Headlines

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಸೋಮವಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ – ಮೆಸ್ಕಾಂ ಪ್ರಕಟಣೆ | Mescom

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಸೋಮವಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ – ಮೆಸ್ಕಾಂ ಪ್ರಕಟಣೆ ರಿಪ್ಪನ್‌ಪೇಟೆ : ಆಧಾರ್ ಕಾರ್ಡ್ ಗೆ ರೈತರ ಕೃಷಿ ಪಂಪ್ ಸೆಟ್ ಗಳ RR ಸಂಖ್ಯೆ ಲಿಂಕ್ ಮಾಡಬೇಕಾಗಿರುವುದರಿಂದ ಗ್ರಾಹಕರಿಗೆ ಅನುಕೂಲವಾಗುವಂತೆ Hosanagara ಮೆಸ್ಕಾಂ ಅಧಿಕಾರಿಗಳು 22/07/2024 ರ ಸೋಮವಾರ ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಉಪಸ್ಥಿತರಿರುತ್ತಾರೆ. ಕೃಷಿ ಪಂಪ್ ಸೆಟ್ ಹೊಂದಿರುವ ರೈತರು ಇದರ ಸದುಪಯೋಗ ಪಡಿಸಿಕೊಂಡು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳುವಂತೆ ಪಟ್ಟಣದ ಮೆಸ್ಕಾಂ ಇಲಾಖೆಯ…

Read More

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ – ಹರತಾಳು ಹಾಲಪ್ಪ|Bjp

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಸಮಾಜವಾದಿ ನೇತಾರ ವರ್ಣರಂಜಿತ ನಾಯಕ ಎಸ್.ಬಂಗಾರಪ್ಪನವರು ನಿಧನದ ಕುರಿತು ವಿಧಾನಸೌಧದಲ್ಲಿ ಅಯೋಜಿಸಲಾದ ಸಂತಾಪ ಸಭೆಯಲ್ಲಿ ಅವಕಾಶವನ್ನು ನೀಡಲಾದರೂ ಕೂಡಾ ಬಂಗಾರಪ್ಪನವರ ಬಗ್ಗೆ ಗುಣಗಾನ ಮಾಡದವರು ಮಾನಸಪುತ್ರರಾಗಲು ಹೇಗೆ ಸಾಧ್ಯವೆಂದು ಶಾಸಕ ಹರತಾಳು ಹಾಲಪ್ಪ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಕಳೆದ…

Read More

ರಿಪ್ಪನ್‌ಪೇಟೆ : ಗ್ರಾಪಂ ಸದಸ್ಯರ ಕಡೆಗಣನೆ ವಿರೋಧಿಸಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ – ಕಾಮಗಾರಿ ಉದ್ಘಾಟನೆಯ ಪ್ಲೆಕ್ಸ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯನ ಫೋಟೋನೂ ಇಲ್ಲ, ಹೆಸರು ಇಲ್ಲ..!!!!!|Ripponpet

ರಿಪ್ಪನ್‌ಪೇಟೆ : ಇಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗವಟೂರು ವಾರ್ಡ್ ನಲ್ಲಿ ಶನಿವಾರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನೆರವೇರಿಸಿದ  ಸಂಪರ್ಕ ರಸ್ತೆ ಡಾಂಬರೀಕರಣ ಕಾಮಗಾರಿ ಗುದ್ದಲಿಪೂಜೆಯ ಸಂದರ್ಭದಲ್ಲಿ ವಾರ್ಡ್ ನ ಸದಸ್ಯ ಗಣಪತಿ ಪೋಟೋವನ್ನು ಪ್ಲೆಕ್ಸ್ ನಲ್ಲಿ ಹಾಕದೇ ನಿರ್ಲಕ್ಷಿಸಿದ್ದಾರೆಂದು ಅರೋಪಿಸಿ ಇಂದು ಗ್ರಾಮ ಪಂಚಾಯ್ತಿ ಕಛೇರಿ ಎದುರು ಗಾಂಧಿ ಭಾವಚಿತ್ರವನ್ನಿಟ್ಟುಕೊಂಡು ಕಾಂಗ್ರೆಸ್ ಬೆಂಬಲಿತ ಸದಸ್ಯರು ಪ್ರತಿಭಟನೆ ನಡೆಸಿದರು. ಗವಟೂರು ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿ ಇಬ್ಬರು, ಓರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯ ಚುನಾವಣೆಯಲ್ಲಿ…

Read More

ರಿಪ್ಪನ್‌ಪೇಟೆ : ವಿನಾಯಕನಗರದ ಶಾರದಾ ಬಾಳಿಗ ನಿಧನ|RIP

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ ಶಾರದಾ ಬಾಳಿಗ (80) ವಯೋಸಹಜ ನಿಧನರಾಗಿದ್ದಾರೆ. ಪಟ್ಟಣದ ವಿನಾಯಕ ನಗರ ನಿವಾಸಿಯಾಗಿದ್ದ ಇವರು ಹಲವು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು, ವಿನಾಯಕನಗರದಲ್ಲಿ ಕಿರಾಣಿ ಅಂಗಡಿ ನಡೆಸುತಿದ್ದ ಇವರು ಪಟ್ಟಣದಾದ್ಯಂತ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಬಾಳಿಗ ಪ್ರಿಂಟರ್ ನ ರಾಜಾರಾಮ್ ಬಾಳಿಗ ಮತ್ತು ಬಾಳಿಗ ಕಮ್ಯೂನಿಕೇಷನ್ ನ ಗೋಪಾಲಕೃಷ್ಣ ಬಾಳಿಗ ಸೇರಿದಂತೆ ನಾಲ್ಕು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಹಿಂದೂ ಸಂಪ್ರದಾಯದಂತೆ ಜರುಗಿದೆ.

Read More

2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ ವಿವಿಧೆಡೆ ಇ ಡಿ (ED) ದಾಳಿ

2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ  ಇ ಡಿ (ED) ದಾಳಿ ಶಿವಮೊಗ್ಗ:  2014ರಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಕಲಿ ಬಂಗಾರ ಹಗರಣಕ್ಕೆ ಸಂಬಂಧಿಸಿ ಜಾರಿ‌ ನಿರ್ದೇಶನಾಲಯದ ( ಇ. ಡಿ. )ಅಧಿಕಾರಿಗಳು  ಮಂಗಳವಾರ ಶಿವಮೊಗ್ಗ ಮತ್ತು ಭದ್ರಾವತಿಯ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದರು. ಅಂದು ಹಗರಣದ ಕೇಂದ್ರಬಿಂದುವಾಗಿದ್ದ ಡಿಸಿಸಿ ಬ್ಯಾಂಕಿನ  ಶಿವಪ್ಪ‌ನಾಯಕ ವೃತ್ತದ ಬಳಿ ಇದ್ದ ಶಾಖೆಯ  ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ  ಅವರ ನಿವಾಸ, ಚಾಲಕರಾಗಿದ್ದ ಕಾಮಾಕ್ಷಿ ಬೀದಿಯ ಶಿವಕುಮಾರ್ ಮನೆ, ಭದ್ರಾವತಿ…

Read More

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ ರಿಪ್ಪನ್ ಪೇಟೆ: ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಎಂಬ ಕುಗ್ರಾಮಕ್ಕೆ ಇಂದಿಗೂ ಚಿಮುಣಿ ಬುಡ್ಡಿಯಂತೆ ಉರಿಯುವ ವಿದ್ಯುತ್  ದೀಪಗಳು, ರಸ್ತೆ, ಸಾರಿಗೆ, ದೂರವಾಣಿ ಹಾಗೂ ನೆಟ್ವರ್ಕ್  ಸೌಕರ್ಯವಿಲ್ಲ. ಪ್ರತಿ ಚುನಾವಣೆಯಲ್ಲಿ ಮತದಾನ ಮಾಡುವ ಮುನ್ನ ಭರವಸೆ ನೀಡುವ ನಾಯಕರು ನಂತರ ಇತ್ತಕಡೆ ತಲೆ ಹಾಕಿ ಮಲಗಿದ ಉದಾಹರಣೆಯೂ ಇಲ್ಲ. ಆದರೂ, ಈ ಗ್ರಾಮದ ಯುವಕರ  ಚಿಂತನೆ  ಗ್ರಾಮಸ್ಥರ ಸಹಮತದೊಂದಿಗೆ ಯಶಸ್ವಿ ರಕ್ತದಾನ ಶಿಬಿರಕ್ಕೆ ಮುನ್ನುಡಿ …

Read More

ತೀರ್ಥಹಳ್ಳಿ : ಶಾಲಾ ಬಾಲಕಿಯನ್ನು ಅಪಹರಣ ಮಾಡಲು ಯತ್ನಿಸಿದ ದುಷ್ಕರ್ಮಿಗಳು !!!Thirthahalli

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೇಲಿನಕುರುವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಂಜೆ 4.30 ರ ಶಾಲೆ ಬಿಡುವ ವೇಳೆಗೆ ಓಮಿನಿ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಜನರ ತಂಡ ಶಾಲೆಯ ಸಮೀಪದಲ್ಲೇ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಓಮಿನಿ ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ಯಲು  ಪ್ರಯತ್ನಿಸಿರುವ ದುರ್ಘಟನೆ ಗುರುವಾರ ಸಂಜೆಯ ವೇಳೆ ನೆಡೆದಿದೆ. ವಿದ್ಯಾರ್ಥಿನಿಯನ್ನು ಕಾಪಾಡಿದ ವಿದ್ಯಾರ್ಥಿ: ಇದನ್ನು ನೋಡಿದ ಶಾಲಾ ವಿದ್ಯಾರ್ಥಿ ಅಕುಲ್ ಎಂಬಾತ ವಿದ್ಯಾರ್ಥಿನಿಯನ್ನು ಹೊತ್ತೊಯ್ಯಲು ಬಂದಿದ್ದ ತಂಡದವರ ಮೇಲೆ ಕಲ್ಲು ಎಸೆದು…

Read More

ಅರಸಾಳಿನ ಕಾಂಗ್ರೆಸ್ ಸದಸ್ಯೆ ಬೆಳಿಗ್ಗೆ ಕಮಲ ಹಿಡಿದು ಸಂಜೆ ವೇಳೆಗೆ ಮತ್ತೆ ವಾಪಾಸ್ ಕೈ ಹಿಡಿದ ರೋಚಕ ಘಟನೆ

ರಿಪ್ಪನ್ ಪೇಟೆ : ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದ ಅರಸಾಳು ಗ್ರಾಪಂ ಸದಸ್ಯೆ ಪೂರ್ಣಿಮಾ ಸಂಜೆಯಾಗುವಷ್ಟರಲ್ಲಿ ಮತ್ತೆ ಮರಳಿ ಕಾಂಗ್ರೆಸ್ ಗೆ ಸೇರಿದ್ದಾರೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯೆಯನ್ನು ಸೆಳೆದಿದ್ದ ಬಿಜೆಪಿಗೆ ರಿವರ್ಸ್‌ ಆಪರೇಶನ್ ಮಾಡುವ ಮೂಲಕ ಬೇಳೂರು ಗೋಪಾಲಕೃಷ್ಣ ಖಡಕ್ ಉತ್ತರ ನೀಡಿದ್ದಾರೆ. ಇಂದು ಬೆಳಿಗ್ಗೆ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿ ಡಿ…

Read More

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ | ಮಹಿಳಾ ಕಾರ್ಮಿಕರಿಗೆ ಸನ್ಮಾನ

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮತದಾನ ಜಾಗೃತಿ ಜಾಥಾ ಹಾಗೂ ವಿವಿಧ ಕಾರ್ಯಕ್ರಮಗಳು ಜರುಗಿದವು. ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ಕಟ್ಟಡ ಕಾರ್ಮಿಕರ ಸಂಘ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟ ಹೊಸನಗರ ಗ್ರಾಮಾಂತರ ಇವರ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ…

Read More

ನಾಡು-ನುಡಿಯ ಅಭಿವೃದ್ಧಿಗಾಗಿ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು : ಆರಗ ಜ್ಞಾನೇಂದ್ರ|Ripponpet

ರಿಪ್ಪನ್‌ಪೇಟೆ: ನಾಡು-ನುಡಿಯ ಅಭಿವೃದ್ಧಿಗಾಗಿ ಕನ್ನಡ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು ಹಾಗೇಯೇ ವಿಶಾಲ ಭಾವನೆಯನ್ನು ಹೊಂದುವ ಜನಸಮೂಹ ಭಾಷಾ ಪ್ರೇಮದಿಂದ ನಾಡನ್ನು ಕಟ್ಟಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ, ಪುನಿತ್ ರಾಜ್ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ 67 ನೇ ಕನ್ನಡ ರಾಜ್ಯೋತ್ಸವ ಹಾಗೂ ಪುನಿತ್ ರಾಜ್ ಪುಣ್ಯಸ್ಮರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಪ್ರಪಂಚದಲ್ಲಿಯೇ ಇಸ್ರೇಲ್‌ನ ಜನರು ಹೆಚ್ಚು ಭಾಷಾಭಿಮಾನಿಗಳಾಗಿದ್ದು, ಅವರ ನಿರಂತರ ಚಟುವಟಿಕೆಯಲ್ಲಿ…

Read More