Headlines

ಹಳೆಯ ದ್ವೇಷ : ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ

ಹಳೆಯ ದ್ವೇಷ : ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ 45 ವರ್ಷದ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಮೃತ ದುರ್ದೈವಿಯನ್ನು ಗಂಗಮ್ಮ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ನಾಗೇಶ್ ನಾಯ್ಕ ಮತ್ತು ಹರೀಶ್ ನಾಯ್ಕ ಎಂಬುವರನ್ನು ಪೊಲೀಸರು…

Read More

ರೈಲಿಗೆ ತಲೆವೊಡ್ಡಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ|train

ಶಿವಮೊಗ್ಗ : ಇಲ್ಲಿನ ವಿನೋಬ ನಗರದ  2ನೇ ಹಂತದ ಡೆಡ್ ಎಂಡ್‌ನಲ್ಲಿರುವ ರೈಲ್ವೆ ಟ್ರ್ಯಾಕ್ ಬಳಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್‌ (70)  ಮೃತ ದುರ್ದೈವಿ. ಡಿವಿಎಸ್ ಇಂಡಿಪೆಂಡೆಂಟ್ ಕಾಲೇಜಿನ ಫಿಸಿಕಲ್ ಡೈರೆಕ್ಟರ್ ಆಗಿದ್ದ ವಿಶ್ವನಾಥ್ ಅವರು 2013 ರಲ್ಲಿ ಉಪನ್ಯಾಸಕ ಹುದ್ದೆಯಿಂದ ನಿವೃತ್ತರಾಗಿದ್ದರು. ಸಾಲದಿಂದ ಬೇಸತ್ತು ರೈಲಿಗೆ ತಲೆವೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವನಾಥ್ ಅವರು ಬೆಂಗಳೂರಿನ ಮಗನ ಮನೆಯಿಂದ ಮೊನ್ನೆ ವಾಪಸ್ಸಾಗಿದ್ದರು. ನಂತರ ಸಹೋದರಿಯೊಂದಿಗೆ ಬೇಸರದಿಂದ ಮಾತನಾಡಿದ್ದರು ಎನ್ನಲಾಗಿದೆ….

Read More

Ripponpete | ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ – ಹರತಾಳು ಹಾಲಪ್ಪ

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಲಿಕ ಹಿನ್ನಲೆ ಅರಿವೇ ಇಲ್ಲದ.ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ ಆಂತವಳಿಗೆ ಮತದಾರರ ಮತಹಾಕಬೇಕಾ.? ಬಗರ್ ಹುಕುಂ ಆರಣ್ಯ ಹಕ್ಕು ಅಂದರೆ ಏನು ಎಂಬುದೇ ಗೊತ್ತಿಲ್ಲದವರು ಸಂಸತ್ ಪ್ರವೇಶ ಮಾಡಿದರೆ ಪ್ರಯೋಜನವಿಲ್ಲ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಅರಿವಿರುವಂತಹ ಬಿ.ವೈ.ರಾಘವೇಂದ್ರರನ್ನು ಬೆಂಬಲಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಮತದಾರರಲ್ಲಿ ಮನವಿ ಮಾಡಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ…

Read More

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್‌ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…

Read More

ಸಂತೆ ಮಾರ್ಕೆಟ್ ನಲ್ಲಿ ಪತ್ರಿಕಾಗೋಷ್ಠಿ: ಪೊಲೀಸ್ ಕ್ವಾರ್ಟರ್ಸ್ ರಸ್ತೆ ಕಾಮಗಾರಿಗೆ ತಡೆ ಆರೋಪಿಸಿ ಕೃಷ್ಣಪ್ಪ ಆಕ್ರೋಶ

ಸಂತೆ ಮಾರ್ಕೆಟ್ ನಲ್ಲಿ ಪತ್ರಿಕಾಗೋಷ್ಠಿ: ಪೊಲೀಸ್ ಕ್ವಾರ್ಟರ್ಸ್ ರಸ್ತೆ ಕಾಮಗಾರಿಗೆ ತಡೆ ಆರೋಪಿಸಿ ಕೃಷ್ಣಪ್ಪ ಆಕ್ರೋಶ Social activist T.R. Krishnappa alleged that police officials stopped the concrete road work leading to Ripponpet Police Quarters during a press meet held at Hosanagara Santhe Market. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಪೊಲೀಸ್ ಕ್ವಾರ್ಟರ್ಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಕಾಂಕ್ರೆಟ್ ರಸ್ತೆಯಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಪೊಲೀಸ್ ಅಧಿಕಾರಿಗಳು ತಡೆಹಿಡಿದಿರುವ ಘಟನೆ…

Read More

ಚಿಕನ್ ಅಂಗಡಿ ಮಾಲೀಕನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ.ಪಂಚಾಯಿತಿ ಬಿಜೆಪಿ ಸದಸ್ಯ|Bribe

ಚಿಕನ್ ಅಂಗಡಿ ಮಾಲೀಕನಿಂದ 50 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಪಂ ಬಿಜೆಪಿ ಸದಸ್ಯ ಕೆ.ಸಿ.ಹರೀಶ್ ಗೌಡ   ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ.    ಕಾರ್ಗಲ್ ಪಟ್ಟಣದ 8ನೇ ವಾರ್ಡ್ ಬಿಜೆಪಿ ಸದಸ್ಯನಾಗಿರುವ ಹರೀಶ್ ಗೌಡನನ್ನು ಬಂಧಿಸಲಾಗಿದೆ. ಕೋಳಿ ವ್ಯಾಪಾರದ ಅಂಗಡಿಗೆ…

Read More

ಸಾಗರ : ಕಾಲೇಜು ಆಹಾರ ಮೇಳದಲ್ಲಿ ಮಾಂಸಹಾರ ತಂದಿದ್ದ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಅವಕಾಶ ನಿರಾಕರಣೆ|sagar news

ಸಾಗರ : ಇಂದಿರಾಗಾಂಧಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರಮೇಳದಲ್ಲಿ ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡದಿರುವುದು ವಾಗ್ವಾದಕ್ಕೆ ಕಾರಣವಾಗಿದೆ. ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಕಲಾ ವಿಭಾಗದಲ್ಲಿ ಆಹಾರ ಮೇಳ ಆಯೋಜಿಸಲಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು ಮಲೆನಾಡಿನ ಸಾಂಪ್ರದಾಯಿಕ ಮಾಂಸಾಹಾರವಾದ ಕೋಳಿ ಕಜ್ಜಾಯ, ರೊಟ್ಟಿ ಸೇರಿದಂತೆ ಕೆಲವು ತಿನಿಸುಗಳನ್ನು ತಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಉಪನ್ಯಾಸಕರು, ‘ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶವಿಲ್ಲ’ ಎಂದು ಹೇಳಿ ತಿನಿಸುಗಳ ಪ್ರದರ್ಶನಕ್ಕೆ ನಿರ್ಬಂಧ…

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (04-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (04-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 04/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…

Read More

ಹೊಸನಗರ : ಬೈಕ್ ಅಪಘಾತದಲ್ಲಿ ಯುವಕನ ಸ್ಥಿತಿ ಗಂಭೀರ|accident

ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಹೊಸನಗರ ಪಟ್ಟಣ ವ್ಯಾಪ್ತಿಯ ದಿ|| ಪ್ರಕಾಶ್ ಹಾಗೂ ಆಶಾ ದಂಪತಿಗಳ ಪುತ್ರ ಆದರ್ಶ (23) ಗಾಯಗೊಂಡಿರುವ ಬೈಕ್ ಸವಾರ. ತನ್ನ ಸ್ನೇಹಿತನನ್ನು ಹಿಂಭಾಗದಲ್ಲಿ ಕೂರಿಸಿಕೊಂಡು ಬೈಕಿನಲ್ಲಿ ಸವಾರಿ ಮಾಡಿಕೊಂಡು ಹೋಗುವಾಗ ಸೊನಲೆ – ತೀರ್ಥಹಳ್ಳಿ ರಸ್ತೆಯಲ್ಲಿ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿ ಹೊಡೆದಿದೆ. ಅಪಘಾತದ…

Read More