Headlines

ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಭಾರಿ ಗಾಳಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ತಹಶಿಲ್ದಾರ್ ಭೇಟಿ ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಸದರಿ ಮಳೆಹಾನಿಯಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಸಂಜೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕರು ಬೆಂಗಳೂರಿನಿಂದ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು ಅಲ್ಲಿಂದ…

Read More

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ…

Read More

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು ಶಿವಮೊಗ್ಗ:  ಸುಮಾರು ೨೦ಕ್ಕ್ಕೂ ಹೆಚ್ಚು ಪ್ರಕರಣಗಳ ಆರೋಪಿಯಾಗಿರುವ, ಕೊಲೆ ಯತ್ನದ ಪ್ರಕರಣಕ್ಕೆ  ಸಂಬಂಧಿಸಿ ಭದ್ರಾವತಿ ಪೇಪರ್ ಟೌನ್ ಪೊಲೀಸರಿಗೆ ಬೇಕಾಗಿದ್ದ ಕಡೆಕಲ್ ಅಬಿದ್ ಎನ್ನುವವನ್ನು ಮಂಗಳವಾರ ಸಂಜೆಯ  ವೇಳೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸಂಭವಿಸಿದೆ. ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ ಮತ್ತು ತಂಡದವರು ಖಚಿತ ಮಾಹಿತಿ ಮೇರೆಗೆ ಅಬಿದ್‌ನನ್ನು ಬಂಧಿಸಲು ತೆರಳಿದ್ದರು. ಸುಮಾರು ಒಂದು ತಿಂಗಳಿನಿಂದುಈತ ತಲೆಮರೆಸಿಕೊಂಡಿದ್ದನು. ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲೆತ್ನಿಸಿದನಲ್ಲದೆ ಮರು ದಾಳಿ ನಡೆಸಿದನು….

Read More

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು ಶಿವಮೊಗ್ಗ  : ವಾಹನಗಳ ವೇಗ ನಿಯಂತ್ರಣಕ್ಕೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ವೊಂದನ್ನು, ಐನಾತಿ ಕಳ್ಳರ ತಂಡವೊಂದು ಕಾರಿನಲ್ಲಿ ಆಗಮಿಸಿ ಹೊತ್ತೊಯ್ದ ಕುತೂಹಲಕಾರಿ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಟೌಟ್ ಕಳವು ಮಾಡಿ ಕೊಂಡೊಯ್ಯುತ್ತಿರುವ ದೃಶ್ಯವು, ಕಟ್ಟಡವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪಶ್ಚಿಮ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಅವರು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್…

Read More

ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು

ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ ತೋರಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಂಕರ ವಲಯದ ಉಪ ಅರಣ್ಯಾಧಿಕಾರಿ ನರೇಂದ್ರ ಕುಮಾರ್ ಬಿ.ಜಿ ಅವರನ್ನು ಅಮಾನತುಗೊಳಿಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ. ಶಂಕರ ವಲಯದ ಕಸಬಾ ಶಾಖೆಯ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ನರೇಂದ್ರ ಕುಮಾರ್ ಬಿ.ಜಿ ಅವರು,ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರ ಬಗ್ಗೆ ಅಗೌರವದಿಂದ ಮಾತನಾಡಿರುವ ಆಡಿಯೋ…

Read More

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್‌ ಊಟದ ಬಿಲ್‌ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್‌ ಸೆಂಟರ್‌ ಬಳಿ ಇರುವ ಫಾಸ್ಟ್‌ ಪುಡ್‌ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್‌ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್‌ ಎಂಬಾತ ಮುದ್ದೆ…

Read More

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು ಶಿವಮೊಗ್ಗ: ಮರಕ್ಕೆ ಬೈಕ್‌  ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕ  ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (27) ಎಂದು ಗುರುತಿಸಲಾಗಿದೆ. ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್‌  ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್‌ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸಿದ್ದರಹಳ್ಳಿಯ ರಾಜು ಕೂಲಿ ಕೆಲಸ ಮಾಡಿಕೊಂಡಿದ್ದು 6 ತಿಂಗಳ ಹಿಂದೆ ಮದುವೆಯಾಗಿದ್ದ. ನಿನ್ನೆ…

Read More

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಶಿವಮೊಗ್ಗ: ನಗರದ ಮೇದಾರಿ ಕೇರಿಯ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬ ದೂರಿದೆ. ಗಗನಶ್ರೀ(24) ನೇಣಿಗೆ ಶರಾಣದ  ವಿವಾಹಿತ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಗಾಂಧಿ ಬಜಾರ್ ನಲ್ಲಿದ್ದಾಗ ಗಗನಶ್ರೀಗೆ ಸಂದೀಪ್ ಎಂಬಾತನೊಂದಿಗೆ ಪ್ರೀತಿ ಹುಟ್ಟಿತ್ತು. ಪ್ರೀತಿ ಮದುವೆಯ ವರೆಗೆ ಕರೆದೊಯ್ದರೂ ಸುಖಕರ ಸಂಸಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಗೊತ್ತಾಗಿದೆ. ಮದುವೆಯಾಗಿ ಮೂರು ವರ್ಷ ಸಂಸಾರ ನಡೆಸಿದ್ದ…

Read More

ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ

ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ ಶಿವಮೊಹ್ಗ: ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆಯಿಂದ ಖಾಲಿ ಇದ್ದ ತೀರ್ಥಹಳ್ಳಿ ಡಿವೈಎಸ್ ಪಿ ಸ್ಥಾನಕ್ಕೆ  ಕಾರ್ಕಳದಲ್ಲಿ  ಡಿವೈಎಸ್’ಪಿ ಯಾಗಿ ಕಾರ್ಯ ನಿರ್ವಹಿಸುತಿದ್ದ ಅರವಿಂದ್ ಕಲಗುಜ್ಜಿ ರವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ತೀರ್ಥಹಳ್ಳಿಯಲ್ಲಿ ಈ ಹಿಂದೆ ಇದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ತೀರ್ಥಹಳ್ಳಿಯಿಂದ ಬಾಗಲಕೋಟೆಗೆ ವರ್ಗಾವಣೆ ಮಾಡಿ  ಸರ್ಕಾರ ಅದೇಶಿಸಿತ್ತು. ಸುಮಾರು ಮೂರು ತಿಂಗಳ ನಂತರ  ನೂತನ ಡಿವೈಎಸ್’ಪಿ ಯನ್ನು ನೇಮಕಗೊಳಿಸಿ…

Read More

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ ಕಾಡಿನಿಂದ ನಾಡಿನತ್ತ ಬಂದ ಜಿಂಕೆಯ ಮರಿಗೆ ನಾಯಿಗಳು ಬೆನ್ನಟ್ಟಿದಾಗ ಸ್ಥಳೀಯರು ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಬಳಿ ಇಂದು ನಡೆದಿದೆ. ಅರಣ್ಯದಿಂದ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಅಮರ್ ನಾಥ್ ಕಾಮತ್ ರವರ ತೋಟದ ಬಳಿ ಬಂದ ಜಿಂಕೆ ಮರಿಯನ್ನು ಕಂಡು ಬೀದಿ ನಾಯಿಗಳು ಬೆನ್ನಟ್ಟಿವೆ. ಈ ವೇಳೆ ನಾಯಿಗಳಿಂದ ಪ್ರಾಣ ರಕ್ಷಣೆಗೆ ಜಿಂಕೆ…

Read More