Headlines

ಆನಂದಪುರದ ಮಧ್ಯ ರಸ್ತೆಯಲ್ಲಿ ಲಾಂಗ್ ಝಳಪಿಸಿದ ಯುವಕ , ಸ್ಥಳೀಯರಿಂದ ಧರ್ಮಧೇಟು : ಅಷ್ಟಕ್ಕೂ ಅಲ್ಲಿ ನಡೆದದ್ದೇನು..?? Crime News

ಆನಂದಪುರದ ಮಧ್ಯ ರಸ್ತೆಯಲ್ಲಿ ಲಾಂಗ್ ಝಳಪಿಸಿದ ಯುವಕ , ಸ್ಥಳೀಯರಿಂದ ಧರ್ಮಧೇಟು : ಅಷ್ಟಕ್ಕೂ ಅಲ್ಲಿ ನಡೆದದ್ದೇನು..?? Crime News ಆನಂದಪುರ : ಇಲ್ಲಿನ ಹೆದ್ದಾರಿಯಲ್ಲೆ ಯುವಕನೊಬ್ಬ ಲಾಂಗ್‌ ಝಳಪಿಸಿ ಹೆದರಿಸಿದ್ದು ಇದರಿಂದ ಜನರು ಆತಂಕಗೊಂಡ ಘಟನೆ ನಡೆದಿದೆ.  ಆನಂದಪುರದ ಹೆದ್ದಾರಿಯಲ್ಲಿ ಯುವಕನೊಬ್ಬ ಲಾಂಗ್‌ ಹಿಡಿದು ರೋಡಲ್ಲಿ ಬೀಸಿದ್ದಾನೆ.  ವೆಹಿಕಲ್‌ಗಳ ಮೇಲೆ ಆತ ಲಾಂಗ್‌ ಬೀಸಿದ್ದಾನೆ ಎನ್ನಲಾಗಿದೆ. ಸುಮಾರು ಇಪ್ಪತ್ತು ನಿಮಿಷಗಳ ಕಾಲ ಈ ಹೈಡ್ರಾಮಾ ನಡೆದಿದೆ ಎನ್ನಲಾಗುತಿದ್ದು,ಇದರಿಂದ ರಸ್ತೆಯಲ್ಲಿ ಪ್ರಯಾಣಿಸುತಿದ್ದ ವಾಹನ ಮಾಲೀಕರು ಕೆಲಕಾಲ ಆತಂಕಗೊಂಡಿದ್ದಾರೆ….

Read More

ಗ್ರಾಮ ಪಂಚಾಯತ್ ಜಾಗ ಒತ್ತುವರಿ ಆರೋಪ: ತೆರವು ಕಾರ್ಯಾಚರಣೆಯಲ್ಲಿ ಉದ್ವಿಗ್ನತೆ, ಮಾತಿನ ಚಕಮಕಿ

Tension erupted in Ripponpet as gram panchayat officials attempted to clear alleged encroachment on village site land, leading to a verbal clash and police case. ರಿಪ್ಪನ್ ಪೇಟೆ : ಪಟ್ಟಣದ ಹಳೆಯ ಸಂತೇ ಮಾರ್ಕೆಟ್ ಪ್ರದೇಶದಲ್ಲಿ ಇರುವ ಸರ್ವೆ ನಂ. 43 ರ ಗ್ರಾಮ ಪಂಚಾಯತ್ ಸುಪರ್ದಿಯ ಜಾಗದಲ್ಲಿ ಅಕ್ರಮ ಒತ್ತುವರಿ ಆರೋಪದ ಹಿನ್ನೆಲೆ ಗ್ರಾಮ ಪಂಚಾಯತ್ ವತಿಯಿಂದ ನಡೆಸಿದ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ…

Read More

ಶಿವಮೊಗ್ಗದಲ್ಲಿ ಪೌರಕಾರ್ಮಿಕರ ಮೇಲೆ ಹಲ್ಲೆ ವಿಚಾರ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಖುದ್ದು ಎಸ್ಪಿಗೆ ಕರೆ ಮಾಡಿದ್ದೇಕೆ !!! ದೂರವಾಣಿಯಲ್ಲಿ ಹೇಳಿದ್ದಾದರೂ ಏನು ???

ಶಿವಮೊಗ್ಗ : ನಗರದಲ್ಲಿ ಇತ್ತೀಚೆಗೆ ಪೌರ ಕಾರ್ಮಿಕರ ಮೇಲೆ ಕೆಲವು ಕಿಡಿಗೇಡಿಗಳು ಕಸ ವಿಲೇವಾರಿಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಪೌರ ಕಾರ್ಮಿಕರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಚಿವ ಕೆ.ಎಸ್. ಈಶ್ವರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಸ ವಿಲೇವಾರಿ ಮಾಡುವವರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪೌರ ಕಾರ್ಮಿಕರು ಜನರ ಸೇವೆ ಮಾಡುತ್ತಾರೆ. ಅವರ ಮೇಲೆ ಹಲ್ಲೆ ಮಾಡುವಷ್ಟರಮಟ್ಟಿಗೆ…

Read More

ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು. ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ…

Read More

ಈಡೇರಿದ ತೀರ್ಥಹಳ್ಳಿ ಜನತೆಯ ಬಹುದಿನಗಳ ಕನಸು :ಸಚಿವರಾಗಿ ಆರಗ ಜ್ಞಾನೇಂದ್ರ ಇಂದು ಪ್ರಮಾಣ ವಚನ ಸ್ವೀಕಾರ

  ತೀರ್ಥಹಳ್ಳಿ: ಶಾಸಕ ಆರಗ ಜ್ಞಾನೇಂದ್ರರಿಗೆ ಸಿ.ಎಂ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ದೊರೆತಿದ್ದು ಇಂದು ಮಧ್ಯಾಹ್ನ 2.15 ಕ್ಕೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವಿಷಯವನ್ನು ಮಾಧ್ಯಮದವರೊಂದಿಗೆ ಹಂಚಿಕೊಳ್ಳುವಾಗ ಜ್ಞಾನೇಂದ್ರ ರವರು ತುಂಬಾ ಭಾವುಕರಾಗಿದ್ದರು.ಸಚಿವ ಸ್ಥಾನಕ್ಕಾಗಿ ಯಾವುದೇ ಲಾಭಿ ಮಾಡದ ಜನನಾಯಕನಿಗೆ ಸಚಿವ ಸ್ಥಾನ ಹುಡುಕಿಕೊಂಡು ಬಂದಿದೆ. ಇದೇ ಮೊದಲ ಬಾರಿಗೆ ಸಚಿವರಾಗಿ ಅರಗ ಜ್ಞಾನೇಂದ್ರರವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಹಿರಿಯ ನಾಯಕರಾಗಿ 4 ಬಾರಿ…

Read More

ತೀರ್ಥಹಳ್ಳಿಯಲ್ಲಿ ಸಿನಿಹಬ್ಬ ಕಿರುಚಿತ್ರೋತ್ಸವ ಯಶಸ್ವಿ – ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ನಿರ್ದೇಶನದ ಕಿರುಚಿತ್ರ ಪ್ರದರ್ಶನ|Short films

ತೀರ್ಥಹಳ್ಳಿ : ಡಿಸೆಂಬರ್ 15 ರಂದು ತೀರ್ಥಹಳ್ಳಿ “ಸಿನಿ ಹಬ್ಬ” ಕಿರು ಚಿತ್ರೋತ್ಸವ  ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಕುರ್ಕುರೆ ಕ್ರಿಯೇಷನ್ಸ್ ತಂಡ ಆಯೋಜಿಸಿದ್ದು , ಶಿವಮೊಗ್ಗ ಸಿನಿಮಾಸ್ ಅಡ್ಡ ಹಾಗೂ ಸತ್ಯ ಪಿಚ್ಚರ್ಸ್ ಅವರು ಭಾಗಿಯಾಗಿದ್ದರು, ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ಜೊಸೇಫ್ ನಿರ್ದೇಶನದ ಸಂಭಾಷಣೆ ಇಲ್ಲದ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಿರುಚಿತ್ರ “ಎಕ್ಸಿಬಿಷನಿಸಂ ” ಸೇರಿದಂತೆ 6 ಕಿರು ಚಿತ್ರಗಳ ಪ್ರದರ್ಶನವನ್ನು ಮಾಡಲಾಗಿತ್ತು.   ರಾಮಾ ರಾಮಾ ರೇ…

Read More

ಗಾಂಜಾ ಮಾರಾಟಕ್ಕೆ ಯತ್ನ – ಬೈಕ್ ಸಹಿತ ಮೂವರು ಯುವಕರ ಬಂಧನ|Arrested

ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.   ತುಂಗ ನಗರ ಪೊಲೀಸ್ ಠಾಣೆ ವ್ಯಾಪ್ತಿ ನಿಸರ್ಗ ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಅಡಿ ಮೂವರು ಆರೋಪಿಗಳನ್ನ ಪೊಲೀಸರು ಬಂದಿಸಿದ್ದು 615 ಗ್ರಾಂ ಗಾಂಜಾ ವಶ ಪಡಿಸಿಕೊಂಡಿದ್ದಾರೆ. ಮಂಗಳವಾರ ಶಿವಮೊಗ್ಗ ಡಿವೈಎಸ್.ಪಿ ನೇತೃತ್ವದಲ್ಲಿ, ತುಂಗಾನಗರದ ಪಿಎಸ್ ಐ ಮತ್ತು ಸಿಬ್ಬಂಧಿಗಳ ತಂಡವು ನಿಸರ್ಗ ಲೇ ಔಟ್ ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿತರಾದ 1) ಮದಾರಿ ಪಾಳ್ಯದ…

Read More

ಮಲೆನಾಡಿಗರ ನಿದ್ರೆಗೆಡಿಸಿರುವ ಮಂಗನ ಖಾಯಿಲೆ :ಇಂದು ಜಿಲ್ಲೆಯಲ್ಲಿ ಎರಡನೇ ಪ್ರಕರಣ ದಾಖಲು

 ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಪತ್ತೆಯಾಗಿದೆ. ಇದೇ ತಿಂಗಳಲ್ಲಿ ಕಂಡುಬಂದ ಎರಡನೇ ಪ್ರಕರಣ ಇದಾಗಿದೆ‌. ಶಾಲೆಯ ಶಿಕ್ಷಕ ರಾಘವೇಂದ್ರ ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಒಂದು ವಾರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೌದು, ಮಲೆನಾಡಿಗರನ್ನು ಈ ಪರಿ ನಿದ್ದೆಗೆಡುವಂತೆ ಮಾಡಿದೆ ಮಂಗನ ಕಾಯಿಲೆ. ಕ್ಯಾಸನೂರ್ ಡಿಸೀಸ್ ಎಂದೂ ಕರೆಯಲ್ಪಡುವ ಮಂಗನ ಕಾಯಿಲೆ ಈಗಾಗಲೇ ಜಿಲ್ಲೆಯಲ್ಲಿ ಇಬ್ಬರಲ್ಲಿ ಆವರಿಸಿದೆ. ಏನಿದು ಮಂಗನ ಕಾಯಿಲೆ? ಮಂಗನ ಕಾಯಿಲೆ ಕೆ ಎಫ್…

Read More

ಕಾಲೇಜಿನ ಗ್ರಂಥಾಲಯದಲ್ಲಿ ಪ್ರತ್ಯಕ್ಷವಾದ ಹಾವು – ಭಯ ಮೂಡಿಸಿದ್ದ ಬರೋಬ್ಬರಿ 8 ಅಡಿ ಉದ್ದದ ಹಾವು

ಶಿವಮೊಗ್ಗ ನಗರದ ಸಹ್ಯಾದ್ರಿ ಸೈನ್ಸ್ ಕಾಲೇಜು ಆವರಣದಲ್ಲಿರುವ ಗ್ರಂಥಾಲಯದಲ್ಲಿಯೇ ಹಾವೊಂದು ಕಾಣಿಸಿಕೊಂಡಿತ್ತು.  ಮೊನ್ನೆ ಕಾಲೇಜಿನ ಗ್ರಂಥಾಲಯದಲ್ಲಿ ಸುಮಾರು 8 ಅಡಿ ಉದ್ದದ ಹಾವೊಂದು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಪುಸ್ತಕಗಳ ರಾಶಿಯ ಅಡಿಯಲ್ಲಿ ಸೇರಿಕೊಂಡಿದ್ದ ಹಾವು, ಆಗಾಗ ಸದ್ದು ಮಾಡುತ್ತಿತ್ತು. ಮೊದಲೇ ನಿಶ್ಚಬ್ಧವಾಗಿದ್ದ ಲೈಬ್ರರಿಯಲ್ಲಿ ಹಾವಿನ ಸದ್ದು ತುಸು ಜೋರಾಗಿಯೇ ಕೇಳಿಬರುತ್ತಿತ್ತು.  ಇನ್ನೂ ಏನು ಶಬ್ಧವಾಗುತ್ತಿದೆ ಎಂದು ನೋಡಿದ ಸಿಬ್ಬಂದಿ ಹಾವೊಂದು ಗೃಂಥಾಲಯವನ್ನು ಸೇರಿಕೊಂಡಿರುವುದು ಗೊತ್ತಾಗಿದೆ. ತಕ್ಷಣ ಹಾವನ್ನು ಸುರಕ್ಷಿತವಾಗಿ ಹಿಡಿಯಬಲ್ಲ ಸ್ನೇಕ್​ ಜಯಂತ್ ಬಾಬುರನ್ನ ಸಂಪರ್ಕಿಸಿದ್ದಾರೆ.  ಕರೆ…

Read More

ರಿಪ್ಪನ್‌ಪೇಟೆ : ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಉಡುಪಿಯಲ್ಲಿ ಪತ್ತೆ : ಸುಖಾಂತ್ಯಗೊಂಡ ನಾಪತ್ತೆ ಪ್ರಕರಣ

ರಿಪ್ಪನ್‌ಪೇಟೆ : ಇತ್ತೀಚೆಗೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ  ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರದ ನಿವಾಸಿ ಸೌಂದರ್ಯ ತನ್ನ ಇಬ್ಬರು ಮಕ್ಕಳೊಂದಿಗೆ ಉಡುಪಿಯ ಸಾಂತ್ವಾನ ಕೇಂದ್ರದಲ್ಲಿ ಪತ್ತೆಯಾಗಿದ್ದಾರೆ. ಕಳೆದ ಹತ್ತು ವರ್ಷದ ಹಿಂದೆ ಹೆದ್ದಾರಿಪುರ ಗ್ರಾಮದ ಶಶಿಕುಮಾರ್ ಎಂಬಾತನೊಂದಿಗೆ ಸೌಂದರ್ಯ ವಿವಾಹವಾಗಿದ್ದರು . ಶಶಿ ಕುಮಾರ್ ಪತ್ನಿಗೆ ಮಾನಸಿಕ ಕಿರುಕುಳ ದೈಹಿಕ ಹಲ್ಲೆ ನಡೆಸುತ್ತಿದ್ದ ಕಾರಣ ಪತಿಯ ನಡೆಗೆ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಿದ್ದಾರೆ. ನಿನ್ನೆ ಮೂವರು ಪತ್ತೆಯಾಗಿ ಉಡುಪಿ ಸಾಂತ್ವಾನ ಕೇಂದ್ರದಲ್ಲಿದ್ದಾರೆ….

Read More