Headlines

Accident | ಜವರಾಯನಂತೆ ಅಡ್ಡ ಬಂದ ನಾಯಿ – ಕಾರು ಪಲ್ಟಿಯಾಗಿ ಯುವಕ ಸಾವು

Accident | ಜವರಾಯನಂತೆ ಅಡ್ಡ ಬಂದ ನಾಯಿ – ಕಾರು ಪಲ್ಟಿಯಾಗಿ ಯುವಕ ಸಾವು ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಬಳಿಯಲ್ಲಿ ಕಾರಿಗೆ ನಾಯಿ ಅಡ್ಡ ಬಂದು ಕಾರು ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಶಿವಮೊಗ್ಗ ನಗರದ ಪ್ರಜ್ವಲ್ ವಾಲ್ಮಿಖಿ(23) ಮೃತಪಟ್ಟ ಯುವಕನಾಗಿದ್ದಾನೆ. ಮಂಡಗದ್ದೆಗೆ ಭಾನುವಾರದ ಜಾಲಿ ರೈಡ್ ಗೆ ಮುಂದಾಗಿದ್ದ ಶಿವಮೊಗ್ಗ ನಗರದ ಯುವಕರು ಎರಡು ಕಾರಿನಲ್ಲಿ  ತೆರಳಿದ್ದಾರೆ. ಮಂಡಗದ್ದೆಯಲ್ಲಿ ಊಟ ಮುಗಿಸಿ ವಾಪಾಸ್ ಶಿವಮೊಗ್ಗಕ್ಕೆ ಬರುವಾಗ ಕಾರಿಗೆ ನಾಯಿಯೊಂದು ಅಡ್ಡ ಬಂದಿದೆ….

Read More

ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ನಲ್ಲಿ ವಿಶ್ವ ವಜ್ರ ಪ್ರದರ್ಶನ|diamond show

ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್ ಶೋರೂಂನಲ್ಲಿ ವಿಶ್ವ ವಜ್ರ ಪ್ರದರ್ಶನವನ್ನು ಎಚ್ ಬಿ ಟಿ ಅರೆಕಾನಟ್‌ನ ಮಾಲಕಿ ದಿವ್ಯಾ ಪ್ರೇಮ್ ಉದ್ಘಾಟಿಸಿದರು.  ಮಾ. 8 ರಿಂದ 18 ರವರೆಗೆ ನಡೆಯುವ ಈ ಪ್ರದರ್ಶನದಲ್ಲಿ ಇಟಲಿ, ಫ್ರಾನ್ಸ್, ಅಮೆರಿಕ, ಬೆಲ್ಜಿಯಮ್, ಸಿಂಗಪೂರ್, ಟರ್ಕಿ ಮತ್ತು ಮಧ್ಯಪ್ರಾಚ್ಯ ದೇಶಗಳ ವಿವಿಧ ದೇಶಗಳ ವಜ್ರಾಭರಣಗಳನ್ನು ಅತಿಥಿಗಳು ಅನಾವರಣ ಗೊಳಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದರು.  ಈ ಆಭರಣಗಳು 10   ಸಾವಿರ ಕ್ಯಾರೆಟ್ ಐಜಿಐ ಪ್ರಮಾಣೀಕೃತ ೪ಸಿ ಪರಿಪೂರ್ಣ ನೈಸರ್ಗಿಕ ವಜ್ರಾಭರಣಗಳಾಗಿವೆ. ಎಪಿಎಂಸಿ…

Read More

ಜಂಬಳ್ಳಿ ತಿರುವಿನಲ್ಲಿ ಅಪಘಾತ – ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ|accident

ತೀರ್ಥಹಳ್ಳಿ : ಅಡ್ಡ ಬಂದ ಹಸುವನ್ನ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದ್ದು ಗಾಯಗೊಂಡಿದ್ದ ಬೈಕ್ ಸವಾರನನ್ನು ಗೃಹ ಸಚಿವರ ಬೆಂಗಾವಲು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ಮತ್ತು ತೀರ್ಥಹಳ್ಳಿ ನಡುವಿನ  ತೂದುರು ಸಮೀಪದ ಜಂಬಳ್ಳಿ ತಿರುವಿನಲ್ಲಿ ಹಸುವೊಂದು ಅಡ್ಡ ಬಂದಿದ್ದರ ಪರಿಣಾಮ ಮಂಡಗದ್ದೆ ಸಮೀಪದ ಸಿಂಗನಬಿದರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳಗ ಗ್ರಾಮದ ಬೈಕ್ ಸವಾರ ಮನೋಜ್ ಹಸುವನ್ನು ತಪ್ಪಿಸಲು ಹೋಗಿ ಅಪಘಾತಕ್ಕಿಡಾಗಿದ್ದಾರೆ.  ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ …

Read More

HUMACHA | ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ವಿಷಪ್ರಯೋಗ ಶಂಕೆ!

HUMACHA | ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಕಳೇಬರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ತೋಟವೊಂದರ ಹೊಂಡದಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂಬರ 52 /2 ರ ರಾಮಪ್ಪ ಬಿನ್ ಮರಿಯಪ್ಪ ಎಂಬುವವರ ಅಡಿಕೆ ತೋಟದ ಹೊಂಡವೊಂದರಲ್ಲಿ ಎರಡು ಕಾಡುಕೋಣಗಳ ಮೃತದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಕಾಡುಕೋಣ ಮೃತಪಟ್ಟು ನಾಲ್ಕೈದು ದಿನಗಳಾಗಿರಬಹುದು ಎನ್ನಲಾಗುತಿದ್ದು , ವಿಷಪ್ರಾಶನ…

Read More

ಬಡ ಕುಟುಂಬದ ಮಹಿಳೆಯರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ|

ಹೆಣ್ಣುಮಕ್ಕಳ ಮೇಲೆ ದರ್ಪ ತೋರಿದ ಅರಣ್ಯಇಲಾಖೆ ಅಧಿಕಾರಿಗಳು ತೀರ್ಥಹಳ್ಳಿ : ತಾಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೈಮರ ಸಮೀಪದ ಸುಣ್ಣದಮನೆ ಎಂಬಲ್ಲಿ ಹೆಣ್ಣುಮಕ್ಕಳ ಮೇಲೆ ಅರಣ್ಯಇಲಾಖೆ ಅಧಿಕಾರಿಗಳು ಹಲ್ಲೆ ನೆಡೆಸಿದ್ದಲ್ಲದೆ ತೀರ ಅಮಾನವೀಯವಾಗಿ ನೆಡೆದುಕೊಂಡಿದ್ದಾರೆ. ರವಿ ನಾಯಕ್ ಎಂಬುವರು ಅಲ್ಲಿ ಡಿಮ್ಯಾಂಡ್ ದಾಖಲೆಯ ಆಧಾರದಲ್ಲಿ ಮನೆಯನ್ನು ಕಟ್ಟಿಕೊಂಡಿದ್ದು ಗ್ರಾಮಪಂಚಾಯಿತಿಯಿಂದ ಡಿಮ್ಯಾಂಡ್ ಕೂಡ ಕೊಟ್ಟಿದ್ದಾರೆ. ಆದರೂ ಇಂದು ಏಕಾಏಕಿ ಮನೆಗೆ ನುಗ್ಗಿದ ಅರಣ್ಯ ಅಧಿಕಾರಿಗಳು ಮನೆಯಲ್ಲಿ ಇದ್ದವರ ಮೇಲೆ ಹಲ್ಲೆ ನೆಡೆಸಿದ್ದಾರೆ. ಸುಮಾರು 8 ಜನ ಅರಣ್ಯ ಅಧಿಕಾರಿಗಳು…

Read More

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು ಜಮೀನು ಮಾಲೀಕರ ನಕಲಿ ಸಹಿ ಬಳಸಿ ಪೋಡಿ ದುರಸ್ತಿ ಮಾಡಿರುವ ಆರೋಪದಲ್ಲಿ ಹೊಸನಗರ ತಾಲೂಕ್ ಕಛೇರಿಯ ಭೂ ಮಾಪಕ ಸೇರಿದಂತೆ ನಾಲ್ವರ ಮೇಲೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳೂರು ಗ್ರಾಮದ ಸರ್ವೆ ನಂ 99/3 ರಲ್ಲಿ 4.13 ಎಕರೆ ಜಮೀನು ದೂರುದಾರ ಹಾಲುಗುಡ್ಡೆ ಗ್ರಾಮ ಸತ್ಯನಾರಾಯಣ ಹಾಗೂ ಸಹೋದರಿಯ ಜಂಟಿ ಖಾತೆಯಲ್ಲಿರುತ್ತದೆ.ಆದರೆ ಗೋಮೇದ ಬಿನ್…

Read More

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ರಿಪ್ಪನ್‌ಪೇಟೆ;-ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ  ಶಾಸಕರ ವಿಶೇಷ ಅನುದಾನದಡಿಯಲ್ಲಿ   32 ಲಕ್ಷ ರೂ ಬಿಡುಗಡೆ ಮಾಡುವುದರೊಂದಿಗೆ ಸಿಸಿ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಗುದ್ದಲಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಕ್ಷೇತ್ರದ ಹೊಸನಗರ…

Read More

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್|JDS

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಸಿ ಎಂ ಇಬ್ರಾಹಿಂ ರವರು ಗೌರವಯುತವಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ ಹೋಗಲಿ ಅದನ್ನು ಹೊರತುಪಡಿಸಿ ಯಾರದೋ ಮನೆಯಲ್ಲಿ ಯಜಮಾನಿಕೆ ನಡೆಸಲು ಬಂದರೆ ಸಹಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಹೇಳಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಸಿ…

Read More

ಹೊಸನಗರ ತಾಲೂಕ್ ಒಕ್ಕಲಿಗರ ವೇದಿಕೆ ವತಿಯಿಂದ ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡ ರವರಿಗೆ ಸನ್ಮಾನ :

ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಪೂಜಿತ ಗೌಡ ರವರಿಗೆ ಹೊಸನಗರ ತಾಲೂಕ್ ಒಕ್ಕಲಿಗರ ವೇದಿಕೆ ವತಿಯಿಂದ ರಿಪ್ಪನ್ ಪೇಟೆ ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರಿಪ್ಪನ್‌ಪೇಟೆಯ ವಿಶ್ವ ಮಾನವ ಸಭಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ.ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ. ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಮರಿ ಪುಡಾರಿಗಳದ್ದೇ ದರ್ಬಾರ್ : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ ದುರಾಡಳಿತ, ಹಾಗೂ ಈಶ್ವರಪ್ಪನವರ ಕಮಿಷನ್ ವ್ಯವಹಾರ, ಪಿಎಸ್ಐ ನೇಮಕಾತಿ ವಿಚಾರ, ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ , ಬಗರ್ ಹುಕುಂ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿ ಮೇ 10 ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನೆಡೆಸುವುದಾಗಿ ಆರ್ ಎಂ ಮಂಜುನಾಥ ಗೌಡರು ತಿಳಿಸಿದರು.  ತೀರ್ಥಹಳ್ಳಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ  ನಡೆಸಿ  ಮಾತನಾಡಿದ ಅವರು ಶಿವಮೊಗ್ಗದಲ್ಲಿ ಮೇ 10 ರಂದು ಶಿವಮೊಗ್ಗದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ…

Read More