Headlines

ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ : ಹಲವರ ನಾಮಪತ್ರ ಸಲ್ಲಿಕೆ

ರಿಪ್ಪನ್‌ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘ (ರಿ) ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನದ ಚುನಾವಣೆಗೆ ಹಲವು ನಾಮಪತ್ರ ಸಲ್ಲಿಕೆಯಾಯಿತು. ಸೆಪ್ಟೆಂಬರ್ 04 ರಂದು ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು 15 ಕ್ಷೇತ್ರದಲ್ಲಿ ಚುನಾವಣೆಗೆ ಈಗಾಗಲೇ ಸಿದ್ದತೆ ಪ್ರಾರಂಭವಾಗಿದೆ. ರಿಪ್ಪನ್‌ಪೇಟೆ ಮತಕ್ಷೇತ್ರ ವ್ಯಾಪ್ತಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಮಾಜಿ‌ ಉಪಾಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಇಂದು ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಅವರು ಸಮಾಜದ ಅಭಿವೃದ್ಧಿಗೆ ದುಡಿಯುವ ಹಂಬಲದಿಂದ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ.ಸಮಾಜದ ಎಲ್ಲಾ ಬಾಂಧವರು ನನ್ನನ್ನು ಬೆಂಬಲಿಸುವ ಮೂಲಕ…

Read More

ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ಮರ ,ಲಕ್ಷಾಂತರ ರೂ ನಷ್ಟ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ | Haratalu

ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ  ಹೊಸನಗರ : ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದಲ್ಲಿ ಇಂದು ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಉರುಳಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿತ್ತು, ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ಪರಿಶೀಲನೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ…

Read More

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್ ಶಿವಮೊಗ್ಗ :- ಇಂದಿನ ಸನ್ನಿವೇಶದಲ್ಲಿ ಮಹಿಳೆಯರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸು ತ್ತಿದ್ದಾರೆ ಮತ್ತು ಅದರಲ್ಲಿಯೂ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಗಳಿದ್ದಾಗ ಬಹುಪಾಲು ಮಹಿಳೆಯರು ಯಾರೊಂದಿಗೂ ಇದರ ಬಗ್ಗೆ ಚರ್ಚಿಸಲು ಹಿಂಜರಿಯುತ್ತಾರೆ. ಆದ್ದರಿಂದ ಈ ಸಂಕೋಚ ಭಾವನೆಯಿಂದ ಹೊರಬಂದು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ನಗರದ ಖ್ಯಾತ ಪ್ರಸೂತಿ ತಜ್ಣೆ  ಡಾ|! ರಕ್ಷಾ ರಾವ್ ತಿಳಿಸಿದರು. ಕಟೀಲ್‌ಅಶೋಕ್ ಪೈ ಸ್ಮಾರಕ ಕಾಲೇಜು, ಮಾನಸಟ್ರಸ್ಟ್,…

Read More

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …?? ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಲಾದ 58ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ರಾಜಬೀದಿ ಉತ್ಸವ ನಾಳೆ (06-09-2025) ಅದ್ದೂರಿಯಾಗಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಅದಾದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಈ ಮೆರವಣಿಗೆಯಲ್ಲಿ…

Read More

ಡಿ.ಕೆ. ಸುರೇಶ್ ವಿರುದ್ಧ ಸಾಗರ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಪ್ರತಿಭಟನೆ…! ಡಿ.ಕೆ. ಸುರೇಶ್ ಪ್ರತಿಕೃತಿ ದಹನ…!

ಸಾಗರ: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ಎಂಎಲ್ಸಿ ರವಿ ಅವರು ಸಚಿವ ಅಶ್ವಥ್ ನಾರಾಯಣ್ ಅವರ ಭಾಷಣಕ್ಕೆ ಅಡ್ಡಿ ಪಡಿಸಿ, ಗೂಂಡಾ ವರ್ತನೆ ತೋರಿದ್ದಾರೆಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಂಗಳವಾರ ನಗರ ಸಾಗರ್ ಹೋಟೆಲ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ  ಡಿ.ಕೆ.ಸುರೇಶ್ ಅವರ ಭಾವಚಿತ್ರವನ್ನು ಧಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಡಿ.ಕೆ.ಸುರೇಶ್ ಹಾಗೂ ಎಂಎಲ್ಸಿ ರವಿ ಇಬ್ಬರಿಗೂ ಕಾಂಗ್ರೆಸ್ ಪಕ್ಷ ಶಿಸ್ತು ಕ್ರಮ ಜರುಗಿಸಬೇಕು.ಹಾಗೂ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು…

Read More

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್ ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಉಪನ್ಯಾಸಕನೇ ಅತ್ಯಾಚಾರವೆಸಗಿರುವ ಆರೋಪವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಶಿಕ್ಷಕ ಎಂದರೆ ದೇವರಿಗೆ ಸಮಾನ.. ಆದ್ರೆ ಈ ದೇವರ ಸ್ಥಾನದಲ್ಲಿರುವ ಶಿಕ್ಷಕರೇ ತಪ್ಪು ಮಾಡಿದರೆ ಕಾಪಾಡುವವರೇ ಯಾರು ಎಂಬ ಪ್ರಶ್ನೆ ಎದುರಾಗುತ್ತೆ.. ಹೌದು.. ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿಬಂದಿದೆ.. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು…

Read More

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್ ರಿಪ್ಪನ್‌ಪೇಟೆ;- ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ ಎಂದು ಸಾಗರ ಪ್ರಥಮ ದರ್ಜೆ ಕಾಲೇಜ್ ಕನ್ನಡ ಪ್ರಾಧ್ಯಾಪಕ ಡಾ.ಎ.ಬಿ.ಉಮೇಶ್ ಹೇಳಿದರು. ರಿಪ್ಪನ್‌ಪೇಟೆಯ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇಂದುಆಯೋಜಿಸಲಾದ ೬೯ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಕನ್ನಡ ಭಾಷೆಯನ್ನು ಬೇರೆಯವರಿಗೆಅರ್ಥವಾಗುವ ಹಾಗೆ…

Read More

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು ಜಮೀನು ಮಾಲೀಕರ ನಕಲಿ ಸಹಿ ಬಳಸಿ ಪೋಡಿ ದುರಸ್ತಿ ಮಾಡಿರುವ ಆರೋಪದಲ್ಲಿ ಹೊಸನಗರ ತಾಲೂಕ್ ಕಛೇರಿಯ ಭೂ ಮಾಪಕ ಸೇರಿದಂತೆ ನಾಲ್ವರ ಮೇಲೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳೂರು ಗ್ರಾಮದ ಸರ್ವೆ ನಂ 99/3 ರಲ್ಲಿ 4.13 ಎಕರೆ ಜಮೀನು ದೂರುದಾರ ಹಾಲುಗುಡ್ಡೆ ಗ್ರಾಮ ಸತ್ಯನಾರಾಯಣ ಹಾಗೂ ಸಹೋದರಿಯ ಜಂಟಿ ಖಾತೆಯಲ್ಲಿರುತ್ತದೆ.ಆದರೆ ಗೋಮೇದ ಬಿನ್…

Read More

ಚೆನ್ನೈನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾದ ಆಸ್ಟ್ರೇಲಿಯ ಕ್ರಿಕೆಟಿಗ ಮ್ಯಾಕ್ಸ್ ವೆಲ್

ಆಸ್ಪ್ರೇಲಿಯಾದ ತಾರಾ ಆಲ್ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌ ಚೆನ್ನೈ ಮೂಲದ ಹುಡುಗಿ ವಿನಿ ರಾಮನ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಚೆನ್ನೈನಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಮ್ಯಾಕ್ಸ್‌ವೆಲ್ ಭಾರತೀಯ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. 2 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾಕ್ಸ್‌ವೆಲ್ ಕಳೆದ ವಾರ ಆಸ್ಟ್ರೇಲಿಯಾದಲ್ಲಿ ಮುದುವೆಯಾಗಿದ್ದರು. ಇದೀಗ ವಿನಿ ರಾಮನ್ ಕುಟುಂಬ ಸದಸ್ಯರು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಆಯೋಜಿಸಿದ್ದರು.  ತಮಿಳುನಾಡಿನ ವರನ ರೀತಿ ಕಾಣಿಸಿಕೊಂಡ ಮ್ಯಾಕ್ಸ್‌ವೆಲ್ ಭಾರತೀಯ ಅಭಿಮಾನಿಗಳಿಗೆ ಮತ್ತಷ್ಚು ಹತ್ತಿರವಾಗಿದ್ದಾರೆ. ಶೇರ್ವಾನಿ, ಮದುವೆ ಹಾರ…

Read More

ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್|HSN

ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್ ಹೊಸನಗರ : ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ ಎಲ್ಲಾ ಸ್ತರಗಳಿಂದ ಸಿಗಬೇಕಾಗಿದೆ. ಈ ತರಹದ ಪ್ರೋತ್ಸಾಹ ಸಿಕ್ಕಲ್ಲಿ ಎಲ್ಲಾ ಕಡೆಯಲ್ಲೂ ಸಾಹಿತ್ಯದ ವಾತಾವರಣ ಕಾಣಬಹುದು ಎಂದು ತಾಲೂಕಿನ ಹಿರಿಯ ಸಾಹಿತಿ ಹೊಸನಗರದ ತಿರುಪತಿ ನಾಯಕ್ ತಿಳಿಸಿದರು. ಅವರು ದಿನಾಂಕ 21-10-2023 ರಂದು ಹೊಸನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ದಸರಾ ಕವಿಗೋಷ್ಠಿಯ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ…

Read More