Headlines

ಹೊಸನಗರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಮನೆ – ಉಟ್ಟ ಬಟ್ಟೆಯಲ್ಲಿಯೇ ಬೀದಿಗೆ ಬಿದ್ದ ಬಡ ಕುಟುಂಬ|Fire

ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಕೂಡ್ಲಿಕೊಪ್ಪ ಸ್ವಾಮಿ ಎಂಬುವವರ ಮನೆಗೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಸಂಭವಿಸಿದ್ದು ಮನೆ ಸಂಪೂರ್ಣ ಸುಟ್ಟು ಹೋಗಿದೆ. ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಕೂಡಲೇ ಮನೆಯಲ್ಲಿದ್ದವರೆಲ್ಲಾ ಹೊರಗೆ ಬಂದಿದ್ದಾರೆ. ನೋಡನೋಡುತ್ತಿದ್ದಂತೆ ಮನೆ ಬೆಂಕಿಯ ಕೆನ್ನಾಲಿಗೆ ಮನೆಯನ್ನೆಲ್ಲಾ ಆವರಿಸಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ‌ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಹೊಸನಗರ ಅಗ್ನಿ ಶಾಮಕ ಸಿಬ್ಬಂದಿಗಳು ಅಳಿದುಳಿದ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟಿದ್ದಾರೆ. ಕೂಡ್ಲಿಕೊಪ್ಪ…

Read More

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರ : ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ

ಬೈಕ್ ಸವಾರನೊಬ್ಬ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುವಾಗ, ಅದೇ ದಾರಿಯಲ್ಲಿ ಸಾಗುತ್ತಿದ್ದ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ  ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ. ಇಂದು ಹೊಸನಗರ ತಾಲ್ಲೂಕಿನ ಪ್ರವಾಸದಲ್ಲಿದ್ದ ಶಾಸಕ ಹರತಾಳು ಹಾಲಪ್ಪರವರು ಕೊಡಚಾದ್ರಿ ಕಾಲೇಜಿನ ಮುಂಭಾಗ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿದ್ದರು.ಕೂಡಲೇ ವಾಹನ ನಿಲ್ಲಿಸಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ಶಾಸಕರು ಅಪಘಾತಕ್ಕೀಡಾದ ವ್ಯಕ್ತಿಗೆ…

Read More

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಹಣ ಕಳೆದುಕೊಂಡ ಶಿಕ್ಷಕಿ

ನಕಲಿ ಬ್ಯಾಂಕ್ ಮ್ಯಾನೇಜರ್ ನನ್ನು ನಂಬಿ ಲಕ್ಷಾಂತರ ರೂ ಕಳೆದುಕೊಂಡ ಶಿಕ್ಷಕಿ ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಫೋನ್ ನಂಬರ್ ಹುಡುಕಿದ್ದಕ್ಕೆ, ಮಹಿಳೆಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದ ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಂಕ್ ಖಾತೆಯಿಂದ 9.19 ಲಕ್ಷ ರೂ. ಕಡಿತಗೊಂಡಿದೆ. ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಶಿಕ್ಷಕಿಯೊಬ್ಬರು (ಹೆಸರು ಗೌಪ್ಯವಾಗಿಡಲಾಗಿದೆ) ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಮೊಬೈಲ್ ನಂಬರ್ ಹುಡುಕಿದ್ದರು. ಅಲ್ಲಿ ದೊರೆತ ನಂಬರ್‌ಗೆ ಕರೆ ಮಾಡಿದಾಗ…

Read More

ಕೆರೆಯಲ್ಲಿ ಮುಳುಗಿ ಯುವಕ ಸಾವು :

ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ತವನಂದಿ ಗ್ರಾಮದಲ್ಲಿ ಇಂದು ನಡೆದಿದೆ. ತವನಂದಿ ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂಧನ (23) ಮೃತ ದುರ್ಧೈವಿ. ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಎತ್ತುಗಳು ನೀರಿಗೆ ಎಳೆದಿವೆ. ಈ ವೇಳೆ ಈಜು ಬಾರದೇ ಮಧುಸೂಧನ್ ನೀರಿನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ…

Read More

ಸಾಗರದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನ – ಮಾರಕಾಸ್ತ್ರಗಳ ಸಮೇತ ಆರೋಪಿಗಳ ಬಂಧನ|drugs

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ ಡ್ರಗ್ಸ್‌ ದಂಧೆ ಇದೀಗ ಮಲೆನಾಡಿಗೂ ವ್ಯಾಪಿಸಿದೆ. ಮಂಗಳೂರಿನಿಂದ ಮಾದಕ ದ್ರವ್ಯಗಳನ್ನು ತಂದು ಸಾಗರದಲ್ಲಿ ಮಾರಲು ಮಂದಾಗಿದ್ದ ತಂಡವೊಂದನ್ನು ಸಾಗರ ನಗರ ಠಾಣೆ ಪೊಲೀಸರು ಹತ್ತಿಕ್ಕಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಇದರ ಹಿಂದಿರುವ ಒಂದು ಕೊಲೆ ಯತ್ನದ ಪ್ಲ್ಯಾನ್‌ ಕೂಡಾ ಬಯಲಾಗಿದೆ. ಮಂಗಳೂರಿನಿಂದ ಮಾದಕ ವಸ್ತು ತಂದು ಸಾಗರದಲ್ಲಿ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಾಗರದ ಅಣಲೆಕೊಪ್ಪ ಬಳಿ ಪೊಲೀಸರು ದಾಳಿ ಸಂಘಟಿಸಿದ್ದರು. ಈ ವೇಳೆ, ಸೃಜನ್ ಶೆಟ್ಟಿ, ತಿಲಕ್…

Read More

ಪ್ರಿಯಕರನಿಂದ ಪ್ರೇಯಸಿಗೆ ಚೂರಿ ಇರಿತ : ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ : ಪ್ರೇಮಿಗಳು ಇಬ್ಬರು ಗಂಭೀರ…!

ಉಡುಪಿ : ನಗರದ ಅಂಬಾಗಿಲು ಸಂತೆಕಟ್ಟೆ ಪೆಟ್ರೋಲ್ ಪಂಪ್ ಬಳಿ ಯುವಕನೋರ್ವ ತನ್ನ ಪ್ರೇಯಸಿಗೆ ಚೂರಿ ಇರಿದು ನಂತರ ತಾನೂ ಚೂರಿ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ. ಯುವ ಜೋಡಿಗಳು ಬೈಕಿನಲ್ಲಿ ಬಂದು ನಂತರ ಜಗಳವಾಡಿ ಚೂರಿಯಲ್ಲಿ ಇರಿದು ಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯು ಸ್ಥಳೀಯ ಅಂಬಾಗಿಲು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಎಂದು ತಿಳಿಯಲಾಗಿದೆ.ಯುವಕನು ಘಟನಾ ಸ್ಥಳಕ್ಕೆ ಬಂದ ಬೈಕ್ ಐಡಿಯಲ್ ಮೆಡಿಕಲ್ ರೇಫ್ ನದ್ದು ಎಂದು ತಿಳಿದು ಬಂದಿದೆ,ಯವಕನ ವಿವರಗಳು ಇನ್ನಷ್ಟು ತಿಳಿದುಬರಬೇಕಿದೆ….

Read More

ಅಕ್ರಮ ಮರಳು ಮಾಫ಼ಿಯಾದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ಕೈವಾಡವಿರುವುದು ನೂರಕ್ಕೆ ನೂರರಷ್ಟು ಸತ್ಯ : ಬಿ ಜಿ ನಾಗರಾಜ್

ಹೊಸನಗರ : ಮಾಜಿ ಶಾಸಕರು ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಹೊಸನಗರ ತಾಲ್ಲೂಕಿನಲ್ಲಿ ಮರಳು ಮಾಫೀಯ ನಡೆಯುತ್ತಿದೆ ಅದಕ್ಕೆ ಸಾಗರ – ಹೊಸನಗರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪರವರ ಕೈವಾಡವಿದೆ ಎಂದು ಹೇಳಿರುವುದು ಸತ್ಯ ಸಂಗತಿಯಾಗಿದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ಹೇಳಿದರು. ಇಂದು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಮರಳು ಗಣಿಗಾರಿಕೆ ಮಾಡುವ ಗುತ್ತಿಗೆದಾರರು ಅಥವಾ ಮರಳು…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಅ.25 ರಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ  ಮಾದಕ ವಸ್ತುಗಾಂಜಾವನ್ನು  ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕುಂಸಿ ಪೊಲೀಸರು ಖಡಕ್ ದಾಳಿ ನಡೆಸಿ ಓರ್ವನನ್ನ ಬಂಧಿಸಿದ್ದಾರೆ. ಆರೋಪಿಯಿಂದ ಅಂದಾಜು ಮೌಲ್ಯ 15,000/- ರೂಗಳ 640  ಗ್ರಾಂ ತೂಕದ ಒಣ ಗಾಂಜಾ ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ 0213/2024 ಕಲಂ  20(b), 8(c) NDPS…

Read More

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು RIPPONPETE ; ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು. ಚಿನ್ನಕ್ಕಿಂತ ಅನ್ನವೇ ಶ್ರೇಷ್ಟ. ಪ್ರತಿಯೊಬ್ಬರಿಗೂ ಭೂಮಿ, ನೀರು, ಅನ್ನ, ವಾಯು ಇವು ಅವಶ್ಯಕವಾಗಿ ಬೇಕು. ನಿಸರ್ಗವು ನಮಗೆ ಉಚಿತವಾಗಿ ದೊರಕಿಸಿಕೊಡುತ್ತದೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಕಗ್ಗಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವಯರು ನಮ್ಮೂರು ನಮ್ಮ ಕೆರೆ ಯೋಜನೆಯಡಿ ತಳಲೆ ತಲೆಕಟ್ಟು ಕೆರೆಯ  ಹಸ್ತಾಂತರ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ…

Read More

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಾದಾಪುರ ಶಾಲೆಯ ಫೌಜಿಯಾ ಸರವತ್|district news

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಾದಾಪುರ ಶಾಲೆಯ ಫೌಜಿಯಾ ಸರವತ್| ರಿಪ್ಪನ್‌ಪೇಟೆ : ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಪಟ್ಟಣದ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಸರ್ಕಾರಿ ಶಾಲೆಯ ಶಿಕ್ಷಕಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ದೊರೆತಿದೆ. ಓರ್ವ ವಿಶೇಷ ಶಿಕ್ಷಕ ಸೇರಿ 11 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಈ ಭಾರಿ ನೀಡಲಾಗುತ್ತಿದೆ. ರಾಜ್ಯ…

Read More
Exit mobile version