Headlines

ಸಮಯಕ್ಕೆ ಸರಿಯಾಗಿ ಸಿಗದ ಆಂಬುಲೆನ್ಸ್ : 45 ದಿನದ ಮಗು ಸಾವು

  ತುಮರಿ ಗ್ರಾಮ ಎಂಬ ಮಾನವ ನಿರ್ಮಿತ ದ್ವೀಪದಲ್ಲಿ 108 ಅವ್ಯವಸ್ಥೆ, ಹೊಸ ಆಂಬುಲೆನ್ಸ್ ಬಂದರೂ ಸಕಾಲಕ್ಕೆ ತುರ್ತು ಆರೋಗ್ಯ ವಾಹನ ಸಿಗದೆ 45 ದಿನಗಳ ಮಗು ಉಸಿರಾಟ ಸಮಸ್ಯೆಯಿಂದ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಬ್ಯಾಕೋಡು ಸಮೀಪದ ಸಸಿಗೊಳ್ಳಿಯಲ್ಲಿ ನಡೆದಿದೆ. ಕಳೆದ ನಾಲ್ಕು ದಿನದಿಂದ ದ್ವೀಪದ ಹೊಸ ಆಂಬುಲೆನ್ಸ್ ಸೇವೆಯಲ್ಲಿ ಇಲ್ಲದ ಹಿನ್ನೆಲೆಯಲ್ಲಿ ಸಸಿಗೊಳ್ಳಿ ಸಮೀಪದ ಎಲ್ದಮಕ್ಕಿ ಹಳ್ಳಿಯ ಗೀತಾ ಮತ್ತು ಉಮೇಶ್ ದಂಪತಿಗಳ 45 ದಿನಗಳ ಹಸುಗೂಸಿಗೆ ಉಸಿರಾಟ ತೊಂದರೆಯಾಗಿ 108 ಅಲಭ್ಯತೆಯಿಂದ ತಡವಾಗಿ…

Read More

Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ

Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ ರಿಪ್ಪನ್‌ಪೇಟೆ : ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ್ ರವರ ನೇತ್ರತ್ವದಲ್ಲಿ ದಾಳಿ ನಡೆಸಿ ಜ್ಯೋತಿಷಿಗಳು ಬಳಸುತ್ತಿದ್ದ ಗುಲಾಬಿ ಉಂಗುರದ ಗಿಳಿ(Rose-ringed parakeet)ಹಿಡಿದು ರಕ್ಷಿಸಿದ್ದಾರೆ.  ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಮಧ್ಯಾಹ್ನ ಅಳಿವಂಚಿನಲ್ಲಿರುವ ಗುಲಾಬಿ ಉಂಗುರದ ಗಿಳಿ (Rose-ringed parakeet) ನ್ನು ಬಳಸಿ…

Read More

ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ – ಕಿಮ್ಮನೆ ವಾಗ್ದಾಳಿ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ  ಭ್ರಷ್ಟಾಚಾರ ವಿರುದ್ಧ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು  ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪದಿಂದ ಶಿವಮೊಗ್ಗದವರೆಗೆ 4 ದಿನಗಳ ಕಾಲ ಪಾದಯಾತ್ರೆ ನೆಡೆಸುತ್ತಿರುವ ಕಿಮ್ಮನೆ ರತ್ನಾಕರ್ ಇಂದು ಮೂರನೇ ದಿನದ ಪಾದಯಾತ್ರೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿ ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ ಎಂದು ವಾಗ್ದಾಳಿ ನೆಡೆಸಿದರು.  ನಾನು ರಸ್ತೆ ಮಾಡಿಸಿದ್ದೀನಿ ಕಿಮ್ಮನೆ ಪಾದಯಾತ್ರೆ ಮಾಡಲಿ ಎಂಬ ಆರಗ ಜ್ಞಾನೇಂದ್ರ ಅವರು ನಿನ್ನೆ ಹೇಳಿದ…

Read More

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ Syed Barkat (32), who was injured while working at a mobile shop, was stabbed by unknown persons who came on a bike. The SP informed the media that Dadapir had provided the knife used in the stabbing. ಶಿವಮೊಗ್ಗ: ಬಿಹೆಚ್ ರಸ್ತೆಯಲ್ಲಿರುವ ಎಸ್‌ಎಎಸ್ ಕಲೆಕ್ಷನ್ ಮೊಬೈಲ್ ಶಾಪ್‌ಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಕಾರು – ಇಬ್ಬರಿಗೆ ಸಣ್ಣ ಪುಟ್ಟ ಗಾಯ ತೀರ್ಥಹಳ್ಳಿ : ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ಡಿಕ್ಕಿ ಘಟನೆ ಪಟ್ಟಣದ ಭಾರತೀಪುರ ತಿರುವಿನಲ್ಲಿ ನೆಡೆದಿದೆ. ಇಬ್ಬರು ಇಂಜಿನಿಯರ್ ಗಳು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಭಾರತೀಪುರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಕ್ಷ್ಮಣ ಭಟ್  ಎಂಬುವರ ಮನೆಯ ಮುಂಭಾಗದ ಹಂಚಿಗೆ ಡಿಕ್ಕಿ ಹೊಡೆದು ಮನೆಯ ಅಂಗಳದಲ್ಲಿ ಮಹೇಂದ್ರ ನೆಕ್ಸ 300 ಕಾರು ಪಲ್ಟಿ…

Read More

ಕರ್ತವ್ಯ ಲೋಪ ಆರೋಪ – ಪಿಎಸ್‌ಐ ಅಮಾನತು | suspended

ಕರ್ತವ್ಯ ಲೋಪ ಆರೋಪ – ಸಬ್ ಇನ್ಸ್ ಪೆಕ್ಟರ್ ಅಮಾನತು | suspended ಕರ್ತವ್ಯ ಲೋಪ ಆರೋಪದಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Read More

ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ – ಸುಪ್ರೀಂಕೋರ್ಟ್

ವೇಶ್ಯಾವಾಟಿಕೆ ಎನ್ನುವುದು ಒಂದು ವೃತ್ತಿಯಾಗಿದೆ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಈ ತೀರ್ಪು ನೀಡಿದ್ದು, ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು  ನಿರ್ದೇಶನಗಳನ್ನು ಕೂಡ ಇದೇ ವೇಳೆ ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು  ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ…

Read More

ವಿವಾಹಿತ ಮಹಿಳೆ ನಾಪತ್ತೆ : ಸುಳಿವು ಪತ್ತೆಗೆ ಮನವಿ

2021 ರ ಏಪ್ರಿಲ್ 13 ರಂದು ಅನುಷಾ ಕೋಂ ಆನಂದ, 26 ವರ್ಷ, ಗೃಹಿಣಿ ಈಕೆ ನಗರದ ಹೊಸಮನೆ 06 ನೇ ಕ್ರಾಸ್‍ನಲ್ಲಿರುವ ತನ್ನ ನಿವಾಸದಿಂದ ಕಾಣೆಯಾಗಿರುತ್ತಾರೆ.       ಅಂದು ರಾತ್ರಿ 8 ಗಂಟೆ ಹೊತ್ತಿಗೆ ಮನೆಯಿಂದ ಹೊರಗೆ ಹೋದವಳು ಹಿಂತಿರುಗಿ ಬಂದಿರುವುದಿಲ್ಲ. ಅಕ್ಕ ಪಕ್ಕ, ನೆಂಟರ ಮನೆ ಹೀಗೆ ಎಲ್ಲೆಡೆ ಹುಡುಕಿದರೂ ಪತ್ತೆಯಾಗಿರುದಿಲ್ಲ. ಕಾಣೆಯಾದ ಮಹಿಳೆ ಅನುಷಾ 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಕಾಣೆಯಾದ…

Read More

BSNL ನೆಟ್‌ವರ್ಕ್ ಇಲ್ಲದೆ ಗ್ರಾಹಕರ ಪರದಾಟ – ರಿಪ್ಪನ್‌ಪೇಟೆ BSNL ಕಛೇರಿಯಲ್ಲಿ ಸಿಬ್ಬಂದಿಗಳೇ ಇಲ್ಲಾ…!!!!

ಹೊಸನಗರ : ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಹೊಸನಗರ ತಾಲೂಕಿನಲ್ಲಿ ಬಿಎಸ್‌ಎನ್ಎಲ್ ಸಂಪರ್ಕ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಕಳೆದ 10 ದಿನಗಳಿಂದ ನೆಟ್‌ವರ್ಕ್ ಇಲ್ಲದೆ ಗ್ರಾಹಕರು ಪರದಾಡುವಂತಾಗಿದೆ. ಇಡೀ ಹೊಸನಗರ ತಾಲೂಕಿನಲ್ಲಿ ಬಿಎಸ್‌ಎನ್‌ಎಲ್ ಸಂಪರ್ಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ನೂರಾರು ರೂಪಾಯಿ ಕರೆನ್ಸಿ ಹಾಕಿಸಿಕೊಂಡಿರುವ ಗ್ರಾಹಕರಿಗೆ ತಮ್ಮ ದಿನನಿತ್ಯದ ವ್ಯವಹಾರ ಮಾಡಲು ಕಿರಿಕಿರಿ ಅನುಭವಿಸುತ್ತಿದ್ದಾರೆ.ಹಣ ಪಾವತಿ ವ್ಯವಸ್ಥೆ ಮೊಬೈಲ್‌ನಲ್ಲಿ ಬಂದ ಮೇಲಂತೂ ಸಾರ್ವಜನಿಕರು ಹಣವನ್ನು ಇಟ್ಟುಕೊಳ್ಳುವುದೇ ಕಡಿಮೇಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವ್ಯವಹಾರ…

Read More

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ ಶಿವಮೊಗ್ಗ – ಮುಂಗಾರು ಮಳೆಗಾಲದಲ್ಲಿ ವಂಶಾಭಿವೃದ್ಧಿ ಚಟುವಟಿಕೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಮೀನುಗಾರಿಕೆಯನ್ನು ನಿಷೇದ ಮಾಡಲಾಗಿದೆ ಎಂದು ಮೀನುಗಾರಿಕ ಉಪನಿರ್ದೇಶಕರು ತಿಳಿಸಿದ್ದಾರೆ. ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಾರಿಕೆ (ಮೀನುಗಾರಿಕೆ) ವಂಶಾಭಿವೃದ್ದಿ ಚಟುವಟಿಕೆಗಳು ನಡೆಯವ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ. ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ನದಿಗಳು ಮತ್ತು ನದಿಗಳು ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಉಪ…

Read More