Headlines

ಕೋಡೂರು ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಿದ್ದಗಿರಿ ಸಮೀಪದ ಕ್ವಾರೆ ಕ್ರಾಸ್ ಗ್ರಾಮದಲ್ಲಿ ಸುಮಾರು 50 ರ ಪ್ರಾಯದ ಆಸುಪಾಸಿನ ವ್ಯಕ್ತಿಯ ಶವ  ದೊರೆತಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇನ್ನೂ ಗುರುತು ಪತ್ತೆಯಾಗಿಲ್ಲ.ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ದೌಡಾಯಿಸಿದ್ದು ತನಿಖೆ ಪ್ರಾರಂಭಿಸಿದ್ದಾರೆ. ಮೃತ ವ್ಯಕ್ತಿಯ ಬಗ್ಗೆಗಿನ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Read More

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura ಬಂಕಾಪುರ  :  ಈ ತಂತ್ರಜ್ಞಾನದ ಯುಗದಲ್ಲಿ ಸರ್ಕಾರಿ ಕಸಗೂಡಿಸುವನ ಕೆಲಸಕ್ಕೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಲಾಗುತ್ತಿದೆ.ಸಮಯ ವ್ಯರ್ಥ ಮಾಡದೇ ಅಧ್ಯಯನ ಮಾಡಿ ಸಾಧಕರಾಗಿ ಹೊರಹೊಮ್ಮುವಂತೆ  ವಿದ್ಯಾರ್ಥಿಗಳಾಗಬೇಕು. ಮನುಷ್ಯನನ್ನು ಕತ್ತಲೆಯಿಂದ ಬೆಳಕಿನೆಡೆಗೆ ವಯ್ಯುವ ಶಕ್ತಿ ಶಿಕ್ಷಣಕ್ಕಿದೆ. ಅಂತಹ ಜ್ಞಾನವನ್ನು ವಿದ್ಯಾರ್ಥಿಗಳು ಪಡೆದು ಕೊಂಡಾಗ ಪ್ರಪಂಚವನ್ನೇ ಗೆಲ್ಲಬಹುದು ಎಂದು ಹಾವೇರಿ ಜಿ.ಎಚ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಗದೀಶ್ ಹೊಸಮನಿ ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ…

Read More

Accident | ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದ ಬೃಹತ್​​ ಮರದ ಕೊಂಬೆ; ಮೂವರಿಗೆ ಗಾಯ

ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದ ಬೃಹತ್​​ ಮರದ ಕೊಂಬೆ; ಮೂವರಿಗೆ ಗಾಯ ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಹೆದ್ದಾರಿ ಪಕ್ಕದ ಬೃಹತ್​​ ಮರದ ಕೊಂಬೆ ಬಿದ್ದ ಘಟನೆ  ಶಿವಮೊಗ್ಗ ಜಿಲ್ಲೆಯ ಗೊಂದಿ ಚಟ್ನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.  ಬೈಕ್ ಓಡಿಸುತ್ತಿದ್ದ ಮಾವ ಮಹಮ್ಮದ್ ಶಫಿ, ಬೈಕ್ ಹಿಂಬದಿಯಲ್ಲಿದ್ದ ಸೊಸೆ ಮತ್ತು ಮೊಮ್ಮಗಳಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಅದೃಷ್ಟವಶಾತ್​ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಬೃಹತ್ ಮರದ…

Read More

ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೋವಿಡ್ ಪಾಸಿಟಿವ್|positive

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ‌ ನಂತರ ಪ್ರಥಮ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ವ್ಯಕ್ತಿಯಲ್ಲಿ‌ ಸೋಂಕು ಕಂಡುಬಂದಿದ್ದು, ಹೋಮ್​ ಐಸೋಲೇಷನ್​ಗೆ ಒಳಪಡಿಸಲಾಗಿದೆ. ಶಿವಮೊಗ್ಗ ಮೂಲದ ವ್ಯಕ್ತಿ ವಿದೇಶದಿಂದ ಬಂದಾಗ ಬೆಂಗಳೂರು ಏರ್​ಪೋರ್ಟ್​ನಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರು ಜಿಲ್ಲೆ ತಲುಪಿದ ನಂತರ ಪಾಸಿಟಿವ್ ಎಂದು ವರದಿ ಬಂದಿದ್ದು, ಸೋಂಕಿತನ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಉಳಿದಂತೆ ಜಿಲ್ಲೆಯಲ್ಲಿ 34 ಜನರನ್ನು ಪರೀಕ್ಷಿಸಿದಾಗ ಇಬ್ಬರಲ್ಲಿ ಸೋಂಕಿನ…

Read More

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ ರಿಪ್ಪನ್ ಪೇಟೆ : ಪಟ್ಟಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಗಣಪತಿ ಬಪ್ಪನ ಪ್ರತಿಷ್ಠಾಪನೆ ನೆರವೇರಿದೆ. ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಬುಧವಾರ (ಗಣೇಶ ಚತುರ್ಥಿ) ದಿನ ಮೆರವಣಿಗೆಯ ಮೂಲಕ ಗಣಪತಿಯನ್ನು ಠಾಣೆಗೆ ತಂದು ಪ್ರತಿಷ್ಠಾಪಿಸಲಾಯಿತು. ಈ ದೃಶ್ಯ ಸ್ಥಳೀಯರಲ್ಲಿ ಭಾರಿ ಕುತೂಹಲ ಹುಟ್ಟಿಸಿತು. ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ, ಸಂಘಟನೆಗಳ ವತಿಯಿಂದ ಅಥವಾ ಮನೆಗಳಲ್ಲಿ ಮಾತ್ರ…

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More

ರಿಪ್ಪನ್ ಪೇಟೆ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗೆ ಕರೊನಾ ಪಾಸಿಟಿವ್ : ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಲ್ಲಿ ಆತಂಕ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಡಿ.1 ರಂದು ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ನಿನ್ನೆ ಪಾಸಿಟಿವ್ ಎಂದು ಬಂದಿದೆ. ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಇಂದು ವಿದ್ಯಾರ್ಥಿಯ ಮನೆಗೆ ಬಂದಿದ್ದಾರೆ.ಆದರೆ ಆತ ಮನೆಯಲ್ಲಿ ಇರದೇ ರಿಪ್ಪನ್…

Read More

ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ

ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ಇವತ್ತು ನೂರಕ್ಕು ಹೆಚ್ಚು ಡಿಜೆ ಸಿಸ್ಟಮ್‌ಗಳು ಅಳವಡಿಸಲಾಗಿತ್ತು , ಇನ್ನೊಂದೆಡೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವರೆ ಡಿಜೆಗೆ ವಿರೋಧ ವ್ಯಕ್ತಪಡಿಸಿ ಭಿತ್ತಿ ಪತ್ರ ಪ್ರದರ್ಶಿಸಿದರು. ಇನ್ನೊಂದೆಡೆ ಭಾರಿ ಶಬ್ದ ಮಾಡುತ್ತಿದ್ದ ಡಿಜೆ ವಾಹನವನ್ನು ಪೊಲೀಸರು ತಡೆದು ಸೌಂಡ್ ಆಫ್ ಮಾಡಿಸಿದ ಘಟನೆ ನಡೆಯಿತು. ಶಿವಮೊಗ್ಗ ನಗರದಲ್ಲಿ ಇವತ್ತು ಅದ್ಧೂರಿಯ ಈದ್ ಮಿಲಾದ್ ಮೆರವಣಿಗೆ ನಡೆಯಿತು….

Read More

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತ – ಟ್ರಾಫಿಕ್ ಜಾಮ್ ನಿಂದ ಪರದಾಡಿದ ಪ್ರಯಾಣಿಕರು|agumbe

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಅಪಘಾತ –  ಟ್ರಾಫಿಕ್ ಜಾಮ್ ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತಕ್ಕಿಡಾಗಿದ್ದು ಘಾಟಿ ಸಂಚಾರದಲ್ಲಿ ಕಿ.ಮಿ.ಗಟ್ಟಲೇ ವಾಹನಗಳು ಗಂಟೆಗಟ್ಟಲೇ ನಿಂತು ಭಾರೀ ಸಮಸ್ಯೆಗೆ ಕಾರಣವಾಯಿತು. ಘಾಟಿಯ 9ನೇ ತಿರುವಿನಲ್ಲಿ ಘಾಟಿ ಇಳಿಯುತ್ತಿದ್ದ ವೇಳೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ಯಾವುದೇ ಅನಾಹುತ ಸಂಭವಿಸಿಲ್ಲ.  ಆದರೆ ಉಡುಪಿ ಭಾಗದಿಂದ ಹಾಗೂ ತೀರ್ಥಹಳ್ಳಿ ಮಾರ್ಗದಿಂದ ಹೋಗಿ ಬರುತಿದ್ದ ವಾಹನ ಸವಾರರು ಮತ್ತು ಪ್ರಯಾಣಿಕರು ಗಂಟೆಗಟ್ಟಲೆ ಪರದಾಟ ನಡೆಸಿದರು.

Read More

Ripponpete | ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ

ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿ ನಡೆದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಪುರಪ್ಪೆಮನೆ ಸಮೀಪದ ನಂದಿಗೆ ಗ್ರಾಮದ ಮೃತ್ಯುಂಜಯ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿಯಲ್ಲಿ ಬಜಾಜ್ ಪ್ಲಾಟಿನಾ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು 108 ಆಂಬುಲೆನ್ಸ್ ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ…

Read More
Exit mobile version