Headlines

ಪೋಟೋ ಕ್ಲಿಕ್‌ ಮಾಡುವಾಗ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವು|photographer

ಸಾಗರ ನಗರದ ವೃತ್ತಿನಿರತ ಫೋಟೊಗ್ರಾಫರ್ ಒಬ್ಬರು ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು ಇಲ್ಲಿನ ರಾಮನಗರದ ನಿವಾಸಿ ಚಂದ್ರು (42) ಮೃತ ದುರ್ದೈವಿ. ಕಾರ್ಯಕ್ರಮದಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಉಪವಿಭಾಗೀಯ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದಿದ್ದರು. ನಗರದ ಶಿಲ್ಪ ಸ್ಟುಡಿಯೋ ಮಾಲೀಕರಾಗಿದ್ದ…

Read More

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ನಡೆದಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದಿದ್ದ ಗಲಾಟೆ ವಿಕೋಪಕ್ಕೆ ತೆರಳಿ ಸ್ನೇಹಿತನೊಬ್ಬ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಸಾಗರ ನ್ಯಾಯಾಲಯ ಆದೇಶಿಸಿದೆ. ಗರ್ತಿಕೆರೆ ನಿವಾಸಿಗಳಾದ ಫಯಾಜ್ ಹಾಗೂ ಕೃಷ್ಣ ಎಂಬಾತನಿಗೆ ಜೀವಾವಧಿ…

Read More

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ ಸಾಗರ : ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ-ಮಗು ಆಸ್ಪತ್ರೆಯ ಪ್ರಸೂತಿ ವೈದ್ಯ ಡಾ. ನಾಗೇಂದ್ರಪ್ಪ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 1 ರಂದು ಲೋಕೇಶ್ ಎಂಬುವವರ ಪತ್ನಿಯನ್ನು ತಾಯಿ-ಮಗು ಆಸ್ಪತ್ರೆಗೆ ಸಂತಾನಹರಣ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.ಬೆಳಿಗ್ಗೆ 9.45 ಕ್ಕೆ ಡಾ. ನಾಗೇಂದ್ರಪ್ಪ ಶಸ್ತ್ರಚಿಕಿತ್ಸೆ ಮಾಡಿದ್ದರು….

Read More

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ 50 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಪ್ಪುಗುಡ್ಡೆ ಯಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬ ಕಡೆಗೆ ತೆರಳುತಿದ್ದ ಪೂರ್ಣಚಂದ್ರ ಎಂಬ ಖಾಸಗಿ  ಬಸ್‌ವೊಂದು ಕೆರೆಗೆ ಇಳಿದ ಘಟನೆಯೊಂದು ನಡೆದಿದೆ. ಕೊರಕೋಡು ಕ್ರಾಸ್‌ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಕೆರೆಗೆ ಇಳಿದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ…

Read More

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!|yoga

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!| ಶಿವಮೊಗ್ಗದ ಮಹಾನಗರ ಪಾಲಿಕೆ ‘ಶಿವಮೊಗ್ಗ ದಸರಾ’ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಯೋಗದ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಯು.ಟಿ ಖಾದರ್, ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ನನಗೆ ಮೊದಲಿನಿಂದಲೂ ಯೋಗದ ಪರಿಚಯವಿದೆ. ಯೋಗವನ್ನು ಎಲ್ಲರು ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದ್ದಾರೆ….

Read More

ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ನೆವಟೂರು ಗ್ರಾಮದಲ್ಲಿ ಜಮೀನಿನ ವಿಚಾರದಲ್ಲಿ ಅಮಾಯಕನೊಬ್ಬನ ಮೇಲೆ ನೆರೆಮನೆಯ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ನೆವಟೂರು ಗ್ರಾಮದ ನವೀನ್ ಕುಮಾರ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಗಾಯಾಳು ಮೆಗ್ಗಾನ್ ಗೆ ದಾಖಲಾಗಿದ್ದಾನೆ. ತನ್ನ ಜಮೀನಿನಲ್ಲಿ ಜೆಸಿಬಿ ಯಲ್ಲಿ ಟ್ರಂಚ್ ಹೊಡೆಸುತಿದ್ದ ಪಕ್ಕದ ಮನೆಯ  ಪದ್ಮನಾಭ ಎಂಬುವವರ ಬಳಿ ಯಾಕೆ ನನ್ನ ಜಾಗದಲ್ಲಿ ಟ್ರಂಚ್ ಮಾಡುತಿದ್ದೀರಿ ಎಂದು ಕೇಳಿದ್ದಕ್ಕೆ ಏಕಾಏಕಿ ಪಕ್ಕದ ಮನೆಯ ಪದ್ಮನಾಭ ಮತ್ತು ಆತನ ಮಗ…

Read More

SHIVAMOGGA | ಬ್ಲೂಮೂನ್ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ ರಸ್ತೆಯಲ್ಲಿರುವ ಬ್ಲೂಮೂನ್‌ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗದ ಸಾಗರ ರೋಡ್‌ನಲ್ಲಿ ಇಂದು ಸಂಜೆ ಇಬ್ಬರ ಮೇಲೆ ಮಾರಣಾಂತಿಕ ದಾಳಿ  ನಡೆದಿದೆ . ಇಲ್ಲಿನ ಬ್ಲೂಮೂನ್‌ ವೈನ್ಸ್‌ ಎದುರುಗಡೆ ಘಟನೆ ನಡೆದಿದ್ದು, ಇಬ್ಬರ ಮೇಲೆ ರಾಡ್‌ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಬ್ಬರ ಸ್ಥಿತಿಯು ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಹಲ್ಲೆ…

Read More

ರಿಪ್ಪನ್‌ಪೇಟೆಯಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ – ಪಂಚಾಯಿತಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

Severe drinking water crisis in Ripponpete Gram Panchayat limits has triggered public anger as borewells have dried up and authorities failed to provide tanker water, leaving residents struggling for basic needs. ರಿಪ್ಪನ್‌ಪೇಟೆ: ಕಳೆದ ಒಂದು ತಿಂಗಳಿನಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಗವಟೂರು, ಬರುವೆ, ಕೆರೆಹಳ್ಳಿ ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನಕ್ಕೆ ಒಂದೇ…

Read More

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ರಿಪ್ಪನ್‌ಪೇಟೆ : ನಮ್ಮ ಆತ್ಮ ಶುದ್ದೀಕರಣವಿದ್ದರೆ ಮಾತ್ರ ಅದು ಧರ್ಮವಾಗಿರುತ್ತದೆ, ಆಯಾ ಧರ್ಮದ ಸಾರವನ್ನು ಅರ್ಥ ಮಾಡಿಕೊಂಡು ಆ ಪ್ರಕಾರ ಜೀವನ ನಡೆಸಿದಲ್ಲಿ ಎಲ್ಲರೂ ಸಂತಸದಿಂದ ಬದುಕಿ ಬಾಳಬಹುದು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ಹೇಳಿದರು. ಪಟ್ಟಣದಲ್ಲಿ ಈದ್ ಮಿಲಾದ್ ಅಂಗವಾಗಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ಸೌಹಾರ್ಧ ಸಂಗಮ ಹಾಗೂ ಶಾಸಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನುದೇಶಿಸಿ ಅವರು ಮಾತನಾಡಿ…

Read More

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ holiday declared for schools and colleges across Hosanagara taluk today ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 04 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ,…

Read More