Headlines

ಸಾಲಭಾಧೆಗೆ ಬೇಸತ್ತು ರೈತ ಆತ್ಮಹತ್ಯೆ

A 56-year-old farmer died by suicide in Ballibailu village near Anandapura, Sagara taluk, reportedly due to mounting loan pressure from bank and microfinance borrowings. Police have registered a case. ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಗ್ರಾಮದಲ್ಲಿ ಗೋಪಾಲ (56) ಎಂಬವರು ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ರೈತ ಗೋಪಾಲ ರವರು ಸುಮಾರು ಎರಡು ವರ್ಷಗಳ ಹಿಂದೆ State Bank…

Read More

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿ ಅಧಿಕಾರ ಸ್ವೀಕಾರ

ಜಿಲ್ಲೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕೆ ಬಿ ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದ್ದು , ಅವರ ಸ್ಥಾನಕ್ಕೆ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ಸೆಲ್ವಮಣಿ (2013 ನೇ ಬ್ಯಾಚಿನ ಐಎಎಸ್ ಅಧಿಕಾರಿ)ರವರನ್ನು ಸರ್ಕಾರ ವರ್ಗಾಯಿಸಿ ಆದೇಶ ನೀಡಿದ್ದು .ಇಂದು ಬೆಳಿಗ್ಗೆ  ನೂತನ ಜಿಲ್ಲಾಧಿಕಾರಿಗಳು ಹಿಂದಿನ ಜಿಲ್ಲಾಧಿಕಾರಿ ಅವರಿಂದ  ಅಧಿಕಾರವನ್ನು ಸ್ವೀಕರಿಸಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿದ್ದು ಕೆಲವು ಮಾಫಿಯಾಗಳು ಅದರಲ್ಲೂ ಮುಖ್ಯವಾಗಿ ಹುಣಸೋಡು ಕ್ರಷರ್ ಮತ್ತು…

Read More

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ ಹೊಸನಗರ : ಕೌಟುಂಬಿಕ ಕಲಹಕ್ಕೆ ಹೊಡೆದಾಡಿಕೊಂಡು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕರ್ಕಮುಡಿಯಲ್ಲಿ ಭಾನುವಾರ ನಡೆದಿದೆ. ದೇವಿಚಂದ್ರ (52) ಮೃತ ದುರ್ದೈವಿ. ದೇವಿಚಂದ್ರನ ಬಾವ ಓಂಕಾರ್ ಮನೆಯಲ್ಲಿ ನಾಗಚೌಡಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮವಿತ್ತು. ಪೂಜೆಗೆ ಅಕ್ಕನ ಗಂಡ ದೇವಿಚಂದ್ರ…

Read More

ರಿಪ್ಪನ್ ಪೇಟೆ : ಅದ್ದೂರಿಯಾಗಿ ಜರುಗಿದ ವಿನಾಯಕ ನಗರ ಗಣೇಶ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ನಗರದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ ಐದನೇ ವರ್ಷದ ಗಣೇಶಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಸಡಗರ ಹಾಗೂ ಸಂಭ್ರಮದಿಂದ ನೆರವೇರಿತು. ಮಕ್ಕಳು ಮಹಿಳೆಯರು ಹಿರಿಯರು ಸೇರಿದಂತೆ ನೂರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್

ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8..  ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…

Read More

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್ ರಿಪ್ಪನ್‌ಪೇಟೆ : ಶಾಂತಿ, ಸಹನೆ ಹಾಗೂ ಸೇವಾಭಾವದಿಂದ ಬದುಕನ್ನು ರೂಪಿಸಿಕೊಂಡರೆ ಪ್ರತಿಯೊಬ್ಬರೂ ನೆಮ್ಮದಿಯ ಜೀವನವನ್ನು ಸಾಧಿಸಬಹುದು ಎಂದು ಪಟ್ಟಣದ ಗುಡ್ ಶೆಪರ್ಡ್ ಚರ್ಚಿನ ಧರ್ಮಗುರು ಫಾದರ್ ಬಿನೋಯ್ ಹೇಳಿದರು. ನಗರದ ಗುಡ್ ಶೆಪರ್ಡ್ ಚರ್ಚಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಮಾನವ ಜೀವನ ಒತ್ತಡದಿಂದ ತುಂಬಿದೆ. ಇಂತಹ ಪರಿಸ್ಥಿತಿಯಲ್ಲಿ ಮಾನಸಿಕ ಶಾಂತಿ ಪಡೆಯಬೇಕಾದರೆ ಸಹನೆ, ತಾಳ್ಮೆ…

Read More

ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news

ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news ಸ್ನೇಹಿತನ ಮೇಲಿನ ದ್ವೇಷಕ್ಕೆ ಆತನ ಮಗನನ್ನು ಅಪಹರಿಸಿ, ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 3.25 ಲಕ್ಷ ರೂ. ದಂಡ ವಿಧಿಸಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ ಗ್ರಾಮದ ಎನ್‌ಎಂ ಬಸವರಾಜಪ್ಪ (40) ಶಿಕ್ಷೆಗೆ ಒಳಗಾದ ಅಪರಾಧಿ. ಶಿವಮೊಗ್ಗದ ಆಲ್ಕೊಳ ನಿವಾಸಿ ನಿಂಗರಾಜು ಮತ್ತು ಬಸವರಾಜಪ್ಪ ಮೊದಲಿನಿಂದ ಪರಿಚಿತರು. ನಿಂಗರಾಜು ಮೇಲಿನ…

Read More

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ  ಈ ಸಂಧರ್ಭದಲ್ಲಿ ಬಂಟರ ಸಮಾಜದ…

Read More

ರಿಪ್ಪನ್‌ಪೇಟೆ : ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಉಡುಪಿಯಲ್ಲಿ ಪತ್ತೆ : ಸುಖಾಂತ್ಯಗೊಂಡ ನಾಪತ್ತೆ ಪ್ರಕರಣ

ರಿಪ್ಪನ್‌ಪೇಟೆ : ಇತ್ತೀಚೆಗೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ  ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರದ ನಿವಾಸಿ ಸೌಂದರ್ಯ ತನ್ನ ಇಬ್ಬರು ಮಕ್ಕಳೊಂದಿಗೆ ಉಡುಪಿಯ ಸಾಂತ್ವಾನ ಕೇಂದ್ರದಲ್ಲಿ ಪತ್ತೆಯಾಗಿದ್ದಾರೆ. ಕಳೆದ ಹತ್ತು ವರ್ಷದ ಹಿಂದೆ ಹೆದ್ದಾರಿಪುರ ಗ್ರಾಮದ ಶಶಿಕುಮಾರ್ ಎಂಬಾತನೊಂದಿಗೆ ಸೌಂದರ್ಯ ವಿವಾಹವಾಗಿದ್ದರು . ಶಶಿ ಕುಮಾರ್ ಪತ್ನಿಗೆ ಮಾನಸಿಕ ಕಿರುಕುಳ ದೈಹಿಕ ಹಲ್ಲೆ ನಡೆಸುತ್ತಿದ್ದ ಕಾರಣ ಪತಿಯ ನಡೆಗೆ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಿದ್ದಾರೆ. ನಿನ್ನೆ ಮೂವರು ಪತ್ತೆಯಾಗಿ ಉಡುಪಿ ಸಾಂತ್ವಾನ ಕೇಂದ್ರದಲ್ಲಿದ್ದಾರೆ….

Read More

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಸಂಚಾರ ಸಂಪೂರ್ಣ ಬಂದ್

ಆಗುಂಬೆ ಘಾಟಿಯಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನಲೆಯಲ್ಲಿ ತಿರುವಿನಲ್ಲಿ ಮಣ್ಣುಕುಸಿದಿದ್ದು, ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಈ ಮಾರ್ಗದಲ್ಲಿ ಹೋದವರು ಸಂಚಾರ ಬಂದ್ ಆಗಿರುವ ಹಿನ್ನಲೆಯಲ್ಲಿ ವಾಪಾಸ್ ಆಗುತಿದ್ದಾರೆ. ಆಗುಂಬೆ ಘಾಟಿ ಕೆಳಗೆ ಸೋಮೇಶ್ವರ ಚೆಕ್​​ಪೋಸ್ಟ್​ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ.  ಮೇಲ್ಬಾಗ ಆಗುಂಬೆ ಘಾಟಿ ಚೆಕ್​ಪೋಸ್ಟ್​ ಬಳಿಯೇ ವಾಹನಗಳನ್ನು ವಾಪಸ್​ ಕಳುಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More