
ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು
ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು ಭದ್ರಾವತಿ, ಏ. 12: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಭದ್ರಾವತಿ ರಸ್ತೆಯ ಸಂತೋಷ್ ರೈಸ್ ಮಿಲ್ ಸಮೀಪ ರಾತ್ರಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿ ವಿನುತ್ ಘೋರ್ಪಡೆ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಭದ್ರಾವತಿ ತಾಲೂಕಿನ ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಅವರ ಮೊಮ್ಮಗನಾಗಿದ್ದಾನೆ. ಭದ್ರಾವತಿಯ ಖಾಸಗಿ ನರ್ಸಿಂಗ್ ಆಸ್ಪತ್ರೆಯಲ್ಲಿ…