Headlines

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್ ತನ್ನ ಸ್ನೇಹಿತ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿ ನಿಮಿತ್ತ ಹೋಗಿದ್ದ. ಪಾರ್ಟಿ ವೇಳೆ…

Read More

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ ದೆವ್ವ ಬಿಡಿಸುವ ನೆಪದಲ್ಲಿ ಹಲ್ಲೆ ನಡೆಸಿದ ಅದೇ ಗ್ರಾಮದ ಆಶಾ (35), ಆಕೆಯ ಪತಿ ಸಂತೋಷಕುಮಾರ್ (37) ಹಾಗೂ ಗೀತಮ್ಮ ಅವರ ಪುತ್ರ ಸಂಜಯ್ (20) ಅವರನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಜಂಬರಗಟ್ಟೆ ಗ್ರಾಮದ ಗೀತಮ್ಮ (45)…

Read More

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಆಗ್ರಹಿಸಿದ್ದಾರೆ. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ರಾಜ್ಯಕ್ಕೆ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಜಿಲ್ಲೆಯನ್ನು  ವಿಶ್ವ…

Read More

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ ಆಗ ಅಕ್ಕಪಕ್ಕದಲ್ಲಿದ್ದವರೂ ಗಲಾಟೆ ಬಿಡಿಸಿದ್ದಾರೆ‌. ತುಂಡಾದ ಮೂಗಿನೊಂದಿಗೆ ವಿದ್ಯಾ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ ವಿದ್ಯಾಳನ್ನು ರವಾನಿಸಲಾಗಿದೆ. ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೆ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಧರ್ಮಸ್ಥಳ ಸಂಘದಲ್ಲಿ…

Read More

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ 

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ  ಶಿವಮೊಗ್ಗ:  ವಿಟಮಿನ್ ಎ ಡ್ರಾಪ್ ಪಡೆದು ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಹಿರೆಸಾನಿಯ ಅಂಗನವಾಡಿಯ ಎಲ್ಲಾ ೧೩ ಮಕ್ಕಳು ಚೇತರಿಸಿಕೊಂಡಿದ್ದು, ನಾಳೆ ಬಿಡುಗಡೆ ಆಗುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ ೧೩ ಮಕ್ಕಳಿಗೆ ಗುರುವಾರ ಮಧ್ಯಾಹ್ನ ಇರುಳುಗಣ್ಣು ಮುಂಜಾಗ್ರತಾ ಕ್ರಮವಾಗಿ ವಿಟಮಿನ್ ಎ ಡ್ರಾಪ್ ಹಾಕಲಾಗಿತ್ತು. ನಂತರ ಸಂಜೆಯಿಂದ ೧೩ ಮಕ್ಕಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಈ…

Read More

ಮಕ್ಕಳು ಅಸ್ವಸ್ಥ  ಪ್ರಕರಣ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿಯ 13 ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ 10ಕ್ಕೂ ಹೆಚ್ಚು ಮಕ್ಕಳು ವಾಂತಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಲಾ ಮಕ್ಕಳನ್ನು  ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ ಮಕ್ಕಳು ವಿಟಮಿನ್ ಡ್ರಾಪ್ ಯಡವಟ್ಟಿನಿಂದ…

Read More

RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ

RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ ಹಾಕಿದ ನಂತರದಲ್ಲಿ ಈ ರೀತಿಯಾಗಿ ಸಮಸ್ಯೆಯಾಗಿದೆ ಎಂದು ಪೋಷಕರು ಆರೋಪಿಸುತಿದ್ದರೆ ಸ್ಥಳೀಯ ನೀರಿನ ಸಮಸ್ಯೆಯಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿರಬಹುದು ಎಂದು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳುತಿದ್ದಾರೆ. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ…

Read More

ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ

ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ – ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ಜೊತೆಗೆ ಮುಂಗಾರು ಮಳೆ ಸಹ ಆರಂಭವಾಗಿದೆ. ಕೃಷಿ ಚಟುವಟಿಕೆಗಳು ಗರಿಗೆದರಿವೆ. ರೈತರು ತಮ್ಮ ಜಮೀನುಗಳನ್ನು ಹದಮಾಡಿಟ್ಟುಕೊಂಡು, ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಖಾಸಗಿ ಅಂಗಡಿಗಳಿಗೆ ಬಿತ್ತನೆ ಬೀಜ ಮತ್ತು ಗೊಬ್ಬರಕ್ಕಾಗಿ ರೈತರು ಮುಗಿಬೀಳುತ್ತಿದ್ದಾರೆ. ಆದರೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಯೂರಿಯಾ ಗೂಬ್ಬರ ರೈತರಿಗೆ ಸಮರ್ಪಕವಾಗಿ ಗೊಬ್ಬರ ದೊರೆಯದೇ ರೈತರಿಗೆ ಸಂಕಷ್ಟ ಉಂಟಾಗಿದೆ. ಬಂಕಾಪುರದಲ್ಲಿ ರೈತ ಸಂಪರ್ಕ ಸೊಸೈಟಿ…

Read More

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ SAGARA | Moral police raid on a young man and a woman who were riding a bike – three arrested SAGARA | Moral police raid on a young man and a woman who were riding a bike – three arrested ರಾಜ್ಯದಲ್ಲಿ…

Read More

ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು

ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು ಕೋಣಂದೂರು: ಬೈಕ್ ಸವಾರನೊಬ್ಬರು ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಮಚಂದ್ರ (60) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಬೈಕ್ನಲ್ಲಿ ಚಲಿಸುತ್ತಿರುವಾಗ ತನ್ನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದಾಗಿ ರಾಮಚಂದ್ರ ಅವರಿಗೆ ಗಂಭೀರ ಸ್ವರೂಪದ ಪೆಟ್ಟುಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದೆಯಾದರೂ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅವರು…

Read More