Headlines

ಶಾಂತಿ ಮತ್ತು ಪ್ರೇಮದಿಂದ ಭಾವೈಕ್ಯದ ಜೀವನ ಸಾಧ್ಯ :

ರಿಪ್ಪನ್ ಪೇಟೆ : ಪ್ರೀತಿ, ಪ್ರೇಮ,ಮತ್ತು ಭಾವೈಕ್ಯದ ಮೂಲಕ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬಹುದು. ಜಗತ್ತಿನಲ್ಲಿರುವ ಪ್ರತಿಯೊಬ್ಬರಿಗೂ ಪ್ರೀತಿ-ಪ್ರೇಮ ಮತ್ತು ಶಾಂತಿಯನ್ನು ಹಂಚೋಣ ಆ ಮೂಲಕ ಭಾವೈಕ್ಯತೆ ಮತ್ತು ಸಾಮರಸ್ಯದ ಸಮಾಜವನ್ನು ನಿರ್ಮಾಣ ಮಾಡಬಹುದೆಂದು  ರೆ. ಫಾ.ಬಿನೋಯ್ ಹೇಳಿದರು.  ಪಟ್ಟಣದ ಗುಡ್ ಶಫರ್ಡ್  ಚರ್ಚಿನಲ್ಲಿ ಶುಕ್ರವಾರ ಗುಡ್ ಫ್ರೈಡೆ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಗತ್ತಿಗೆ ಶಾಂತಿ ಮಂತ್ರವನ್ನು ಪಡಿಸಿದ ಯೇಸು ಕ್ರಿಸ್ತರು  ಪ್ರೀತಿ ಪ್ರೇಮ ಭಾವ್ಯಕ್ಯತೆ ಮತ್ತು ಸಾಮರಸ್ಯದಿಂದ  ಬದುಕಿದಾಗ ಮಾತ್ರ…

Read More

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ ರಿಪ್ಪನ್‌ಪೇಟೆ;-ಇಲ್ಲಿನ ಸಾಗರ ರಸ್ತೆಗೆ  ಸಂಪರ್ಕಿಸುವ ಗ್ರಾಮ ಪಂಚಾಯ್ತಿ ಹಿಂಭಾಗದ ನಕಾಶೆ ಕಂಡ ರಸ್ತೆಯ ಮಧ್ಯದಲ್ಲಿ ವಿದ್ಯುತ್‌ಕಂಬವನ್ನು  ಅಳವಡಿಸಿರುವುದರ ಬಗ್ಗೆ ಸಾರ್ವಜನಿಕರು  ಮೆಸ್ಕಾಂ ಇಲಾಖೆಯ ವಿರುದ್ದ ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದಾರೆ. ನಕಾಶೆ ಕಂಡ ರಸ್ತೆಯನ್ನು ಆಕ್ರಮಸಿಕೊಳ್ಳುತ್ತಿದ್ದಾರೆಂದು ನ್ಯಾಯಾಲಯದಲ್ಲಿ  ಈ ಹಿಂದೆ  ರಸ್ತೆಯ ನಿವಾಸಿಗಳು ದೂರು ದಾಖಲಿಸಿದ್ದು ನ್ಯಾಯಾಲಯ ಸಾರ್ವಜನಿಕರ ಮನವಿಗೆ ಸ್ಪಂದಿಸಿ 8 ಅಡಿ ಅಗಲದ ಸಂಪರ್ಕ  ರಸ್ತೆಗೆ…

Read More

ಕಾಸ್ಪಾಡಿ ತಿರುವಿನಲ್ಲಿ ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು|Accident

ಸಾಗರ : ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಹರೀಶ್ ಕುಮಾರ್ (42) ಎಂಬುವರು ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಹೋದರಿಯ ಮನೆಗೆ ಹೋಗಿ ವಾಪಾಸ್ ಮನೆಗೆ ಬೈಕ್ ನಲ್ಲಿ ಮರಳುವಾಗ ಕಾಸ್ಪಾಡಿ ತಿರುವಿನಲ್ಲಿ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದ್ದಾರೆ.ತೀವ್ರ ಸ್ವರೂಪದ ಗಾಯವಾಗಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಬುಧವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತೀರ್ಥಹಳ್ಳಿ : ಚಾಕಲೇಟ್ ಎಂದು ಇಲಿ ಪಾಷಾಣ ತಿಂದ ಐದು ವರ್ಷದ ಮಗು – ಚಿಕಿತ್ಸೆ ಫಲಿಸದೇ ಸಾವು|rat poison

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಮೇಲಿನಕೊಪ್ಪದ ಬಳಿಯಲ್ಲಿ ಮಗುವೊಂದು ಇಲಿ ಪಾಷಾಣದ ಪೇಸ್ಟ್ ತಿಂದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕೂಲಿ ಕಾರ್ಮಿಕ ಚಂದ್ರಪ್ಪ ಮತ್ತು ಗೀತಾ ದಂಪತಿಯ ಎಂಬುವವರ ಪುತ್ರ ಪ್ರೀತಮ್ (5) ಮೃತ ಬಾಲಕ.  ಇಲಿಗೆ ಅಂತಾ ಇಟ್ಟಿದ್ದ ಪಾಷಾಣವನ್ನು ಮಗು ಚಾಕೊಲೆಟ್ ಎಂದು ಭಾವಿಸಿ ಬಾಯಿಗೆ ಹಾಕಿಕೊಂಡಿದೆ. ನಿನ್ನೆ ರಾತ್ರಿ ಮಗು ಅಸ್ಥಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಇಂದು ಸಾವನ್ನಪ್ಪಿದೆ.  ಮಗುವನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ…

Read More

Ripponpete | ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ದಿಗೆ ಶ್ರಮಿಸಬೇಕು – ಪಿಎಸ್‌ಐ ಪ್ರವೀಣ್ ಎಸ್ ಪಿ

ರಿಪ್ಪನ್‌ಪೇಟೆ : ಸರ್ಕಾರಿ ಕನ್ನಡ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘವನ್ನು ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಿಪ್ಪನ್ ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಕರೆ ನೀಡಿದರು. ರಿಪ್ಪನ್‌ಪೇಟೆ ಪಟ್ಟಣದ ಹಳೇ ಸಂತೆ ಮಾರುಕಟ್ಟೆ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಆಯೋಜಿಸಿದ್ದ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣ ಬಣ್ಣ  ಅಭಿಯಾನ” ಕ್ಕೆ ಚಾಲನೆ ನೀಡಿ, ಶ್ರಮದಾನ ನೆರವೇರಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಮೂಲ…

Read More

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ|madhu bangarappa

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ ಸೊರಬ: ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.  ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.  ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್ ವ್ಯವಸ್ಥೆ ಇಲ್ಲದೇ ಇಲ್ಲದೇ…

Read More

RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ

Pooja M.N from Arasalu village near Ripponpet has been awarded a PhD in Mathematics by Kuvempu University. She completed her research under the guidance of Prof. S.K. Narasimhamurthy. Her achievement has been widely appreciated by her family and the academic community. RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದ ಪೂಜಾ ಎಂ.ಎನ್…

Read More

ಮಲೆನಾಡಿನಲ್ಲಿ ಟಗರಿನ ಕಾಳಗ ಸಂಭ್ರಮ: ನಾಳೆಯಿಂದ ಕೆಂಚನಾಳದಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

A state-level ram fight competition is set to take place in Kenchanala village near Ripponpet, marking a first for the Malnad region and promoting traditional rural sports and culture. ರಿಪ್ಪನ್ ಪೇಟೆ : ಕೆಂಚನಾಲ ಗ್ರಾಮವು ಭಾನುವಾರ (ಮಾ.29) ಗ್ರಾಮೀಣ ಕ್ರೀಡೆಗಳ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದು, ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ರಾಜ್ಯ ಮಟ್ಟದ ಟಗರಿನ ಕಾಳಗವನ್ನು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ…

Read More

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ ರಿಪ್ಪನ್‌ಪೇಟೆ;-ವೀರಶೈವ ಲಿಂಗಾಯಿತ ಜನಾಂಗದಲ್ಲಿ ಸಾಕಷ್ಟು ಉಪ ಪಂಗಡಗಳಿದ್ದರೂ ಕೂಡಾ ಸಂಘಟಿತರಾಗಿ ಸಮಾಜವನ್ನು ಸರಿದಾರಿಗೆ ತಂದು ನಮ್ಮ ಗುರು ವಿರಕ್ತರಲ್ಲಿನ ಪರಂಪರೆ ಬೇರೆ ಬೇರೆಯಾಗಿದರೂ ಕೂಡಾ ಧರ್ಮ ಭೋಧನೆಯು ಸಮಾಜಕ್ಕೆ ಮಾರ್ಗದರ್ಶನ ಮಾಡುವ ಗುರಿ ಒಂದೇ ಆಗಿರುತ್ತದೆಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಶಿಲಾಮಂಟಪ ಉದ್ಘಾಟನೆ ಕರ್ತೃ ಗದ್ದುಗೆ ಲಿಂಗು ಪ್ರತಿಷ್ಠಾ¥ನೆ ಗುರುನಿವಾಸ ಲೋಕಾರ್ಪಣೆ ಚಂದ್ರಶಾಲೆ ಉದ್ಘಾಟನೆ ಶ್ರೀ ಜಗದ್ಗುರು ಪಂಚಾಚಾರ್ಯ…

Read More

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ 40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡುಹಂದಿಯನ್ನು ಬೇಟೆಯಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ. ಕೆ ಹುಣಸವಳ್ಳಿ ಗ್ರಾಮದ ಡಾಕಪ್ಪ ಬಿನ್ ಮಂಜಪ್ಪ, ಕಾರ್ತಿಕ್ ಬಿನ್ ಡಾಕಪ್ಪ ಹಾಗೂ ಗಣೇಶ ಬಿನ್…

Read More
Exit mobile version