Headlines

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು : ಹೊಂಬುಜಾ ಶ್ರೀ

ಹುಂಚ :  ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು ಎಂದು ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಹೇಳಿದರು. ಅವರು ಹೊಸನಗರ ತಾಲೂಕಿನ ಹುಂಚ ಗ್ರಾಮದ ಮಹಾವೀರ್ ಜೈನ್ ಭವನದಲ್ಲಿ ನಡೆದ ನವೋದಯ ಮತ್ತು ಮುರಾರ್ಜಿ ಶಾಲೆ – ಉಚಿತ ತರಬೇತಿ ಶಿಭಿರದಲ್ಲಿ ಭಾಗಿಯಾದ ಎಲ್ಲಾ ಮಕ್ಕಳಿಗೆ ಆಶೀರ್ವದಿಸಿ, ಅಭಿನಂದನಾ ಪತ್ರವನ್ನು ನೀಡಿ ಮಾತನಾಡಿ ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ….

Read More

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸು ಅಪಘಾತವಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮುಂಡಳ್ಳಿ ಸಮೀಪ‌ ನರ್ತಿಗೆ ಬಳಿ ಇಂದು ನಡೆದಿದೆ. ಚಾಮರಾಜನಗರ ಯಳಂದೂರಿನ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ…

Read More

ಮಾ.09 ರಿಂದ 15 ರವರೆಗೆ ಶ್ರೀ ಕ್ಷೇತ್ರ ಹೊಂಬುಜದಲ್ಲಿ ಜಗನ್ಮಾತೆ ಪದ್ಮಾವತಿ ದೇವಿಯ ಮಹಾರಥೋತ್ಸವ…

ರಿಪ್ಪನ್ ಪೇಟೆ: ಜೈನರ ದಕ್ಷಿಣ ಕಾಶಿಯೆಂದೇ ಪ್ರಖ್ಯಾತಿ ಪಡೆದಿರುವ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಮಾ. 9ರಿಂದ 15 ರವರೆಗೆ ಭಗವಾನ್ ಪಾರ್ಶ್ವನಾಥ ತೀರ್ಥಂಕರರ ಮತ್ತು ಮಹಾಮಾತೆ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥ ಯಾತ್ರಾ ಮಹೋತ್ಸವವು ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಏರ್ಪಡಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗುರುವಾರ (ಮಾ. 9) ಶ್ರೀ ಮಠದ ಬಸದಿಯಲ್ಲಿ ಶ್ರೀ ನೇಮಿನಾಥ ಸ್ವಾಮಿ ಬಸದಿ ಗಣಧರವಲಯ ಆರಾಧನೆ, 10ರಂದು ಮಕ್ಕಳ ಬಸದಿಯಲ್ಲಿ ಶ್ರೀ…

Read More

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಸಾಗರ ರಸ್ತೆ ಪುನೀತ್ ರಾಜ್‍ಕುಮಾರ್ ಸರ್ಕಲ್ ಬಳಿಯಲ್ಲಿ ಇಂದು ಸಂಜೆ ನಡೆದಿದೆ. ಚಂದಳ್ಳಿ ಗ್ರಾಮದ ಶಶಿಕಾಂತ್ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಆನಂದಪುರ ಕಡೆಯಿಂದ ಬರುತಿದ್ದ ಮಾರುತಿ ವ್ಯಾಗನರ್ ಕಾರು…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ವೃತ್ತದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಯಡೆಹಳ್ಳಿ ಸಮೀಪದ ಆಚಾಪುರ ನಿವಾಸಿ ಜೋಸೆಫ್ (23) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಂಜಾ ಸೇವನೆ ಹಾಗೂ ಮಾರಾಟದ ಬಗ್ಗೆ…

Read More

ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ

ಗಣಪತಿ ವಿಸರ್ಜನೆಗೆ ತೆರಳಿದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ ಶಿವಮೊಗ್ಗ : ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕನು ಆನೆ ಟ್ರಂಚ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಗೆರೆ ಅಂಚೆಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಮೃತನನ್ನು ನಾಗರಾಜ್ (34) ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಗ್ರಾಮದಲ್ಲಿ ಗಣಪತಿ ಪ್ರತಿಷ್ಠಾಪನೆ ನಡೆದಿದ್ದು, ನಿನ್ನೆ ವಿಸರ್ಜನೆ ನೆರವೇರಿಸಲಾಯಿತು. ಈ ವೇಳೆ ಟ್ರಂಚ್‌ ಬಳಿ ಕಾಲು ಜಾರಿ ಬಿದ್ದು ದುರ್ಘಟನೆ…

Read More

ANANDAPURA | ದೇವಸ್ಥಾನದ ಬೀಗ ಮುರಿದು ಬಂಗಾರದ ತಾಳಿ ಹಾಗೂ ನಗದು ದೋಚಿದ ಕಳ್ಳರು

ANANDAPURA | Thieves break temple lock, steal gold locket and cash ANANDAPURA | ದೇವಸ್ಥಾನದ ಬೀಗ ಮುರಿದು ಬಂಗಾರದ ತಾಳಿ ಹಾಗೂ ನಗದು ದೋಚಿದ ಕಳ್ಳರು ANANDAPURA | Thieves break temple lock, steal gold locket and cash ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿರಗುಪ್ಪೆ ಗ್ರಾಮದಲ್ಲಿರುವ ಮಾರಿಕಾಂಬಾ ದೇವಾಲಯದಲ್ಲಿ ಕಳ್ಳತನ ಸಂಭವಿಸಿದೆ. ಡಿಸೆಂಬರ್ 22ರ ರಾತ್ರಿ ಈ ಘಟನೆ ನಡೆದಿದ್ದು, ದೇಗುಲದ…

Read More

BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ?

Good News for BPL Card Applicants | Distribution of BPL Ration Card Starts – How to Get It? BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ? Good News for BPL Card Applicants | Distribution of BPL Ration Card Starts – How to Get It? Good News for BPL Card…

Read More

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ|arrested

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಬಂಧನ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಿಂದ ಖಾಸಗಿ ಬಸ್‌ನಲ್ಲಿ ಸಾಗರಕ್ಕೆ ದನದ ಮಾಂಸ ತಂದು ಮಾರಾಟ ಮಾಡುತ್ತಿದ್ದ ಸಾಗರ ಮೂಲದ ಇಮ್ತಿಯಾಜ್ ಎನ್ನುವವನನ್ನು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ದನದ ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈಗಾಗಲೇ ಹಲವು ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಗುರುವಾರ 40 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಾರದ ಹಿಂದೆ…

Read More

ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ದ ಜೆಡಿಎಸ್ ಪ್ರತಿಭಟನೆ::

ರಿಪ್ಪನ್ ಪೇಟೆ:: ಕರ್ನಾಟಕ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ತೈಲ ಬೆಲೆ ಏರಿಕೆ ಹಾಗೂ ಜನಸಾಮಾನ್ಯರು ಉಪಯೋಗಿಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇದರಿಂದ ಬಡವರು, ರೈತರು,ಕೂಲಿಕಾರ್ಮಿಕರು ಹೈರಾಣಾಗಿ ಹೋಗಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಇಂದು ರಿಪ್ಪನ್ ಪೇಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಆರ್ ಎ…

Read More