Headlines

ಚಿತ್ರ ನಟಿ ಅನು ಗೌಡ ಮೇಲೆ ಮಾರಣಾಂತಿಕ ಹಲ್ಲೆ – ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲು|assault

ಜಮೀನು ವ್ಯಾಜ್ಯದಲ್ಲಿ ಕನ್ನಡ ಚಲನಚಿತ್ರ ರಂಗದ ನಟಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿಯಲ್ಲಿ ನಡೆದಿದೆ. ಸಾಕಷ್ಟು ಚಲನಚಿತ್ರ ಮತ್ತು ಕಿರುತೆರೆಯಲ್ಲಿ ನಟಿಸಿರುವ ನಟಿ ಅನಿತಾ ಗೌಡ @ ಅನೂಗೌಡ ಕನ್ನಡ ಚಲನಚಿತ್ರ ರಂಗದಲ್ಲಿ ತಮ್ಮದೇ ಹೆಸರು ಗಳಿಸಿದ್ದಾರೆ. ಘಟನೆಯ ಹಿನ್ನಲೆ : ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿವಾಸಿಯಾದ ಇವರಿಗೆ ಸಾಗರ ತಾಲೂಕಿನ ಕಾಸ್ಪಡಿಯಲ್ಲಿ ಜಮೀನು ಇತ್ತು. ಆ ಜಮೀನ ಅನುಗೌಡ ರವರ ಅಪ್ಪ ಅಮ್ಮ ವಾಸವಾಗಿದ್ದರು….

Read More

ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 17ಕ್ಕೆ

ರಿಪ್ಪನ್‌ಪೇಟೆ: ಪಟ್ಟಣದ ರೋಟರಿ ಕ್ಲಬ್‌ನ ನೂತನ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜುಲೈ 17ರ ಭಾನುವಾರ ವಿಶ್ವಮಾನವ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನೂತನ ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ತಿಳಿಸಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು ನಮ್ಮ ಸಂಸ್ಥೆಯ ಸದಸ್ಯರು ಪ್ರಪ್ರಥಮವಾಗಿ ಮಹಿಳಾ ಅಧ್ಯಕ್ಷರು ಮತ್ತು ಕಾರ್ಯದರ್ಶಿಯನ್ನು ಆಯ್ಕೆ ಮಾಡಿದ್ದಾರೆ, ಇದರ ಉದ್ದೇಶ ಮಹಿಳಾ ಸಬಲೀಕರಣವಾಗಿದ್ದು ಸೇವೆಯಲ್ಲಿ ಮಹಿಳೆಯರ ಹೆಚ್ಚು ಪಾಲ್ಗೊಳ್ಳುವಿಕೆಯನ್ನು ಪ್ರತಿನಿಧಿಸುತ್ತದೆ. ಸಂಸ್ಥೆಯು ಇಮ್ಯಾಜಿನ್ ರೋಟರಿ ಎಂಬ ಕಲ್ಪನೆಯನ್ನು ಕೊಟ್ಟಿದ್ದು ಸಮಾನ ಶಿಕ್ಷಣ,…

Read More

ಆಟೋ ಕಾಂಪ್ಲೆಕ್ಸ್‌ನಲ್ಲಿ ಗ್ಯಾರೇಜ್ ಗೆ ಬೆಂಕಿ – ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿ

ಆಟೋ ಕಾಂಪ್ಲೆಕ್ಸ್‌ನಲ್ಲಿ ಗ್ಯಾರೇಜ್ ಗೆ ಬೆಂಕಿ – ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿ ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್‌ನ ಮನು ಶೆಟ್ಟಿ ಎಂಬುವವರ ಗ್ಯಾರೇಜ್‌ನಲ್ಲಿ ಭಾನುವಾರ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ದಟ್ಟ ಹೊಗೆ ಆವರಿಸಿ ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಬೆಂಕಿಯನ್ನು ಆರಿಸಲು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಘಡದಲ್ಲಿ ಡಸ್ಟರ್ ಹಾಗೂ ಇಕೋ ಸ್ಪೋರ್ಟ್ಸ್ ಕಾರುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು,ಟಾಟಾ ಸುಮೋ ವಾಹನ ಅರ್ಧದಷ್ಟು ಹಾನಿಗೊಳಗಾಗಿದೆ ಎಂದು ಸ್ಥಳೀಯರು…

Read More

SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ

SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ ಶಿವಮೊಗ್ಗ: ವೈದ್ಯೆಯೊಬ್ಬರ ವಾಟ್ಸಪ್ ಹ್ಯಾಕ್  ಮಾಡಿ ವೈದ್ಯರೊಬ್ಬರ ಮೊಬೈಲ್‌ಗೆ ಮೆಸೇಜ್ ಕಳುಹಿಸಿ ೯೫,೦೦೦ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಶಿವಮೊಗ್ಗದ ವೈದ್ಯೆಯೊಬ್ಬರ ವಾಟ್ಸಪ್ ನಂಬರ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು ಹಣದ ತುರ್ತು ಅಗತ್ಯವಿದೆ ಎಂದು ಸಹೋದ್ಯೋಗಿಗೆ ಮೆಸೇಜ್ ಕಳುಹಿಸಿದ್ದರು. ಅದನ್ನು ನಂಬಿದ ಸಹೋದ್ಯೋಗಿ ಆ ವಾಟ್ಸಪ್ ಮೆಸೇಜ್‌ನಲ್ಲಿ ಕಳುಹಿಸಲಾಗಿದ್ದ ಮತ್ತೊಂದು ಮೊಬೈಲ್ ನಂಬರ್‌ಗೆ ಫೋನ್ ಪೇ ಮೂಲಕ ಎರಡು…

Read More

ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ | Application

ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ ಮೀನುಗಾರಿಕೆ ಇಲಾಖೆ ಶಿವಮೊಗ್ಗ ವತಿಯಿಂದ ಸ್ಥಳೀಯವಾಗಿ ಮೀನು ಮಾರಾಟ ಸೇವೆಯನ್ನು ಪೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಕೇಂದ್ರ ಪುರಸ್ಕೃತ ‘ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-03-2024 ಕಡೆಯ ದಿನ ಆಗಿದ್ದು, ಶಿವಮೊಗ್ಗ ಜಿಲ್ಲೆಗೆ ಒಟ್ಟು 03 ಭೌತಿಕ ಗುರಿ ಇರುತ್ತದೆ. ವೈಯಕ್ತಿಕ ಪರವಾನಿಗೆದಾರರನ್ನು ಆಯ್ಕೆ…

Read More

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ|Sagara news

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ ಸಾಗರ : ತಮ್ಮ ಕಚೇರಿಯ ನೌಕರ ನಿವೃತ್ತಿಯಾದ ಹಿನ್ನೆಲೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿಶೇಷ ಗೌರವದೊಂದಿಗೆ ಆತನಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ.  ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರು ನಿವೃತ್ತಿಯಾದ ನೌಕರ ಕೃಷ್ಣಪ್ಪ ಅವರನ್ನ ತಮ್ಮ ಸರ್ಕಾರಿ ವಾಹನದಲ್ಲಿ ಕೂರಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡಿಗೆ ನೀಡಿದ್ದಾರೆ. ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಅವರು ಸೋಮವಾರದಂದು…

Read More

ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ಇಡೀ ಊರಿಗೆ ವಾಮಾಚಾರ :

ಗ್ರಾಮದ ಗಡಿಭಾಗದಲ್ಲಿ ರಂಗೋಲಿಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು, ನಿಂಬೆಹಣ್ಣು ಸೇರಿದಂತೆ ಮಾಟಕ್ಕೆ ಬಳಸುವ ವಸ್ತುಗಳನ್ನ ಬಳಸಿ ಮಾಟ ಮಂತ್ರಗಳನ್ನ ಪ್ರಯೋಗಿಸಿರುವ ಘಟನೆ ನಡೆದಿದ್ದು. ಪ್ರಕರಣ ರಿಪ್ಪನ್ ಪೇಟೆಯ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹೊಸನಗರ ತಾಲೂಕು ಬೆನವಳ್ಳಿ ಗ್ರಾಮದ ಮುಂದೆ ವಾಮಾಚಾರ ಮಾಡಿರುವುದು ಕಂಡು ಬಂದಿದೆ. ರಂಗೋಲಿ ಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಊರಿನ ಸಂಪರ್ಕ ರಸ್ತೆ ಸಮೀಪ ವಾಮಾಚಾರ ಮಾಡಿರುವುದು ಕಂಡು ಬಂದಿದ್ದು, ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ….

Read More

ಇಂದು ಅಥವಾ ನಾಳೆ ಭೂಮಿಗೆ ಅಪ್ಪಳಿಸಲಿದೆ ಪ್ರಬಲ ಸೌರಚಂಡಮಾರುತ:ಟಿ ವಿ,ಮೊಬೈಲ್, ಜಿಪಿಎಸ್ ಸಿಗ್ನಲ್ ಹಾನಿ ಸಾಧ್ಯತೆ.

ವಾಷಿಂಗ್ಟನ್: ಇಡೀ ಜಗತ್ತು ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ನಡುವೆಯೇ ಭಾರೀ ಪ್ರಮಾಣದ ಸೂರ್ಯನ ಶಾಖದ ಅಲೆಗಳು ಸೌರ ಚಂಡಮಾರುತದ ರೂಪದಲ್ಲಿ ಬುಧವಾರ ಅಥವಾ ಗುರುವಾರ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೂ ಮುನ್ನ ಭಾನುವಾರ ಅಥವಾ ಸೋಮವಾರ ಸೌರ ಚಂಡಮಾರುತ ಭೂಮಿಗೆ ಬಂದಪ್ಪಳಿಸುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಆಯಸ್ಕಾಂತೀಯ ಗುಣದ ಚಂಡಮಾರುತ ಎಂದು ಕರೆಯಲ್ಪಡುವ ಇದು ಅತೀ ವೇಗದ ಸೌರ ಮಾರುತವಾಗಿದ್ದು, ಭೂಮಿಯ ಮ್ಯಾಗ್ನೆಟಿಕ್ ವಲಯದ ಮೇಲೆ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು…

Read More

ಶ್ರೀಗಂಧ ಮರ ಅಕ್ರಮ ಕಡಿತಲೆ – ಆರೋಪಿ ಬಂಧನ , 39 ಕೆ ಜಿ ಶ್ರೀಗಂಧ ವಶಕ್ಕೆ.!

ಹೊಸನಗರ : ಹೊಸನಗರ ವಲಯದ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಬಂಧಿಸಿ, ಪ್ರಕರಣದಲ್ಲಿ ಬಂಧಿಸಲಾಗಿದೆ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ನಿಖರ ಮಾಹಿತಿಯು ಹೊಸನಗರ ವಲಯದ ಕಾರ್ಯಾಚರಣೆಯನ್ನು ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದಯಾಕುಮಾರ ಅಲಿಯಾಸ್ ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ…

Read More

Ripponpete | ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ – ಹರತಾಳು ಹಾಲಪ್ಪ

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಲಿಕ ಹಿನ್ನಲೆ ಅರಿವೇ ಇಲ್ಲದ.ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ ಆಂತವಳಿಗೆ ಮತದಾರರ ಮತಹಾಕಬೇಕಾ.? ಬಗರ್ ಹುಕುಂ ಆರಣ್ಯ ಹಕ್ಕು ಅಂದರೆ ಏನು ಎಂಬುದೇ ಗೊತ್ತಿಲ್ಲದವರು ಸಂಸತ್ ಪ್ರವೇಶ ಮಾಡಿದರೆ ಪ್ರಯೋಜನವಿಲ್ಲ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಅರಿವಿರುವಂತಹ ಬಿ.ವೈ.ರಾಘವೇಂದ್ರರನ್ನು ಬೆಂಬಲಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಮತದಾರರಲ್ಲಿ ಮನವಿ ಮಾಡಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ…

Read More