Headlines

ಭ್ರಷ್ಟಾಚಾರದಿಂದ ತುಂಬಿತುಳುಕುತ್ತಿರುವ ರಿಪ್ಪನ್ ಪೇಟೆಯ ನಾಡಕಚೇರಿ! ಗ್ರಾಮಸ್ಥರ ಆಕ್ರೋಶ.

ರಿಪ್ಪನ್ ಪೇಟೆ :ಇಲ್ಲಿನ ನಾಡಕಛೇರಿ ರೈತಸ್ನೇಹಿಯಾಗಿರದೇ ಸುಲಿಗೆಕೋರರ ತಾಣವಾಗಿದೆ ಎಂದು ರಿಪ್ಪನ್ ಪೇಟೆಯ ಗ್ರಾಮಸ್ಥರು ಪಟ್ಟಣದ ನಾಡಕಛೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ಗವಟೂರು ಗ್ರಾಮದ ಸರ್ವೇ ನಂಬರ್ 413 ರ 11ಈ ನಕ್ಷೆ ನಾವಿಕರಣ ಕ್ಕೆ 30000 ಸಾವಿರ ರೂಪಾಯಿಗಳನ್ನು ಲಂಚ ತೆಗೆದುಕೊಂಡ ಸರ್ವೆ ಸುಪ್ರವೈಸರ್ ಅಧಿಕಾರಿ ಮಲ್ಲಿಕಾರ್ಜುನ್ ನವೀಕರಣ ಮಾಡದೇ ಮೋಸ ಮಾಡಿದ್ದಾರೆ ಎಂದು ರೈತ ಈಶ್ವರಪ್ಪ ಆರೋಪಿಸಿದ್ದಾರೆ. ನಾಡಕಛೇರಿ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿದ ಜೆಡಿಎಸ್ ಮುಖಂಡ ಆರ್ ಎನ್ ಮಂಜುನಾಥ್ ರಿಪ್ಪನ್…

Read More

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ ಏರಿಸೀಮೆ ಕಿರುಚಿತ್ರ ಈಗಾಗಲೇ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತಿದ್ದು ಮಲೆನಾಡಿನ ಯುವ ಪ್ರತಿಭೆ ಅಜಿತ್ ಸಿಂಹ ಅದ್ಬುತ ನಟನೆಗೆ ಯಾರು ತುಟಿಕ್ ಪಿಟಿಕ್ ಅನ್ನುವಂತಿಲ್ಲ. ಅಷ್ಟರಮಟ್ಟಿಗೆ  ಕಿರುಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಸತ್ಯ ರಾಧಕೃಷ್ಣರವರ ಸಂಗೀತ ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಮತ್ತು ಚಿತ್ರದೊಂದಿಗೆ ಬೆಸೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಆಹಾನ್ ಆ್ಯಕ್ಷನ್​​​ ಕಟ್​​ ಹೇಳಿರುವ ‘ಏರಿಸೀಮೆ’ಯಲ್ಲಿ ಅಜಿತ್ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೋನಾಲಿ…

Read More

ಶಾಸಕ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ

ರಿಪ್ಪನ್ ಪೇಟೆ :  ಹರತಾಳು ಗ್ರಾಮದಲ್ಲಿ ಸಾಗರ- ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂ ಎಸ್ ಐ ಎಲ್ ಅಧ್ಯಕ್ಷ ಹರತಾಳು ಹಾಲಪ್ಪರವರು ತಮ್ಮ ಕುಟುಂಬ ವರ್ಗದವರು, ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಭೂಮಿ ಹುಣ್ಣಿಮೆಯ ಹಬ್ಬವನ್ನು ತಮ್ಮ ಹೊಲದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ, ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದಾಗಿದ್ದು, ಭೂ ತಾಯಿ ಗರ್ಭಿಣಿಯೆಂಬ…

Read More

ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯುವಂತೆ ಇರಬೇಕು : ಹರತಾಳು ಹಾಲಪ್ಪ

ಶೈಕ್ಷಣಿಕ ಕೆಂದ್ರಗಳನ್ನು ಸುಸಜ್ಜಿತವಾಗಿ,ಶುಚಿತ್ವವಾಗಿ, ಸುಂದರವಾಗಿ ರೂಪುಗೊಳಿಸಬೇಕು ಕಾರಣ ಪರಿಸರವು ಅಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳ ಮನಸ್ಸಿನ  ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಎಂಎಸ್‌ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ 20 ಲಕ್ಷ ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರವೇಶ ರಸ್ತೆಯ ಕಾಮಗಾರಿಯ ಶಂಕುಸ್ಥಾಪನಾ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದಲ್ಲಿ ಮಾತನಾಡಿ ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿ, ಸಾರ್ವಜನಿಕರ ಗಮನ ಸೆಳೆಯುವಂತಿರಬೇಕು ಅದಕ್ಕಾಗಿ ಕಾಲೇಜಿಗೆ ದ್ವಿಪಥ ಆಗಮನ ಮತ್ತು ನಿರ್ಗಮನ ವ್ಯವಸ್ಥೆಯ ಸುಸಜ್ಜಿತ ರಸ್ತೆ…

Read More

ಹೆತ್ತ ತಾಯಿಯ ಮನೆಯಲ್ಲಿಯೇ ಕಳ್ಳತನ ಮಾಡಿದ ಮಗ – ಬಂಧನ|Theft

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗೋಪಾಳದ ಶ್ರೀರಾಮನಗರದ ಗಿರೀಶ್ ಅಲಿಯಾಸ್ ಸುಣ್ಣ ಬಂಧಿತ ಮನೆ ಕಳ್ಳ. ಆರೋಪಿಯು ತನ್ನ ತಾಯಿ ಮನೆಯಲ್ಲಿಲ್ಲದ ವೇಳೆ ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಗಿರೀಶ್​ ತಾಯಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗಿರೀಶ್​​ ಕದ್ದಿರುವ ಅನುಮಾನದಿಂದ ವಿಚಾರಣೆ ನಡೆಸಿದಾಗ ಕೃತ್ಯ ಒಪ್ಪಿಕೊಂಡಿದ್ದಾನೆ. ಈತ ಹಮಾಲಿ ಕೆಲಸ ಮಾಡುತ್ತಿದ್ದು,…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ( ಡಿಸಿಸಿ) ನ ಅಧ್ಯಕ್ಷರಾಗಿ ಆರ್.ಎಂ ಮಂಜುನಾಥಗೌಡ, ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆರ್ ಎಂ ಮಂಜುನಾಥ ಗೌಡ,ಉಪಾಧ್ಯಕ್ಷ ಸ್ಥಾನಕ್ಕೆ ಎಸ್ ಕೆ ಮರಿಯಪ್ಪ ನಾಮಪತ್ರ ಸಲ್ಲಿಸಿದ್ದು ಇತರೆ ಯಾರೋಬ್ಬರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಇವರನ್ನು ಅವಿರೋಧ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜ಼ೈರ್ ಕಾರು ದೂನ ಹಾಗೂ ಬೆನವಳ್ಳಿ ನಡುವೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ. ಕಾರಿನಲ್ಲಿ ಹೊಸನಗರ ಮೂಲದ ಕುಟುಂಬವೊಂದರ ಐವರು ಪ್ರಯಾಣಿಸುತಿದ್ದರು ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರವಾಗಿ ಮಹತ್ತರ ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು|airport

ಶಿವಮೊಗ್ಗ : ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ  ಕಾಮಗಾರಿ ಅಂತಿಮ ಹಂತದಲ್ಲಿದೆ. ಕೆಲವೇ ದಿನದಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆ ಹಿನ್ನೆಲೆ ಮತ್ತು ಕಾಮಗಾರಿಗೆ ತೊಡಕಾಗದಂತೆ ತಡೆಯಲು ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣ ವೀಕ್ಷಣೆಗೆ ನೂರಾರು ಜನ ನಿತ್ಯ ಬರುತ್ತಿದ್ದಾರೆ. ರನ್ ವೇ ಮೇಲೆ…

Read More

ಹೊಸನಗರ : ರೈತನ ಬೆಳೆ ನಾಶಪಡಿಸಿದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಆರಗ ಮತ್ತು ಹಾಲಪ್ಪ ನೇತ್ರತ್ವದಲ್ಲಿ ಅಹೋರಾತ್ರಿ ಧರಣಿ|hosanagar

ಹೊಸನಗರ : ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಲಾಗುತ್ತಿದೆ. ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು JCB ಯಂತ್ರದ ಮೂಲಕ ತೆರವುಗೊಳಿದ ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ…

Read More

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಪಾಳುಬಿದ್ದಿವೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಪೋಲೀಸ್ ವಸತಿಗೃಹಗಳು:

ಆನಂದಪುರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ಇಂದು ಸಂಪೂರ್ಣವಾಗಿ ಶಿಥಿಲಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಾಣುವಂತಹ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗದಲ್ಲಿ ನಿರ್ಮಿಸಿರುವಂತಹ 5 ಪೊಲೀಸ್ ವಸತಿ ಗೃಹಗಳು ಇದೀಗ ಸಂಪೂರ್ಣವಾಗಿ ಪಾಳು ಬಿದ್ದಿದ್ದು ಅನೈತಿಕ ಚಟುವಟಿಕೆಯ ಮುಖ್ಯ ತಾಣವಾಗಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದೆ. ಮದ್ಯವ್ಯಸನಿ ಗಳಿಗಂತೂ ಇದು ಅಡ್ಡವಾಗಿದ್ದು ಯಾವುದೇ ಭಯವಿಲ್ಲದೆ ವಸತಿಗೃಹದ…

Read More