ಮಲೆನಾಡಲ್ಲೊಂದು ಹೃದಯವಿದ್ರಾವಕ ಘಟನೆ : ವ್ಯವಹಾರದಲ್ಲಿ ನಷ್ಟಕ್ಕೊಳಗಾದ ದಂಪತಿಗಳ ಆತ್ಮಹತ್ಯೆ
ತೀರ್ಥಹಳ್ಳಿ : ವ್ಯವಹಾರದಲ್ಲಿ ನಷ್ಟ ಅನುಭವಿಸಿ ಮನನೊಂದ ದಂಪತಿಗಳಿಬ್ಬರೂ ನೇಣಿಗೆ ಕೊರಳು ಒಡ್ಡಿದ ದುರಂತ ಘಟನೆ ತಾಲ್ಲೂಕಿನ ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ನಡೆದಿದೆ. ಸಂತೆಹಕ್ಲು ಸಮೀಪದ ಮಂಜುನಾಥ್ (46) ಮತ್ತು ಉಷಾ (43) ನೇಣಿಗೆ ಶರಣಾದ ದಂಪತಿಗಳಾಗಿದ್ದು, ಇವರಿಗೆ ಇಬ್ಬರು ಪುತ್ರರಿದ್ದಾರೆ. ಸುಮಾರು 2 ಎಕರೆ ಜಮೀನು ಇದ್ದು ಸಣ್ಣ ಕೃಷಿಕರಾಗಿದ್ದಾರೆ, ಹಲವು ಕೃಷಿ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಹಲವು ಕಡೆ ಸಾಲವನ್ನು ಮಾಡಿಕೊಂಡಿದ್ದು ಕೊರೊನಾ ಹಿನ್ನೆಲೆಯಲ್ಲಿ ಅವರಿಗೆ ಅದನ್ನು ನಿರ್ವಹಣೆ ಮಾಡಲು ಕಷ್ಟವಾಗಿತ್ತು. ಇದರಿಂದ ಮನನೊಂದ…


