟಿ ಗ್ರಾಮದ ಕೋಟೇಶ್‌ ಎಂಬುವರಿಗೆ ಸೇರಿದ 23 ಕ್ವಿಂಟಾಲ್‌ ಅಡಿಕೆಯನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಾರಾಟ ಮಾಡಲು ಕ್ಯಾಂಟರ್‌ನಲ್ಲಿ ತುಂಬಿಸಲಾಗಿತ್ತು….

Read More

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ..??HMS

ರಿಪ್ಪನ್‌ಪೇಟೆ(Ripponpet) : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 56ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಗುರುವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಗುರುವಾರ ಸಂಜೆ ಮೆರವಣಿಗೆ ಹೊರಟು…

Read More

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ|HSN

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ ಹೊಸನಗರ : ಪಟ್ಟಣದ ನಗರ ರಸ್ತೆಯ ಲೋಕೋಪಯೋಗಿ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಅಧಿಕಾರಿಗಳ ಕಚೇರಿ ಸಂಪರ್ಕಿಸುವ ವೃತ್ತ ವನ್ನು ಸುಸಜ್ಜಿತವಾಗಿ ರಚಿಸಿ ಈ ವೃತ್ತವನ್ನು ಮುಂದೆ ಯುವರತ್ನ ಪುನೀತ್ ರಾಜಕುಮಾರ್ ನಾಮಕರಣ ಮಾಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ರವರು ಘೋಷಿಸಿದರು. ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ ಶರಣ ಸಾಹಿತ್ಯ ಸಮ್ಮೇಳನದ…

Read More

ಸಾಗರ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ : ಲಾರಿ ಕದ್ದು ಪರಾರಿಯಾದವರು 10 ದಿನಗಳಲ್ಲೇ ಅರೆಸ್ಟ್…!

ಸಾಗರ: ಅಂದಾಜು 7.50 ಲಕ್ಷ ಮೌಲ್ಯದ ಲಾರಿಯನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಪ್ರಕರಣ ದಾಖಲಾದ ಹತ್ತೇ ದಿನಗಳಲ್ಲಿ ಪತ್ತೆ ಹಚ್ಚಲು ಯಶಸ್ವಿಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ನಿವಾಸಿ ಬಿ.ಕೆ.ಕರಿಬಸಪ್ಪ ಅಲಿಯಾಸ್ ಕರಿಯ(32) ಎಂಬಾತನೇ  ಬಂಧಿತ ಆರೋಪಿ. ಈತನ ಬಳಿಯಿಂದ ಕದ್ದಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ವಿವರ: ಆನಂದಪುರ ದಾಸಕೊಪ್ಪ ಗ್ರಾಮದ ವಾಸಿಯೊಬ್ಬರ ಲಾರಿಯನ್ನು ಮಾರ್ಚ್ 3ರಂದು ರಾತ್ರಿ ಹೊತ್ತಲ್ಲಿ ಕಳ್ಳತನ ಮಾಡಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಸಾಗರ ಗ್ರಾಮಾಂತರ ಠಾಣೆಯ ವೇರಿ ಸ್ಮಾರ್ಟ್…

Read More