ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ Private bus loses control and crashes into a betel nut plantation near Kudligere in Bhadravati, Shivamogga, leaving more than 15 passengers seriously injured. ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ…

Read More

ಸಮನ್ವಯ ಕವಿ ನಾಡೋಜ ಚೆನ್ನವೀರ ಕಣವಿ ನಿಧನ

 ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು. ನಿನ್ನೆ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಲಾಗಿತ್ತು. ಈ ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಇನ್ನಿಲ್ಲವಾಗಿದ್ದಾರೆ. ಅಂದಹಾಗೇ, ಚೆನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್‌ಎಂದು ಪ್ರಸಿದ್ಧಿರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ…

Read More

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಸಾವು – ಪತಿಯ ವಿರುದ್ದ ಪ್ರಕರಣ ದಾಖಲು|death

ಶಿವಮೊಗ್ಗ ಹೊಳೆಹೊನ್ನೂರು  ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ. ಅನಿತಾ ಮೃತ ಯುವತಿ, ಈಕೆ  7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ  ಸಂತೋಷ್​ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು. ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್​ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್​ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ….

Read More

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್ : ಯುವಕ ಸಾವು….

ಯುವಕನೊಬ್ಬ ಬೈಕಿನಲ್ಲಿ ತೆರಳುತಿದ್ದಾಗ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲಕ್ಕೆ ಕರೆದುಕೊಂಡು ಹೋಗುವಾಗ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ರಾಮಕೃಷ್ಣಪುರದ ಬಳಿಯ ಕಾಸರವಳ್ಳಿ ಗ್ರಾಮದ ಕೋಟೆ ತೋಟ ಬಳಿ ನಡೆದಿದೆ. ಬುಧವಾರ ಸಂಜೆ  ಬಂಡಿಗಡಿಯ ಚಾವಲ್ಮನೆ ರಂಜನ್ ಕೆ(32)ಎಂಬ ಯುವಕ ತೀರ್ಥಹಳ್ಳಿಯಿಂದ ಮದುವೆ ಕಾರ್ಯಕ್ರಮ ಮುಗಿಸಿ ಊರಿಗೆ ಹೋಗುತ್ತಿದ್ದ ವೇಳೆ ರಾಮಕೃಷ್ಣಪುರದ ಬಳಿ ಬೈಕ್ ನಿಯಂತ್ರಣ ತಪ್ಪಿದ ಕಾರಣ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಗಾಯವಾಗಿತ್ತು.  ಸ್ಥಳೀಯ ಸಾರ್ವಜನಿಕ ಆಂಬುಲೆನ್ಸ್ ಮೂಲಕ…

Read More

ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಬೀದಿಗಿಳಿದ ಜಿಲ್ಲಾ ಕಾಂಗ್ರೆಸ್ :

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಜಿಲ್ಲಾ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರಕುತ್ತಿಲ್ಲ. ಆಸ್ಪತ್ರೆ ಸಿಬ್ಬಂದಿ ವೈದ್ಯಕೀಯ ಪರಿಕರಗಳ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿರುವ ಕಾರ್ಯಕರ್ತರು ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Read More

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು. ಪೊಲೀಸ್​…

Read More

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!?

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!? ಹೊಸನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊಪ್ಪರಗುಂಡಿ ಸೇತುವೆ ಬಳಿಯಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು , ಎಂ ಗುಡ್ಡೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮನೆಯೊಂದರ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ , ಕೋಡುರು ಸಮೀಪದಲ್ಲಿ ಮುಖ್ಯ…

Read More

ಅರ್ಧ ಲಕ್ಷ ರೂ. ದಾಟಿದ ಕೆಂಪಡಕೆ ದರ, ಹಬ್ಬಕ್ಕೂ ಮುನ್ನ ಅಡಕೆ ಬೆಳೆಗಾರರಿಗೆ ಭರ್ಜರಿ ಗಿಫ್ಟ್‌!

ಶಿವಮೊಗ್ಗ : ನಗರದ ಅಡಿಕೆ ಮಾರುಕಟ್ಟೆಯಲ್ಲಿ ಕೆಂಪಡಿಕೆ ಶುಕ್ರವಾರ ಪ್ರತಿ ಕ್ವಿಂಟಲ್‍ಗೆ ಸರಾಸರಿ ₹51 ಸಾವಿರ ದರ ಕಂಡಿದೆ. ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಅಡಿಕೆ ದರ ಗಗನಮುಖಿಯಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಹೆಚ್ಚಿದ ದರದಿಂದಾಗಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿ ಅಡಿಕೆ ಮಾರುಕಟ್ಟೆಯಲ್ಲಿ ಆವಕ ಹೆಚ್ಚುತ್ತಿದೆ. ಅತೀ ಹೆಚ್ಚು ಅಡಿಕೆ ಬೆಳೆಯುವ ಹೊಸನಗರ,ತೀರ್ಥಹಳ್ಳಿ, ಸಾಗರ ಬಾಗದ ರೈತರ ಮನೆಯಲ್ಲಿ ಹಬ್ಬದ ವಾತಾವರಣವಾಗಿದೆ. ಕಳೆದ ಕೆಲ ತಿಂಗಳಿನಿಂದ ₹40 ಸಾವಿರ ಆಸುಪಾಸಿನಲ್ಲಿ ಅಡಿಕೆ ಖರೀದಿ ಆಗುತ್ತಿತ್ತು. ನಾಲ್ಕು ದಿನಗಳ…

Read More

ಪತ್ರಕರ್ತನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ – ಹಣಕ್ಕಾಗಿ ಬೇಡಿಕೆ

ಪತ್ರಕರ್ತನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ – ಹಣಕ್ಕಾಗಿ ಬೇಡಿಕೆ ಶಿವಮೊಗ್ಗ : ಪತ್ರಕರ್ತರೊಬ್ಬರಿಗೆ ಸ್ಕ್ಯಾಮ್‌ ಕಾಲ್‌ವೊಂದು ಬಂದಿದ್ದು ತಾವು ದೆಹಲಿ ಸೈಬರ್‌ ಕ್ರೈಂ ವಿಭಾಗದ ಪೊಲೀಸರು ನಿಮ್ಮ ಆಧಾರ್‌ ನಂಬರ್‌ ಮೂಲಕ ದೆಹಲಿಯಲ್ಲಿ ಕೆನರಾ ಬ್ಯಾಂಕ್‌ ನಲ್ಲಿ ಅಕೌಂಟ್‌ ಓಪನ್‌ ಮಾಡಲಾಗಿದೆ. ಅದರ ಮೂಲಕ ನರೇಶ್‌ ಗೋಯಲ್‌ ಮನಿಲ್ಯಾಂಡರಿಂಗ್‌ ಕೇಸ್‌ನಲ್ಲಿ  ಅಕ್ರಮವಾಗಿ ಹಣವರ್ಗಾವಣೆ ಮಾಡಲಾಗಿದೆ ಎಂದು ಹೆದರಿಸಿದ್ದಾರೆ. ಅಷ್ಟೆಅಲ್ಲದೆ, ಪ್ರಕರಣದಲ್ಲಿ ನಿಮ್ಮ ತಪ್ಪಿಲ್ಲವಾದರೆ, ತಮ್ಮ UPI ನಂಬರ್‌ಗೆ ಲಕ್ಷ ರೂಪಾಯಿ ತಕ್ಷಣವೇ ಹಾಕಬೇಕು ಎಂದು ಹೆದರಿಸಿದ್ದು, ಅರೆಸ್ಟ್‌…

Read More

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ  ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ. ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ. ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ.  24ರಿಂದ 23.08.2025…

Read More