Headlines

Ripponpet | ಗ್ರಾಮೀಣ ಯುವಕರಲ್ಲಿ ಕ್ರೀಡಾ ಚಟುವಟಿಕೆಯಿಂದ ಕ್ರೀಯಾಶೀಲ ಬದುಕು – ಶಾಸಕ ಬೇಳೂರು

ಗ್ರಾಮೀಣ ಯುವಕರಲ್ಲಿ ಕ್ರೀಡಾ ಚಟುವಟಿಕೆಯಿಂದ ಕ್ರೀಯಾಶೀಲ ಬದುಕು’’ ರಿಪ್ಪನ್‌ಪೇಟೆ;-ದೈನಂದಿನ ಕ್ರೀಡಾ ಚಟುವಟಿಕೆಯಲ್ಲಿ ಗ್ರಾಮಸ್ಥರು ಹಾಗೂ ಮಕ್ಕಳು ತೊಡಗಿಸಿಕೊಂಡಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವ ಜೊತೆಗೆ ಕ್ರೀಯಾಶೀಲರಾಗಿರಬಹುದು  ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಛತ್ರಪತಿ ಶಿವಾಜಿ ಯುವಕ ಸಂಘದವರು ಆಯೋಜಿಸಲಾದ ಕ್ರಿಕೇಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಕ್ರಿಕೇಟ್ ಬ್ಯಾಟಿಂಗ್ ಮಾಡಿ ನಂತರ ಮಾತನಾಡಿ ಗ್ರಾಮಸ್ಥರು ಒತ್ತಡದ ಬದುಕಿನಲ್ಲಲಿ ತಮ್ಮ ಅಲ್ಪ ಸಮಯವನ್ನು ವ್ಯಾಯಾಮ…

Read More

ಸಾಗರ ತಾಲೂಕಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಅಮಾನತು : ಪೋಕ್ಸೋ ಕಾಯ್ದೆಯಡಿ ಬಂಧನ

 ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತು ಮಾಡಿ,ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪೋಷಕರು ಶಾಲಾಭಿವೃದ್ಧಿ ಸಮಿತಿಗೆ ದೂರು ನೀಡಿದ್ದರು. ನಂತರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಲಾಗಿದೆ. ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರನ್ನು ವಿಚಾರಿಸಿದ್ದಾರೆ. ಪೋಷಕರನ್ನು ಮಾತನಾಡಿಸಿದ್ದಾರೆ. ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ. ಇಂದು…

Read More

ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಗ್ರಾಪಂ ಪಿಡಿಓ | lokayutha

ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಗ್ರಾಪಂ ಪಿಡಿಓ | lokayutha ಶಿಕಾರಿಪುರ : ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಮಹಿಳೆಗೆ ಪರಿಹಾರದ ಚೆಕ್ ನೀಡಲು ಲಂಚ ಪಡೆಯುತಿದ್ದ ತಾಲೂಕಿನ ಬಗನಕಟ್ಟೆ ಗ್ರಾಪಂ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಮಂಜುನಾಥ ಎಸ್. ಲೋಕಾಯುಕ್ತ ಬಲೆಗೆ ಬಿದ್ಧ ಪಿಡಿಒ ದಾಳಿ ನಡೆದಿದೆ. ಶಿವಮೊಗ್ಗ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದ ಪಿಡಿಒ ಸಾಕಮ್ಮ ಎಂಬುವರ ಬಳಿ ಅತಿವೃಷ್ಠಿಯಿಂದ ಬಿದ್ದ ಮನೆಗೆ ಲಂಚ ಪಡೆಯುವಾಗ ದಾಳಿ ನಡೆಸಲಾಗಿದೆ. ಸಾಕಮ್ಮ ಎಂಬುವವರ ಬಳಿ 6 ಸಾವಿರ…

Read More

ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ: ಮಾಜಿ ಸಭಾಪತಿ ಹಾಗೂ ಹಾಲಿ ಶಾಸಕ ರಮೇಶ್ ಕುಮಾರ್ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲೂಕ್ ಬಿಜೆಪಿ ಮಹಿಳಾ ಮೋರ್ಚಾ ಮತ್ತು ರಿಪ್ಪನ್ ಪೇಟೆಯ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೇತೃತ್ವವಹಿಸಿ ಮಾತನಾಡಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿನ್ನೆ ಮಾಜಿ ಸ್ಪೀಕರ್ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರವರು…

Read More

ಕಾಸ್ಪಾಡಿ ತಿರುವಿನಲ್ಲಿ ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು|Accident

ಸಾಗರ : ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಹರೀಶ್ ಕುಮಾರ್ (42) ಎಂಬುವರು ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಹೋದರಿಯ ಮನೆಗೆ ಹೋಗಿ ವಾಪಾಸ್ ಮನೆಗೆ ಬೈಕ್ ನಲ್ಲಿ ಮರಳುವಾಗ ಕಾಸ್ಪಾಡಿ ತಿರುವಿನಲ್ಲಿ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದ್ದಾರೆ.ತೀವ್ರ ಸ್ವರೂಪದ ಗಾಯವಾಗಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಬುಧವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಾದಾಪುರದ ಸರ್ಕಾರಿ ಶಾಲೆಗೆ ಯುವ ಟ್ರಸ್ಟ್ ವತಿಯಿಂದ ಬ್ಯಾಗ್,ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ|yuva trust

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸೋಮವಾರ ಶಾಲಾ ಬ್ಯಾಗ್, ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಬೆಂಗಳೂರು ಯುವ ಟ್ರಸ್ಟ್ ನ ಸಂಸ್ಥಾಪಕರಾದ ಜಿ ಕಿರಣ್ ಸಾಗರ್, ಟ್ರಸ್ಟಿಗಳಾದ ಸುನಿಲ್ ಬಿ. ವಿ, ಶ್ವೇತ ಎಸ್ ರಾವ್, ಅಶೋಕ್ ಬಿ ಯಾದವ್ ಇವರ ನೇತೃತ್ವದಲ್ಲಿ ಯುವ ಟ್ರಸ್ಟ್ ನ ಆಶಯದಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಸಮಾನ…

Read More

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಹಾಗೂ ರಿಪ್ಪನ್ ಪೇಟೆ ಗ್ರಾಮಾಡಳಿತದಿಂದ ಚಿಕ್ಕಬೀರನ ಕೆರೆಗೆ ಕಾಯಕಲ್ಪ:

ರಿಪ್ಪನ್ ಪೇಟೆ : ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ರಾಮಾಧ್ಯಕ್ಷೆ ಮಂಜುಳಾರವರ ಅಧ್ಯಕ್ಷತೆಯಲ್ಲಿ ಚಿಕ್ಕಬೀರನಕೆರೆ ಕೆರೆ ಹೂಳು ತೆಗೆಯುವ ಬಗ್ಗೆ ಸಾರ್ವಜನಿಕರ ಸಮಾಲೋಚನಾ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಸರ್ಕಾರ ಮಾಡದಂತಹ ಅಭಿವೃದ್ದಿ ಕಾರ್ಯಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಶ್ವಾರ್ಥ ಸೇವೆಯ ಮೂಲಕ ಕೆರೆಗಳ ಪುನಶ್ಚೇತನಕ್ಕೆ ಹೆಚ್ಚು ಆದ್ಯತೆ ನೀಡುವುದರೊಂದಿಗೆ ಕೆರೆಗಳಲ್ಲಿನ ಹೂಳು ತೆಗೆದು ಅಂತರ್ಜಲ ಹೆಚ್ಚಿಸುವ ಕಾರ್ಯದಲ್ಲಿ ಧರ್ಮಸ್ಥಳ…

Read More

ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja

ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja ಹೊಂಬುಜ : ಜೈನ ಪರಂಪರೆಯಲ್ಲಿ ಶ್ರುತಪಂಚಮಿ ಪರ್ವವು ಜೈನ ಧರ್ಮದ ಆಗಮ ಗ್ರಂಥಗಳ ಮಹತ್ವವನ್ನು ಸಾರುತ್ತದೆ. ಪ್ರಾಚೀನ ಜೈನಾಚಾರ ಗ್ರಂಥಗಳು ಆಧ್ಯಾತ್ಮಕ ಚಿಂತನೆಗೆ ರಚಿಸಲ್ಪಟ್ಟಿವೆ. ಶ್ರುತ ಎಂದರೆ ಕಿವಿಯಿಂದ ಕೇಳಿದ ದಿವ್ಯಧ್ವನಿಯ ಉಪದೇಶಗಳು ಕೃತಿ ರೂಪದಲ್ಲಿ ಧರ್ಮ ಆಚರಣೆಯ ದಾರಿದೀಪವಾಗಿ ಇಂದು ಧಾರ್ಮಿಕ ಮನೋಧರ್ಮ ಬೆಳೆಸಿಕೊಳ್ಳಲು ಪೂರಕವಾಗಿವೆ ಎಂದು ಹೊಂಬುಜ ಶ್ರೀಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ…

Read More

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು|crime news

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದಲ್ಲಿ ಬಾಳೆಕೊನೆ ಕಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಗರ ಮೂಲದ ಇಮ್ರಾನ್ ಎಂಬುವವರಿಗೆ ಗೌಡಕೊಪ್ಪ ಗ್ರಾಮದ ಅರುಣ್ ಕುಮಾರ್ ಎಂಬುವವರಿಗೆ ಸೇರಿದ ಬಾಳೆ ತೋಟದ ಬಾಳೆಕೊನೆಯನ್ನು ತೂಕದ ಲೆಕ್ಕದಲ್ಲಿ ಕಟಾವು ಮಾಡಲು ಮಾತುಕತೆ ನಡೆದಿತ್ತು. ಆ ಹಿನ್ನಲೆಯಲ್ಲಿ ಸೋಮವಾರ ಬಾಳೆಕೊನೆ…

Read More

ಅಕ್ರಮ ಮರಳು ಗಣಿಗಾರಿಕೆಯ ವಿರುದ್ದ ಭೂ ವಿಜ್ಞಾನ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ : ಎರಡು ಲಾರಿ,ಎರಡು ಜೆಸಿಬಿ ವಶಕ್ಕೆ..!!

ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಕಲ್ಲು ಗಣಿಗಾರಿಕೆಗಳು ತಾರಕಕ್ಕೇರಿದ್ದು ಅದರಂತೆ ಶಿವಮೊಗ್ಗದ ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ನವೀನ್ ವಿ.ಎಸ್ ನೇತೃತ್ವದ ತಂಡ ನಂಜವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ತುಂಬಿದ ಎರಡು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಹಾಗೇಯೆ ಆನಂದಪುರದಲ್ಲಿ ಅಕ್ರಮ ಜಂಬಿಟ್ಟಿಗೆ ನಡೆಸುತ್ತಿದ್ದ ಗಣಿಗಾರಿಕೆಗೆ ನುಗ್ಗಿ ಅಕ್ರಮಕ್ಕೆ ಬಳಸಿದ್ದ ಎರಡು ಜೆಸಿಬಿ ವಶ ಪಡಿಸಿಕೊಂಡು ಒಟ್ಟು ಎರಡು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅಕ್ರಮ ಮರಳು ಮಾಫ಼ಿಯಾ ನಡೆಸುವವರಿಗೆ ಎಚ್ಚರಿಕೆ: ಹೊಸನಗರ ತಾಲ್ಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಅಕ್ರಮವಾಗಿ…

Read More