ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು|accident

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ನ್ಯಾರ್ಶಿ ಸಮೀಪ ಬೈಕ್ ಕಂದಕಕ್ಕೆ ಉರುಳಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತರಾದ  ಘಟನೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಬಾಳೂರು ಗ್ರಾಮದ ಕ್ಯಾಂಪ್ ನಿವಾಸಿಗಳಾದ ಸುಬ್ರಹ್ಮಣ್ಯ (20) ಮತ್ತು ಹರೀಶ (20) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಂಚಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ…

Read More

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು! ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ. ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.ನಿನ್ನೆ ಚಿತ್ರೀಕರಣ ಮುಗಿಸಿ…

Read More

Ripponpete | ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ

ಹೊಸನಗರ ತಾಲೂಕು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಕಾರ್ಯಗಾರ ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ ರಿಪ್ಪನ್ ಪೇಟೆ : ಸಮಾಜದ ಸೇವೆಯಲ್ಲಿ ಅತ್ಯುನ್ನುತವಾದ ಸೇವೆಯನ್ನು ನೀಡುತ್ತಿರುವವರು ಶಿಕ್ಷಕರುಗಳು. ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ ಎಂದು  ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್ ಎಲ್. ಭೋಜೇಗೌಡ  ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರುಗಳು ಸಮಾಜದ ಮುಖ್ಯ…

Read More

ಅಲ್ಪಸಂಖ್ಯಾತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮೋದಿ ಸೂಚನೆ ನೀಡಿದ್ದಾರೆ – ಬಿ ಎಸ್ ಯಡಿಯೂರಪ್ಪ|bsy

ಶಿವಮೊಗ್ಗ : ರಾಷ್ಟ್ರೀಯ ಕಾರ್ಯಕಾರಿಣಿ ಉತ್ತಮವಾಗಿ ನಡೆಯಿತು ದೇಶದ ಹಾಗೂ ರಾಜ್ಯಗಳ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆಯಾಗಿದ್ದು, ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳನ್ನು ಜೊತೆಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ಚುನಾವಣೆ ಗೆಲ್ಲಲು ಬೇಕಾದ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮೋದಿಯವರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾರ್ಗದರ್ಶನ ಮಾಡಿದರು. ಬಹಳ ಉತ್ಸಾಹದಿಂದ ವಾಪಸ್ ಬಂದಿದ್ದೇವೆ. ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ನಾವು ಬರಲೇಬೇಕು.ಮೋದಿ,…

Read More

ಸಾಗುವಾನಿ ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ

ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ Forest officials in Shivamogga arrested a 24-year-old man while he was allegedly loading illegally cut teak wood into an Omni vehicle near Gilalagundi forest. The vehicle, chainsaw, and teak logs were seized. ಶಿವಮೊಗ್ಗ, ಜುಲೈ 5: ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ…

Read More

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಅಕ್ರಮ ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್ ಹೊಸನಗರ : ಅಕ್ರಮವಾಗಿ ಮರಳು ಸಾಗಾಟ ನಡೆಸುತಿದ್ದ ಟಿಪ್ಪರ್ ವಾಹನವನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಟಿಪ್ಪರ್ (KA 17 F 2543) ಲಾರಿಯನ್ನು ವಶಕ್ಕೆ ಪಡೆದಿದ್ದಾರೆ ಅಕ್ರಮ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವ…

Read More

Kashmira Terrorist Attack: ಮಂಜುನಾಥ್‌ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ

Kashmira Terrorist Attack: ಮಂಜುನಾಥ್‌ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರುವ ಪ್ರಕ್ರಿಯೆ ಪ್ರಾರಂಭವಾಗಿದೆ. ನವದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಮಂಜುನಾಥ್ ರಾವ್ ಪಾರ್ಥಿವ ಶರೀರವನ್ನು ಕಳಿಸುವ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದು, ಬುಧವಾರ ತಡರಾತ್ರಿ ಪಾರ್ಥಿವ ಶರೀರ ಬೆಂಗಳೂರು ನಗರಕ್ಕೆ ಬರಲಿದೆ. ಬಳಿಕ ರಸ್ತೆ ಮೂಲಕ ಶಿವಮೊಗ್ಗಕ್ಕೆ ತಲುಪಲಿದೆ.ಪಹಲ್ಗಾಮ್‌ ಉಗ್ರರ…

Read More

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ ಆಯ್ಕೆ

ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ ಆಯ್ಕೆ ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ಐದನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷರಾಗಿ ಜಿ ಆರ್ ಗೋಪಾಲಕೃಷ್ಣ , ಪ್ರಧಾನ ಕಾರ್ಯದರ್ಶಿಗಳಾಗಿ ಹಸನಬ್ಬ ಬ್ಯಾರಿ ಹಾಗೂ ಶ್ರೀಧರ್ ಚಿಗುರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದೇವರಾಜ್ ಕೆ ,ರಮೇಶ್ ಫ್ಯಾನ್ಸಿ , ಸಾಜೀದಾ ಹನೀಪ್, ವಾಣಿ ಗೋವಿಂದಪ್ಪ ಗೌಡ , ಸಹಕಾರ್ಯದರ್ಶಿಯಾಗಿ ದೀಪಾ ನಾಗರಾಜ್…

Read More

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man allegedly killed his father in Goragodu near Tumari, Sagara taluk, Shivamogga, after a heated argument. Police have detained the accused and are investigating the case. ಶಿವಮೊಗ್ಗ: ಜೈಲಿನಿಂದ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಮನೆಗೆ ಮರಳಿದ್ದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪದ ಘಟನೆ ಸಾಗರ ತಾಲೂಕಿನ ತುಮರಿ…

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More