Headlines

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….

Read More

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ : 17 ವರ್ಷದ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಪಟ್ಟಣಕ್ಕೆ ಆಗಮಿಸಿದ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಅಕ್ಟೋಬರ್ 18 ಮತ್ತು 19 ರಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ…

Read More

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಐದು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅ 18 ಮತ್ತು 19 ರಂದು  ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು  ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…

Read More

ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು

ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ತೀರ್ಥಹಳ್ಳಿ : ಹಲವಾರು ಅಪರಾಧಗಳಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಚಿನ್ನವನ್ನು ಕದ್ದು ತೀರ್ಥಹಳ್ಳಿಯ ತನ್ನ ಮನೆಯ ಹಿಂದೆ ಹೂತಿಟ್ಟಿದ್ದ ಆರೋಪಿಯನ್ನು ಮಾಗಡಿ ಪೊಲೀಸರು ತೀರ್ಥಹಳ್ಳಿಗೆ ಕರೆ ತಂದು ಕೆಜಿ ಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ  ನಡೆದಿದೆ. ಹಮೀದ್ ಹಂಜ ಎಂಬ ಆರೋಪಿ ಬೆಂಗಳೂರಿನ ಮಾಗಡಿಯಲ್ಲಿ ಕಳ್ಳತನ ಮಾಡಿ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ತಮ್ಮ ಮನೆಯ ಹಿತ್ತಲಿನಲ್ಲಿ ತಂದು ಹೂತಿಟ್ಟಿದ್ದ. ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆರೋಪಿಯನ್ನು ಕರೆ ತಂದಿದ್ದ ಮಾಗಡಿ…

Read More

ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು

ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು ಶಿವಮೊಗ್ಗ ನಗರ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆವರೆಗೂ ಮಳೆ ಆರ್ಭಟಿಸಿದೆ. ಬೆಳಿಗ್ಗೆಯೂ ಅರ್ಧ ಗಂಟೆ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸುಗೊಂಡಿದೆ. ಕುಂಭದ್ರೋಣ ಮಳೆಗೆ ರಾತ್ರಿಯಿಡೀ ಶಿವಮೊಗ್ಗ ನಗರ ಅಕ್ಷರಶಃ ನಲುಗಿದೆ.ನಗರದ ರಸ್ತೆಗಳು ಹಳ್ಳಗಳಾಗಿ ಬದಲಾಗಿವೆ. ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯೆಲ್ಲ ನಿದ್ರೆಗೆಟ್ಟರು. ಮನೆಯಿಂದ ನೀರು ಹೊರ ಹಾಕುವಲ್ಲಿ ಹೈರಾಣಾದರು. ಮಳೆಯ ಆರ್ಭಟ ಮುಂಜಾನೆವರೆಗೂ ಒಂದೇ…

Read More

ಅಂಧ ವ್ಯಕ್ತಿಗೆ ಕೆಲಸ ಕೊಡಿಸುವುದಾಗಿ ಪತ್ರಕರ್ತನಿಂದ ವಂಚನೆ ಆರೋಪ

ಕೆಲಸ ಕೊಡಿಸುವುದಾಗಿ ಹೇಳಿ ಪತ್ರಕರ್ತನೊಬ್ಬ ಅಂಧರೊಬ್ಬರಿಗೆ 2 ಲಕ್ಷದ 30 ಸಾವಿರ ರೂ. ವಂಚಿಸಿರುವುದು ಆರೋಪ ಕೇಳಿ ಬಂದಿದೆ. ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಂಧ ಬಸವರಾಜ್ ತನ್ನ ಮಗ ಗಗನ್ ದೀಪ್‌ಗೆ ನಗರಸಭೆಯಲ್ಲಿ  ಕೆಲಸ ಖಾಲಿಯಿದೆ. ಇಲ್ಲವೆಂದರೆ ಪತ್ರಕರ್ತರ ಕಚೇರಿಯೊಂದರಲ್ಲಿ ಕೆಲಸ ಆಗಲಿದೆ ಎಂದು ತಿಳಿಸಿದ್ದರು. ಡಾಟಾ ಆಪರೇಟರ್ ಕೆಲಸಕ್ಕೆ 7-8 ಲಕ್ಷ ರೂ. ಬೇಡಿಕೆ ಇದೆ ಎಂದಿದ್ದರು. ಬೇಡ ಎಂದಾಗ ನಿಮ್ಮ ಹತ್ತಿರ ಎಷ್ಟು ಇದ್ದರೂ ಕೊಡಿ ಎಂದು ಹೇಳಿ  2 ಲಕ್ಷ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ ನ.28 ,29 ಮತ್ತು 30 ರಂದು ಅದ್ದೂರಿ ಸಿದ್ದತೆ | ಕೆಸರುಗದ್ದೆ ಓಟದ ಸ್ಪರ್ಧೆ , ಬಿಜೂ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ , ಪಟ್ಲ ಸತೀಶ್ ನೇತ್ರತ್ವದಲ್ಲಿ ಯಕ್ಷಗಾನ ರಿಪ್ಪನ್‌ಪೇಟೆ : 31 ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಸುಧೀರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ಲೀಲಾ…

Read More

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸರ್ವರ್ ದೋಷ – ಗ್ರಾಹಕರ ಆಕ್ರೋಶ

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸ್ತೋಮ ಪಡಿತರಕ್ಕಾಗಿ ನಿಂತು ಹೈರಾಣಾಗಿದೆ.ಶುಕ್ರವಾರದಿಂದ ಪಡಿತರ ವಿತರಣೆ ಮಾಡುತ್ತಿದ್ದರೂ, ಎಲ್ಲಾ ಗ್ರಾಹಕರಿಗೆ ಪಡಿತರ ತಲುಪಿಸಲು ಸಾಧ್ಯವಾಗಿಲ್ಲ… ಇದರಿಂದಾಗಿ ಸಾರ್ವಜನಿಕರು ಸಂಬಂಧಿಸಿದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.ಇದಕ್ಕೆಲ್ಲ ಕಾರಣವಾಗಿದ್ದು ಗ್ರಾಹಕರ ಬೆರಳಚ್ಚು (ಬಯೋಮೆಟ್ರಿಕ್) ಪಡೆಯುವ ಸರ್ವರ್ ಗಳ ದೋಷ , ಇದರಿಂದಾಗಿ ಜನರ ನರಳಾಟ…. ಸರ್ವರ್ ವೈಫಲ್ಯದಿಂದಾಗಿ ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ… ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ಪುರುಷೋತ್ತಮ್ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಪಡಿತರಕ್ಕಾಗಿ ದೂರದ ಹಳ್ಳಿಗಳಿಂದ…

Read More

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ. ಭೂಮಿ ಹುಣ್ಣಿಯ…

Read More

ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ!

ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ! ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳಾದ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಇವರು ನ್ಯಾಯಾಲಯದ ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಹೈಕೋರ್ಟ್ ಕೆಲಸದ ನಿಮಿತ್ತ…

Read More