Headlines

ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR

ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR ಶಿರಾಳಕೊಪ್ಪ: ವಿವಾಹಿತ ಮಹಿಳೆಯ ಮೇಲೆ ಕಣ್ಣು ಹಾಕಿ ಆಕೆಯ ಬಲತ್ಕಾರಕ್ಕೆ ಯತ್ನಿಸಿದ ವ್ಯಕ್ತಿಯ ವಿರುದ್ಧ ಪಂಚಾಯತಿ ನಡೆಸಿದ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಶಿರಾಳಕೊಪ್ಪದ ರಾಗಿಕೊಪ್ಪದಲ್ಲಿ ನಡೆದಿದೆ. 30 ವರ್ಷದ ವಿವಾಹಿತ ಮಹಿಳೆಯ ಪತಿ ಕೆಲಸದ ಮೇಲೆ ದೆಹಲಿಗೆ ಹೋಗುತ್ತಿದ್ದು 15 ದಿನಗಳವರೆಗೆ ಮನೆಗೆ ಬರುತ್ತಿರಲಿಲ್ಲ. ಇದನ್ನು ದುರುಪಯೋಗ ಪಡಿಸಿಕೊಳ್ಳುವ ಯೋಜನೆಯಲ್ಲಿದ್ದ ಎದುರಿನ ಮನೆಯ ೩೮…

Read More

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್ ಹಳೆಯ ಬೊಮ್ಮನಕಟ್ಟೆಯಲ್ಲಿ ಶನಿವಾರ ನಡೆದ ರೌಡಿ ಶೀಟರ್ ರಾಜೇಶ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಶನಿವಾರ ಹಾಡಹಗಲೇ ಸುಮಾರು ಆರು ಜನರನ್ನು ಒಳಗೊಂಡ ತಂಡ ಮಾರಕಾಸ್ತ್ರಗಳಿಂದ ನಡು ರಸ್ತೆಯಲ್ಲಿ ರಾಜೇಶ್ ಶೆಟ್ಟಿಯನ್ನು ಬರ್ಬರ ಹತ್ಯೆಗೈದಿದ್ದರು. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ  ಚಿಟ್ಟೆ ನಾಗ, ಗಣೇಶ, ಕಿರಣ್‌ ಗೌಡ, ವೆಂಕಟೇಶ್‌ ರನ್ನು…

Read More

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್‌ ಒಂದರ ಬಳಿಯಲ್ಲಿ ಕಬಡ ರಾಜೇಶ್‌ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದಾರೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು,ಇತ್ತೀಚೆಗಷ್ಟೇ ತನ್ನ ವಿರೋಧಿ…

Read More

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು. ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ…

Read More

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ ರಿಪ್ಪನ್‌ಪೇಟೆ : ಸಹಪಾಠಿಯ ಶಾಲಾ ಬ್ಯಾಗ್ ನಲ್ಲಿದ್ದ ನಾಗರ ಹಾವನ್ನು ಗಮನಿಸಿ ತಕ್ಷಣವೇ ಸಮಯಪ್ರಜ್ಞೆ ಮತ್ತು ಚಾಣಾಕ್ಷತನದಿಂದ ಬ್ಯಾಗ್ ಜಿಪ್ ಮುಚ್ಚಿ ಬ್ಯಾಗನ್ನು ಶಾಲಾ ಆವರಣಕ್ಕೆ ಕೊಂಡೊಯ್ದು ಅಸಾಧಾರಣ ಧೈರ್ಯ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಬಾಳೂರು ಶಾಲೆಯ ವಿದ್ಯಾರ್ಥಿ ಆರ್ ಮಣಿಕಂಠ ಭಾಜನರಾಗಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಮಕ್ಕಳಿಗೆ ಪ್ರತಿವರ್ಷ ಮಕ್ಕಳ ದಿನಾಚರಣೆ…

Read More

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಪೊಲೀಸ್ ಇಲಾಖೆಯವರು ಸುಮೋಟ್ ಅಡಿ (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡು ಬ್ಲಾಕ್‌ಮೇಲ್ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ …

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.  ಈ ವೇಳೆ ರಸ್ತೆಗೆ…

Read More

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!!

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಅಕ್ರಮವಾಗಿ ಹಣ ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಒಂಬತ್ತು ಮಂದಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊರವಲಯದಲ್ಲಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆ ಮೇಲೆ ದಿಡೀರ್ ದಾಳಿ ನಡೆಸಿ ರಿಪ್ಪನ್‌ಪೇಟೆ ಪೊಲೀಸರು ಜೂಜುಕೋರರ ಹೆಡೆಮುರಿ ಕಟ್ಟಿದ್ದಾರೆ. ಪಟ್ಟಣದ ಸಮೀಪದ ಹೆಗ್ಗೆರೆ…

Read More

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ!

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ! ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಇಂದು ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಅವರ ನಿಧನದಿಂದ ಅವರ ಅಪಾರ ಭಕ್ತ ಸಮೂಹ ಶೋಕದ ಕಡಲಲ್ಲಿ ಮುಳುಗಿದೆ. ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಸ್ವಾಮೀಜಿಗಳು, ಅನೇಕ ಗಣ್ಯರು‌ ಸಂತಾಪ ಸೂಚಿಸಿದ್ದಾರೆ. ಸ್ವಾಮೀಜಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ…

Read More

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಬಿದ್ದು ಮೃತಪಟ್ಟಿದೆ. ಮೃತ ಮಗು ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್ ಪುತ್ರ ಮೊಹಮದ್ ಅಯಾನ್(3) ಎಂದು ತಿಳಿದು ಬಂದಿದೆ. ಇಮ್ರಾನ್ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಂಬಂಧಿಕರ ಆರೋಗ್ಯ ವಿಚಾರಿಸಲು ಮಗುವನ್ನು ಜೊತೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು…

Read More
Exit mobile version