ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ  ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್‌ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್‌ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…

Read More

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ ತೀರ್ಥಹಳ್ಳಿ : ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ. ತೀರ್ಥಹಳ್ಳಿಯಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನರಾಗಿ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಲವಾರು ಕಡೆ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ…

Read More

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ! ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ…

Read More

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ಸುಮಾರು 540 ಅಡಿ ಆಳದ ಬೋರ್‌ವೆಲ್ ಪೈಪ್‌ಗೆ ಬಿದ್ದಿದ್ದ ಸುಮಾರು ಮೂರು ಅಡಿ ಉದ್ದದ ನಾಗರಹಾವನ್ನು ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ಪ್ರದೇಶದ ಜನನಿಬಿಡ ಮುಖ್ಯ ರಸ್ತೆಯನ್ನು ದಾಟುವ ವೇಳೆ ಹಾವು ಬೋರ್‌ವೆಲ್ ಪೈಪ್‌ಗೆ ಬಿದ್ದಿತ್ತು. ವಾಹನ ದಟ್ಟಣೆ ಮತ್ತು ಜನರಿಂದ ಗಾಬರಿಗೊಂಡು ತರಾತುರಿಯಲ್ಲಿ ರಕ್ಷಣೆ ಪಡೆಯಲು…

Read More

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ !

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ ! ತೀರ್ಥಹಳ್ಳಿ : ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಯುವಕನೋರ್ವ ವಾರಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಂಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತನು ವಾರಳ್ಳಿ ದಿನೇಶ್ ರವರ ಮಗ ಎಂದು ತಿಳಿದು ಬಂದಿದೆ.ಕುರುವಳ್ಳಿ ಪ್ರಮೋದ್ ಪೂಜಾರಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆಗುಂಬೆ ಪೊಲೀಸ್…

Read More

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ 10 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಭಾನುವಾರ ಸಂಜೆ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಸಂಭವಿಸಿದೆ. ಇಲ್ಲಿನ ಗ್ರಾಮವೊಂದರಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಹತ್ತು ವರ್ಷದ ಬಾಲಕನಿಗೆ ಮನೆಯವರು ಯಾವುದೋ ಕಾರಣಕ್ಕಾಗಿ ಬೈದಿದ್ದರು ಎಂದು ಹೇಳಲಾಗುತ್ತಿದೆ . ಇದೇ ಕಾರಣಕ್ಕೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆದಾಗ್ಯು ಈ ಬಗ್ಗೆ ಇನ್ನಷ್ಟೆ ಸ್ಪಷ್ಟ ಮಾಹಿತಿ…

Read More

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಇಳಿದು ನಂತರ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ವರ್ಷ ಸೋಮವಾರ ಬೆಳಗ್ಗೆ ನೀರಿಗೆ ಇಳಿದಿದ್ದರು. ನಂತರ ತುಂಗಾ ನದಿಯಲ್ಲಿ ನಾಪತ್ತೆಯಾಗಿದ್ದ ಶಂಕೆ ವ್ಯಕ್ತವಾಗಿತ್ತು . ನದಿ ದಡದಲ್ಲಿ ಮೊಬೈಲ್, ಬಟ್ಟೆ, ಚಪ್ಪಲಿ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು…

Read More

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ – union bank manager missing

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಮೊಬೈಲ್ ಆಧಾರದಲ್ಲಿ ಅವರು ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆಯಾಗಿದ್ದು ತುಂಗಾ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ತುಂಗಾ ನದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು  ಹುಡುಕಾಟ ನಡೆಸುತ್ತಿದ್ದಾರೆ. ಬ್ಯಾಂಕ್ ಮ್ಯಾನೇಜರ್ ನ ಸಂಬಂಧಿಕರು…

Read More

ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು

ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ತೀರ್ಥಹಳ್ಳಿ : ಹಲವಾರು ಅಪರಾಧಗಳಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಚಿನ್ನವನ್ನು ಕದ್ದು ತೀರ್ಥಹಳ್ಳಿಯ ತನ್ನ ಮನೆಯ ಹಿಂದೆ ಹೂತಿಟ್ಟಿದ್ದ ಆರೋಪಿಯನ್ನು ಮಾಗಡಿ ಪೊಲೀಸರು ತೀರ್ಥಹಳ್ಳಿಗೆ ಕರೆ ತಂದು ಕೆಜಿ ಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ  ನಡೆದಿದೆ. ಹಮೀದ್ ಹಂಜ ಎಂಬ ಆರೋಪಿ ಬೆಂಗಳೂರಿನ ಮಾಗಡಿಯಲ್ಲಿ ಕಳ್ಳತನ ಮಾಡಿ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ತಮ್ಮ ಮನೆಯ ಹಿತ್ತಲಿನಲ್ಲಿ ತಂದು ಹೂತಿಟ್ಟಿದ್ದ. ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆರೋಪಿಯನ್ನು ಕರೆ ತಂದಿದ್ದ ಮಾಗಡಿ…

Read More