Hosanagara | ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: ಶ್ರೀಗಂಧದ ತುಂಡುಗಳ ಸಹಿತ ನಾಲ್ವರ ಬಂಧನ
ನಗರ ವಲಯ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: ಶ್ರೀಗಂಧದ ತುಂಡುಗಳ ಸಹಿತ ನಾಲ್ವರು ಆರೋಪಿಗಳ ಬಂಧನ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ವಲಯ ವ್ಯಾಪ್ತಿಯ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 97ರ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಕಡಿತಲೆ ಮಾಡಿ ಸಾಗಾಣಿಕೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ ಬಂಧಿಸಿ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ನಿವಣೆ ವಾಸಿ ಪರಮೇಶ್ವರಪ್ಪ, ಮಾಣಿ ಗ್ರಾಮದ ಎಂ ಕೆ ಹರೀಶ, ನಾಗರ ಕೊಡುಗೆ…


