HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತರನ್ನು ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆ ವಾಸಿ ರಾಘವೇಂದ್ರ (32) ಎಂದು ಗುರುತಿಸಲಾಗಿದೆ….

Read More

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹೊಸಮನೆ 6 ನೇ ತಿರುವಿನ ನಿವಾಸಿ ಮನೋಜ್ (22) ಮೃತ ದುರ್ಧೈವಿಯಾಗಿದ್ದಾನೆ. ಶಿವಮೊಗ್ಗದ JNNC ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಈತ ಕಾಂಗ್ರೆಸ್ ಮುಖಂಡ ಫ್ಲವರ್ ಕುಮಾರ್ ಅವರ ಪುತ್ರನಾಗಿದ್ದಾನೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ,ನಿನ್ನೆ ಸಂಜೆಯೇ ಯುವಕನ ಮೃತದೇಹವನ್ನು ಮೆಗ್ಗಾನ್ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ…

Read More

ಎಟಿಎಂ ಕಾರ್ಡ್ ಬದಲಿಸಿ ಹಣ ವಂಚಿಸುತಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ಎಟಿಎಂ ಕಾರ್ಡ್ ಬದಲಿಸಿ ಹಣ ವಂಚಿಸುತಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ ಸಾಗರ: ಅಕ್ಟೋಬರ್  ೨೦೨೪ರಲ್ಲಿ ಕಾರ್ಗಲ್ ಟೌನ್ ಕೆನರಾ ಬ್ಯಾಂಕ್ ಎಟಿಎಂ ನಲ್ಲಿ  ವೃದ್ದನನ್ನು ವಂಚಿಸಿ, ಅವರಿಂದ ಎಟಿಎಂ ಕಾರ್ಡ್ ನ ಪಿನ್ ಪಡೆದು ರೂ ೧,೪೯,೯೯೯ ಹಣವನ್ನು ಡ್ರಾ ಮಾಡಿಕೊಂಡ ಪ್ರಕರಣದ ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ರಾಜ್ಯದ ರೋಹನ್ ತಲ್ ಜಿಲ್ಲೆಯ  ಜೋಗಿಂದರ್ ಮತ್ತು  ಮುಖೇಶ್ (೪೮) ಇವರನ್ನು  ದಸ್ತಗಿರಿ ಮಾಡಿ, ಆರೋಪಿಗಳಿಂದ ಕಾರ್ಗಲ್ ಪೊಲೀಸ್ ಠಾಣೆ…

Read More

ಕಾಲೇಜಿನ‌ ಲ್ಯಾಬ್ ನಲ್ಲೇ ನೇಣು ಬಿಗಿದುಕೊಂಡು ಲ್ಯಾಬ್ ಬೋಧಕ ಸಾವು

ಕಾಲೇಜಿನ‌ ಲ್ಯಾಬ್ ನಲ್ಲೇ ನೇಣು ಬಿಗಿದುಕೊಂಡು ಲ್ಯಾಬ್ ಬೋಧಕ ಸಾವು ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನ ಸಿಬ್ಬಂದಿಯೊಬ್ಬರು ಕಾಲೇಜಿನ ಪ್ರಯೋಗ ಶಾಲೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಲ್ಲಿರುವ ಈ  ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಧೃವಕುಮಾರ್ (೪೭) ಸೋಮವಾರ  ಮಧ್ಯಾಹ್ನ ಲ್ಯಾಬೊರೇಟರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಇವರು ಲ್ಯಾಬ್ ಇನ್‌ಸ್ಟ್ರಕ್ಟರ್ ಆಗಿ ವರ್ಕ್ ಮಾಡುತ್ತಿದ್ದರು. ಮೂಲತಃ ಚನ್ನಗಿರಿ ತಾಲೂಕಿನ ಬೊಮ್ಮೇನಹಳ್ಳಿಯವರಾಗಿದ್ದ ಇವರು ಆಯನೂರಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎರಡು ತಿಂಗಳ ಹಿಂದೆ…

Read More

ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ KSRTC ಬಸ್

ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಕೆ ಎಸ್ಸಾರ್ಟಿಸಿ ಬಸ್ ಶಿವಮೊಗ್ಗ : ಸಾಗರದಿಂದ ಹೊನ್ನಾವರಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಅಪಘಾತವಾಗಿದ್ದು, ಹಲವರಿಗೆ ಸಣ್ಣಪುಟ್ಟ ಪೆಟ್ಟಾಗಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರು ಹೊನ್ನಾವರ ಹೈವೆಯಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸೂಳೆಮುರ್ಕಿ ಕ್ರಾಸ್‌‌ನಲ್ಲಿ ಆಕ್ಸಿಡೆಂಟ್‌ ಆಗಿದೆ.  ಬಸ್‌ನಲ್ಲಿ 49 ಪ್ರಯಾಣಿಕರಿದ್ದರು. ಬಸ್‌ ಸಾಗರದಿಂದ ಹೊರಟು, ಮಾವಿನಗುಂಡಿಯಿಂದ ಇಳಿದು ಗೇರುಸೊಪ್ಪ ಬಳಿ ಸಿಗುವ ಕ್ರಾಸ್‌ನಲ್ಲಿ ಕಂಟ್ರೋಲ್‌ ತಪ್ಪಿ ರಸ್ತೆಗೆ ಹೊಂದಿಕೊಂಡಿದ್ದ ಧರೆಗೆ ಬಸ್‌ ಡಿಕ್ಕಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ…

Read More

ಚರ್ಚ್ ಆವರಣದಲ್ಲೇ ಹೊಡೆದಾಟ: ಓರ್ವ ನಿಗೆ ತೀವ್ರ ಪೆಟ್ಟು

ಚರ್ಚ್ ಆವರಣದಲ್ಲೇ ಹೊಡೆದಾಟ : ಓರ್ವ ನಿಗೆ ತೀವ್ರ ಪೆಟ್ಟು ಶಿವಮೊಗ್ಗ :  ಹೊಳೆಹೊನ್ನೂರು ಸಮೀಪದ ಸದಾಶಿವ ಕ್ಯಾಂಪ್‌ ನಲ್ಲಿ ಚರ್ಚ್‌ನ ಹಣಕಾಸಿನ ವಿಚಾರಕ್ಕೆ ಎರಡು ಬಣಗಳ ನಡುವೆ ನಿನ್ನೆ ಭಾರೀ  ಹೊಡೆದಾಟ ನಡೆದಿದೆ. ಚರ್ಚ್‌ನ್ನು ನೋಡಿಕೊಳ್ಳುತ್ತಿರುವ ಒಂದು ಗುಂಪು ಹಾಗೂ ಭಕ್ತರ ಪರವಾದ ಇನ್ನೊಂದು ಗುಂಪಿನ ನಡುವೆ ಚರ್ಚ್‌ಗೆ ಬಂದಿರುವ ಹಣಕಾಸಿನ ವಿಚಾರವಾಗಿ ವಿವಾದವಿತ್ತು. ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದವು.  ನಡುವೆ ಚರ್ಚ್‌ನಲ್ಲಿ ಪ್ರತಿ ಭಾನುವಾರ ಪ್ರಾರ್ಥನೆ ಎಂದಿನಂತೆ ನಡೆದುಕೊಂಡು ಬಂದಿತ್ತು. ನಿನ್ನೆ…

Read More

ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್ ನಲ್ಲಿ ಐವರಿಗೆ ಜಾಮೀನು ನೀಡಿದ್ದ ವ್ಯಕ್ತಿ – ಆರೋಪಿ ಸೇರಿ 7 ಮಂದಿ ವಿರುದ್ಧ ಕೇಸ್

ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್ ನಲ್ಲಿ ಐವರಿಗೆ ಜಾಮೀನು ನೀಡಿದ್ದ ವ್ಯಕ್ತಿ – ಆರೋಪಿ ಸೇರಿ 7 ಮಂದಿ ವಿರುದ್ಧ ಕೇಸ್ ನಕಲಿ ದಾಖಲೆ ಸೃಷ್ಟಿಸಿ ಶಿವಮೊಗ್ಗ ನ್ಯಾಯಾಲಯದಲ್ಲಿ ಐವರು ಆರೋಪಿಗಳಿಗೆ ವ್ಯಕ್ತಿಯೊಬ್ಬ ಜಾಮೀನು ನೀಡಿದ್ದಾನೆ. ಜಾಮೀನು ಪಡೆದವರಲ್ಲಿ ಒಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಬ್ರಾಹಿಂ ಖಲೀಲ್, ಫೈರೋಜ್, ಅರ್ಬಾಜ್, ನಯಾಜ್ ಅಹಮದ್, ಸುಹೇಲ್ ಎಂಬ ಆರೋಪಿಗಳಿಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಜಗದೀಶ್ ಎಂಬುವರು ಶಿವಮೊಗ್ಗ ನ್ಯಾಯಾಲಯದಲ್ಲಿ ಜಾಮೀನುದಾರರಾಗಿದ್ದರು. ಈ ಪ್ರಕರಣದಲ್ಲಿ ಐದನೇ…

Read More

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು ಶಿವಮೊಗ್ಗ | ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಸಮೀಪದಲ್ಲಿರುವ ಬ್ಯಾಂಕ್ ಒಂದರ ಎಟಿಎಂನಲ್ಲಿ ಕಳವು ಯತ್ನ ನಡೆದಿದೆ. ಎಟಿಎಂ ಬಾಕ್ಸ್ ಒಡೆಯಲು ಕಳ್ಳ ಯತ್ನಿಸಿದ್ದಾನೆ. ಎಟಿಎಂನಲ್ಲಿ ಸೈರನ್ ಶಬ್ದ ಹಾಗೂ 112 ಸಿಬ್ಬಂದಿಯನ್ನು ನೋಡಿ ಕಳ್ಳ ಪರಾರಿಯಾಗಿದ್ದಾನೆ. ಈ ಸಂಬಂಧ ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ…

Read More

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ನಿನ್ನೆ ಹಾಗೂ ಇವತ್ತು ತರೀಕೆರೆ…

Read More

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ�ಅನುಪಿನಕಟ್ಟೆಯ ಲಂಬಾಣಿ ತಾಂಡಾದಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಗಿರೀಶ್‌ ನಾಯ್ಕ (30) ಮೃತ ವ್ಯಕ್ತಿ. ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾನೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ….

Read More