ರಿಪ್ಪನ್ ಪೇಟೆ ಸಮೀಪದ ಹರತಾಳು ಕ್ರಾಸ್ ನಲ್ಲಿ ಪಿಕಪ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ:

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಮದ ಹರತಾಳು  ಕ್ರಾಸ್ ಬಳಿ ಇಕೋ ಕಾರು ಮತ್ತು ಮಹೀಂದ್ರ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ರಿಪ್ಪನ್ ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತ್ತಿದ್ದ ಮಹೀಂದ್ರ ಪಿಕಪ್ (KA-15 A 2541) ವಾಹನ ಹಾಗೂ ಜೋಗ ಪ್ರವಾಸಕ್ಕೆಂದು ಬಂದು ವಾಪಸ್ ಬೆಳ್ತಂಗಡಿ ಗ್ರಾಮಕ್ಕೆ ತೆರಳುತ್ತಿದ್ದ ಇಕೋ ಕಾರು (KA-19 AB 8866) ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಬಾಳೂರು ಗ್ರಾಮದ ಹರತಾಳು ಕ್ರಾಸ್ ನಲ್ಲಿ ನಡೆದಿದೆ. ಅದೃಷ್ಟವಶಾತ್…

Read More

ಸರ್ವೇ ಇಲಾಖೆಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ|araga

ತೀರ್ಥಹಳ್ಳಿ ತಾಲೂಕಿನಲ್ಲಿ ಇತ್ತೀಚೆಗೆ ನಿರಂತರವಾಗಿ ರೈತರು ಮತ್ತು ಸಾರ್ವಜನಿಕರಿಂದ ತೀರ್ಥಹಳ್ಳಿಯ ಸರ್ವೇ ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ಅನೇಕ ಬಾರಿ ದೂರುಗಳು ಕೇಳಿ ಬಂದ ಮೇರೆಗೆ ಶನಿವಾರ ಸಂಜೆ ಸರ್ವೇ ಇಲಾಖೆಗೆ ಭೇಟಿ ನೀಡಿದ ಶಾಸಕರಾದ ಆರಗ ಜ್ಞಾನೇಂದ್ರ ರೈತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಅಕ್ರಮ ಭೂ ಮಂಜೂರಾತಿಗೆ ಸರ್ವೇ ಕಚೇರಿಯಲ್ಲಿ ಸಹಕರಿಸಿದ್ದಾರೆ ಎನ್ನುವ ದೂರು ಸ್ಥಳದಲ್ಲಿ ಕೇಳಿ ಬಂದ ಮೇರೆಗೆ ದಾಖಲೆಗಳೊಂದಿಗೆ ಸರ್ವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸರ್ವೇ ಇಲಾಖೆಯ ಕಮಿಷನ್…

Read More

ಮಾರುತಿಪುರ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿಯ ಮಹಾಪರ್ವ , ನುಡಿದಂತೆ ನಡೆದ ಶಾಸಕ ಬೇಳೂರು ಗೋಪಾಲಕೃಷ್ಣ – ಚಿದಂಬರಂ

Large-scale development works worth over ₹8 crore are underway in Marutipura Gram Panchayat of Hosanagar taluk, with former GP president H.P. Chidambaram praising MLA Belur Gopalakrishna for fulfilling his promises and prioritizing basic infrastructure. ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಿಂದೆಂದೂ ಕಾಣದಂತಹ ಅಭಿವೃದ್ಧಿಯ ಪರ್ವ ನಡೆಯುತ್ತಿದ್ದು, ವಿವಿಧ ಯೋಜನೆಗಳ ಮೂಲಕ ಸುಮಾರು 8 ಕೋಟಿ ರೂ.ಕ್ಕೂ ಅಧಿಕ ಮೊತ್ತದ ಕಾಮಗಾರಿಗಳಿಗೆ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಗಾಯಾಳು ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಮಾರುತಿ ಜೆನ್ ಕಾರು ಸೋಮವಾರ ರಾತ್ರಿ 11.00 ಗಂಟೆಯ ಸಮಯದಲ್ಲಿ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಮರದ ದಿಬ್ಬಗಳಿಗೆ ಡಿಕ್ಕಿಯಾಗಿ ನಂತರ ಕಾಂಪೌಂಡ್ ಗೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು ಎನ್ನಲಾಗುತ್ತಿದೆ. ಪಟ್ಟಣದಲ್ಲಿ ಜೆಸಿಬಿ…

Read More

ತೀರ್ಥಹಳ್ಳಿಯ ಶಾರೀಖ್ ಮನೆ ಈಡಿ ದಾಳಿ | ಕಿಮ್ಮನೆ ರತ್ನಾಕರ್ ಕಛೇರಿ ಮೇಲೂ ಈಡಿ ದಾಳಿ ನಡೀತಾ…..?????ಈ ಸುದ್ದಿ ನೋಡಿ

ಶಾರಿಕ್ ಮನೆ ಮೇಲೆ ಈಡಿ ತಂಡ ದಾಳಿ ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯ ಶಾರಿಕ್ ಅಜ್ಜಿಯ ಮನೆಯ ಮೇಲೆ ಈಡಿ ಅಧಿಕಾರಿಗಳ ತಂಡ ರೈಡ್ ಮಾಡಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ನೆಡೆಸಿದ್ದಾರೆ. ದಾಳಿಯ ಬಗ್ಗೆ ಅಧಿಕಾರಿಗಳು ಯಾವುದೇ ರೀತಿ ಮಾಹಿತಿ ನೀಡುತ್ತಿಲ್ಲ. ನಗರದಲ್ಲಿ ಹಲವು ಕಡೆ ಕಡೆ ಶೋಧ ಮಾಡುವ ಸಾಧ್ಯತೆ ಇದ್ದು ಈಗಾಗಲೇ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಕಿಮ್ಮನೆ ಕಚೇರಿ ಮೇಲೆ ದಾಳಿ ಮಾಡಿದ್ರ ಅಧಿಕಾರಿಗಳು ? ಶಾರಿಕ್ ಅಜ್ಜಿ ಮನೆಯ ಮೇಲೆ ದಾಳಿ…

Read More

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested in NR Pura taluk of Shivamogga district for allegedly transporting and selling cannabis. Police seized cannabis worth around ₹50,000 and two bikes. ಶಿವಮೊಗ್ಗ: ಮಳೆಯಿಂದಾಗಿ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ವೇಳೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ…

Read More

ಸೊರಬ ಪುರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆ

ಸೊರಬ: ಭಾರಿ ಕುತೂಹಲ ಮೂಡಿಸಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾದರು. ಶುಕ್ರವಾರ ನಡೆದ ಅಧ್ಯಕ್ಷರ ಚುನಾವಣೆಗೆ ಬಿಜೆಪಿಯಿಂದ ವೀರೇಶ್ ಮೇಸ್ತ್ರಿ, ಕಾಂಗ್ರೆಸ್‌ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ವೀರೇಶ್ ಮೇಸ್ತ್ರಿ 8 ಮತಗಳನ್ನು ಹಾಗೂ ಕಾಂಗ್ರೆಸ್‌ನ ಸುಲ್ತಾನಾ ಬೇಗಂ 4 ಮತಗಳನ್ನು ಪಡೆದರು. ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ವಿರುದ್ಧ ಸ್ವ‍ಪಕ್ಷದ ಸದಸ್ಯರೇ ಸೆ.27ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಇದರಿಂದ ಚುನಾವಣೆ ನಡೆಯಿತು.  ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ…

Read More

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು | GKB

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು ತುಮರಿ ಮತ್ತು ಹಸಿರುಮಕ್ಕಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕೇವಲ ಸೇತುವೆಯಲ್ಲ. ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಸಾಗರ ತಾಲೂಕಿನ ಅಂಬಾರಗೋಡ್ಲು ದಡದಲ್ಲಿ ಅಂಬಾರಗೋಡ್ಲುವಿನಿಂದ ಕಳಸವಳ್ಳಿಗೆ ಸಂಪರ್ಕಿಸುವ ಲಾಂಚ್ ಮಾರ್ಗದ ರ‍್ಯಾಂಪ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿ, ತುಮರಿ ಸೇತುವೆ ನಿರ್ಮಾಣ ಜನರ…

Read More

ಸುರಕ್ಷಿತ ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ

Road safety initiative carried out in Ripponpet police station limits as reflective radium stickers were installed from Kopparagundi Surulikoppa Nursery to Ammanghatta Cross under the leadership of PSI Raju Reddy to prevent accidents and improve night-time visibility. ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ ರಿಪ್ಪನಪೇಟೆ: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಸಂಚಾರ ಸುರಕ್ಷತೆ ಹೆಚ್ಚಿಸುವ…

Read More

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ ರಿಪ್ಪನ್‌ಪೇಟೆ:-ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರ ಕೃಷ್ಣಪಕ್ಷದ ನವಮಿಯಂದು ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಅಭೀಷ್ಠವರ ಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಇಷ್ಟಾರ್ಥನೆರವೇರಲು ಶ್ರದ್ಧಾ ಪೂರ್ವಕ ಪ್ರಾರ್ಥನೆ ಸಲ್ಲಿಸಿದರು. ಸೀರೆ-ಉಡಿ-ಫಲ-ಪುಷ್ಪ-ಧಾನ್ಯಗಳಿಂದ ಹರಕೆ ಪೂಜೆ ಸಮರ್ಪಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದ ಹೊಂಬುಜ ಮಠದಲ್ಲಿ ಇಂದು ನಡೆದ ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರದ ಧಾರ್ಮಿಕ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ…

Read More