Headlines

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದಲ್ಲಿ ಹಲವು ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಅವಕಾಶಗಳು ಕಡಿಮೆಯಾಗುತ್ತಿವೆ. ಹೊರ ರಾಜ್ಯದವರು ಕೆಲಸ ಪಡೆಯುತ್ತಿರುವುದಕ್ಕೆ ಕಾರಣ ನಮ್ಮದೇ ನಿರ್ಲಕ್ಷ್ಯ. ಸರ್ಕಾರದ ನಿಯಮಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಶಿಫಾರಸು ಈಗಾಗಲೇ ಮಾಡಲಾಗಿದೆ. ಕೈಗಾರಿಕೆ, ಬ್ಯಾಂಕ್, ಶಿಕ್ಷಣ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸ್ಥಳೀಯ ಯುವಕರಿಗೆ ಶೇ. 90 ಉದ್ಯೋಗಾವಕಾಶ ಒದಗಿಸಿದರೆ ನಾಡು ನಿಜವಾದ ಅರ್ಥದಲ್ಲಿ ಅಭಿವೃದ್ಧಿಯಾಗುತ್ತದೆ,” ಎಂದು ಸಾಗರ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು ರಿಪ್ಪನ್‌ಪೇಟೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ಕನ್ನಡ ತಾಯಿ ಭುವನೇಶ್ವರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯವಾಗಿ ನಡೆಯಿತು. ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಪಟ್ಟಣದ ಪಿಎಸ್ಐ ರಾಜುರೆಡ್ಡಿ ಚಾಲನೆ ನೀಡಿದರು. ನೂರಾರು ಪುಟಾಣಿ ಮಕ್ಕಳು ಭುವನೇಶ್ವರಿ ವೇಷದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಜನರ ಮನಸೆಳೆದರು. ಡೊಳ್ಳು ಕುಣಿತ, ಪಟಾಕಿ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದವು….

Read More

ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ

ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ ರಿಪ್ಪನ್‌ಪೇಟೆ : “ತಮ್ಮ ಅಭಿನಯ, ಸರಳತೆ ಮತ್ತು ಹೃದಯ ಶ್ರೀಮಂತಿಕೆಯ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದಿಗೂ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ” ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಜಿ.ಆರ್ ಗೋಪಾಲಕೃಷ್ಣ ಹೇಳಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ನಡೆದ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಪ್ಪು ಅವರ…

Read More

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…

Read More

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ…

Read More

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ನಾಡಿನಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಕನ್ನಡ ಕಲರವದ ಕಂಪು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದ ವ್ಯಾಪ್ತಿಯ ಗ್ರಾಮ ಪಂಚಾಯತ್, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು , ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಸ್ತೂರಿ ಕನ್ನಡ ಸಂಘದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಸ್ತೂರಿ ಕನ್ನಡ ಸಂಘದ ವತಿಯಿಂದ ಶಿವಮೊಗ್ಗ ರಸ್ತೆಯ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಸ್ತೂರಿ…

Read More

RIPPONPETE |ನ.1 ರಂದು ಕಸ್ತೂರಿ ಕನ್ನಡ ಸಂಘದಿಂದ ಆದ್ದೂರಿ ಕನ್ನಡ ರಾಜ್ಯೋತ್ಸವ

ರಿಪ್ಪನ್ ಪೇಟೆಯಲ್ಲಿ ನ.01ಕ್ಕೆ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ 4 ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ 01 ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಧನಲಕ್ಷ್ಮಿ ಗಂಗಾಧರ್ ಮತ್ತು ಆರ್.ಎ.ಚಾಬುಸಾಬ್…

Read More

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ನಾಲ್ಕನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ಬುಧವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು….

Read More