Headlines

ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಉರುಳಿದ ಕಾರು :

ಕೊಲ್ಲೂರು ಘಾಟಿಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು‌ ಪ್ರಪಾತಕ್ಕೆ ಬಿದ್ದ ಘಟನೆ ವರದಿಯಾಗಿದೆ. ಮಾರುತಿ (KA 01 MS 1399) ಕಾರೊಂದು ನಿನ್ನೆ ಘಾಟಿಯಲ್ಲಿ ಸುಮಾರು 200 ಅಡಿ ಆಳಕ್ಕೆ ಬಿದ್ದಿದೆ.ಕಾರಿನಲ್ಲಿ ಡ್ರೈವರ್ ಒಬ್ಬನೇ ಪ್ರಯಾಣಿಸುತಿದ್ದ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತಗಳು ನಡೆದಿಲ್ಲ.ಸೀಟ್ ಬೆಲ್ಟ್ ಧರಿಸಿದ್ದರಿಂದ​ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕ್ರೇನ್ ಮೂಲಕ ಕಾರನ್ನು ಮೇಲಕ್ಕೆತ್ತಲಾಗಿದ್ದು ಕಾರು ಸಂಪೂರ್ಣ ನಜುಗುಜ್ಜಾಗಿದೆ. ಈ ಘಾಟ್ ಪ್ರದೇಶದಲ್ಲಿ ಮಳೆಯಿಂದಾಗಿ ರಸ್ತೆಯಲ್ಲಿ ಪಾಚಿ ಕಟ್ಟುತ್ತಿದ್ದು ಜಾರುತ್ತಿದೆ. ಇದರಿಂದಾಗಿ ವಾಹನ ಸವಾರರು ಜಾಗೃತೆಯಿಂದ…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ (ಡಿಸಿಸಿ ಬ್ಯಾಂಕ್) ನೂತನ ನಿರ್ದೇಶಕರಾದ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರಾದ  ಶ್ರೀಕಾಂತ್ ರವರು ಇಂದು ರಿಪ್ಪನ್ ಪೇಟೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭಾನುವಾರ ವಿಶೇಷ ಭೇಟಿ ನೀಡಿದರು. ಪ್ರದೇಶದ ಸಹಕಾರ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ವ್ಯಕ್ತಿತ್ವಗಳನ್ನು ಗುರುತಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸನ್ಮಾನ ಕಾರ್ಯಕ್ರಮದಲ್ಲಿ,…

Read More

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ ಸಿನಿಮಾ ಶೈಲಿಯಲ್ಲಿ ಬೇಕರಿಗೆ ನುಗ್ಗಿ ಮನಬಂದಂತೆ ಓರ್ವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವಂತಹ ಘಟನೆ ಶನಿವಾರ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ. ಚನ್ನಪ್ಪ ಹುಸೇನಪ್ಪ ನಾರಿನಾಳ (35) ಹತ್ಯೆಗೊಳಗಾದ ವ್ಯಕ್ತಿ. ಚನ್ನಪ್ಪ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ದುಷ್ಕರ್ಮಿಗಳು ಬೇಕರಿಯಲ್ಲಿ ಅಟ್ಟಾಡಿಸಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಬಳಿಕ ಬೇಕರಿಯಿಂದ ಹೊರಗಡೆ ಎಳೆದುಕೊಂಡು ಹೋಗಿ ಕೊಲೆ…

Read More

2023ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲ : ಶಾರದ ಪೂರ್ಯನಾಯ್ಕ್

ಹೊಸನಗರ : 2023ರಲ್ಲಿ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿ ಆಗುವುದನ್ನು ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲವೆಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ಹೇಳಿದರು. ಪಟ್ಟಣದ ಗಾಯತ್ರಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು ಶಿವಮೊಗ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲು ಜೆಡಿಎಸ್ ಪಕ್ಷವು ಬೇರೂರಿ ಅತ್ಯಂತ ಕ್ರಿಯಾಶೀಲವಾಗಿ ಇದ್ದದ್ದು ಈ ಹೊಸನಗರ ತಾಲ್ಲೂಕಿನಲ್ಲಿ ಕೆಲ ರಾಜಕೀಯ ಸ್ಥಿತ್ಯಂತರಗಳಿಗೆ ಕಾರ್ಯಕರ್ತರು ಚದುರಿದ್ದು ಅವರನ್ನು…

Read More

ರಿಪ್ಪನ್ ಪೇಟೆ : ಪಟ್ಟಣದ ಹೃದಯ ಭಾಗದಲ್ಲಿ ಅನಾದಿ ಕಾಲದಿಂದ ಮೀಸಲಿಟ್ಟ ಜಾಗದಲ್ಲೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ :

ರಿಪ್ಪನ್ ಪೇಟೆ : ಪಟ್ಟಣದ ಬಹು ನಿರೀಕ್ಷಿತ ಬಸ್ ನಿಲ್ದಾಣಕ್ಕೆ ಸರ್ವೇ ನಂ  329 ರಲ್ಲಿ 1962 ರ ಸಾಲಿನಲ್ಲಿಯೇ ಮೀಸಲಿಟ್ಟು ಗ್ರಾಮ ಪಂಚಾಯತಿಯಲ್ಲಿ ನಿರ್ಣಯಿಸಲಾಗಿದೆ.ಬಸ್ ನಿಲ್ದಾಣದ ಸಂಬಂಧ ಅನೇಕ ಹೋರಾಟಗಳು ನಡೆದಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿತ್ತು. ಈಗ ಗ್ರಾಮ ಪಂಚಾಯತ್ ಅನ್ಯ ಉದ್ದೇಶಗಳ ಬಳಕೆಗೆ ಈ ಸ್ಥಳದಲ್ಲಿ ಅವಕಾಶ ನೀಡದೇ ಪಟ್ಟಣದ ಹೃದಯ ಭಾಗದಲ್ಲೆ ಸುಸಜ್ಜಿತವಾದ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕೆಂದು ಹೊಸನಗರ ತಾಲೂಕ್ ಜನಪರ ವೇದಿಕೆ ಅಧ್ಯಕ್ಷರಾದ ಆರ್ ಎನ್…

Read More

ಹಿಂಡ್ಲೆಮನೆ ಕೆ.ಎಂ.ಗೋಪಾಲಾಚಾರ್ಯ ನಿಧನ

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ವಾಸಿ ಕೆ.ಎಂ. ಗೋಪಾಲಾಚಾರ್ಯ (76) ಶನಿವಾರ ನಿಧನರಾದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆದರು. ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಇಂದು ಸಂಜೆ ಹಿಂಡ್ಲೆಮನೆಯ ಮೃತರ ಜಮೀನಿನಲ್ಲಿ ನೆರವೇರಿತು.

Read More

ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ರಿಪ್ಪನ್ ಪೇಟೆಯ ಡಾ. ಜೆ ಜಿ ಮಂಜುನಾಥ್

 ರಿಪ್ಪನ್ ಪೇಟೆ : ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್‌ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ.ಜಿ ಮಂಜುನಾಥರವರು ಮತ್ತೊಮ್ಮೆ ಸ್ಥಾನಪಡೆದಿದ್ದಾರೆ.  ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಕೊಡಗು ಜಿಲ್ಲೆ ಮಡಿಕೇರಿಯಲ್ಲಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ  ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ. ಮಂಜುನಾಥ್ ಅವರು 2021ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 24574ನೇ ಸ್ಥಾನವನ್ನು ಪಡೆಯುವ ಮೂಲಕ ಮತ್ತು ವಿಶ್ವದ ವ್ಯಕ್ತಿ…

Read More

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ|arasalu

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳಿನ ರೈಲು ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿಸಿದ್ದು ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ರೈಲ್ವೆ ಇಲಾಖೆ 2 ತಿಂಗಳು ಪ್ರಾಯೋಗಿಕವಾಗಿವಾಗಿ ಈ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಆದೇಶ ನೀಡಿದ್ದು ಈ ಪ್ರಾಯೋಗಿಕ ಸಮಯದಲ್ಲಿ ಈ ನಿಲ್ದಾಣದಲ್ಲಿ ಪ್ರಯಾಣಿಸುವ ಜನಸಾಂದ್ರತೆ ಹೆಚ್ಚಿದ್ದಲ್ಲಿ ಮಾತ್ರ ರೈಲು ನಿಲುಗಡೆಯನ್ನು…

Read More

ತಮ್ಮ ಕಾರ್ಯಕ್ಷೇತ್ರದ ಅಭಿವೃದ್ಧಿಗೆ ಸೇವಾ ಪ್ರೀತಿಯಿಂದ ಸೇವಾ ಪ್ರತಿನಿಧಿಯಾಗಿ ಹೊರ ಹೊಮ್ಮಬೇಕು : ಡಾ. ಡಿ ವೀರೇಂದ್ರ ಹೆಗ್ಗಡೆ

ಹುಂಚ : ತಮ್ಮ ಕಾರ್ಯಕ್ಷೇತ್ರದ ಅಭಿವದ್ಧಿಗೆ ಸೇವಾ ಪ್ರೀತಿಯಿಂದ ಸೇವಾ ಪ್ರತಿನಿಧಿಯಾಗಿ ಹೊರಹೊಮ್ಮಬೇಕು ಎಂದು ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರು. ಹುಂಚ ಗ್ರಾಮದಲ್ಲಿ ಹೊಸನಗರ ತಾಲ್ಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವದ್ಧಿ ಯೋಜನೆಯ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆಯನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾರ್ಗದರ್ಶನ ನೀಡಿದ ಅವರು ಹೊಸನಗರ ತಾಲ್ಲೂಕಿನಲ್ಲಿ ಬಡವರ ಆರ್ಥಿಕ ಅಭಿವೃದ್ಧಿಗೆ ಯೋಜನೆಯ ಮುಖೇನ ಸ್ವಸಹಾಯ ಸಂಘದ ಚಳುವಳಿ ಬಹಳ ಅರ್ಥಪೂರ್ಣವಾಗಿ ಸಾಗುತ್ತಿದೆ ಇದರೊಂದಿಗೆ ಈ ಭಾಗದ ಕೃಷಿ ಮತ್ತು ಕೃಷಿಯೇತರ…

Read More

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ ಶಿವಮೊಗ್ಗ/ ಸಿದ್ದಾಪುರ: ಮೂರು ದಿನಗಳ ಹಿಂದೆ ಶಿವಮೊಗ್ಗ ಕುಂದಾಪುರ ರೋಡ್​ನಲ್ಲಿಯೇ ಬಾಳೆಬರೆ ಘಾಟಿ ಇಳಿದು ಹೊಸಂಗಡಿ ಸಿದ್ದಾಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಒಂಟಿ ಸಲಗ ಕೊನೆಗೂ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದೆ. ಈ ಆನೆಯನ್ನು ಹಿಡಿಯಲು 150ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರು. ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ತಂಡದ…

Read More
Exit mobile version