
ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ
ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…