11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2ರಂದು ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್‌ ಸಿಂಗ್‌ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ ಶಿಕಾರಿಪುರ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಇಎನ್‌ ಅಪರಾಧ ಠಾಣೆಯ ಪೊಲೀಸರು ಈಚೆಗೆ ಬಂಧಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಮಲ್ಲಾಪುರ ಗ್ರಾಮದ ನಿವಾಸಿಗಳಾದ ಮೊಹಮ್ಮದ್‌ ಮುಜೀಬ್ (23), ಹಜರತ್ ಉಸ್ಮಾನ್ (26), ಶಿವಮೊಗ್ಗದ ಅಣ್ಣಾನಗರ ನಿವಾಸಿ ಸಲ್ಮಾನ್ ಇ.(28) ಹಾಗೂ ಶಿಕಾರಿಪುರದ ಜಟ್‌ಪಟ್‌ ನಗರದ ಮೊಹಮ್ಮದ್‌ ಕೈಫ್‌ (21) ಬಂಧಿತರು. ಡಿವೈಎಸ್‌ಪಿ ಕೆ.ಕೃಷ್ಣಮೂರ್ತಿ ನೇತೃತ್ವದ…

Read More

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!!

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!! ಭಿನ್ನಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಬೈಕ್ ನ ಹಾರ್ನ್ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಘಟನೆ ನಡೆದ…

Read More

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!?

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!? ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಿನ್ನೆ ರಾತ್ರಿ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆ (ಶುಕ್ರವಾರ) ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು…

Read More

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ.ಅವರನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೋಟದಲ್ಲಿ ಮಹಿಳೆ ಮೇಕೆಗಳನ್ನ ಮೇಯಿಸುತ್ತಿದ್ದಾಳೆಂದು ಆಕ್ರೋಶಗೊಂಡ…

Read More

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಶಿಕಾರಿಪುರ : ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳ ತಾರಕಕ್ಕೇರಿ ಪತಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ….

Read More

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ ಸಹೋದರಿಯ ಪ್ರೀತಿಗೆ ಒಪ್ಪದ ತಂದೆಯನ್ನು ಮಗನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಸಂಬಂಧಿಕರೊಬ್ಬರ ಮಗನನ್ನು ಪ್ರೀತಿಸುತಿದ್ದ ಮಗಳಿಗೆ ಹಿಂಸೆ ನೀಡುತ್ತಿದ್ದ ತಂದೆಯನ್ನು ಮಗ ಕೊಲೆ ಮಾಡಿದ್ದಾನೆ. ಸಹೋದರಿಯ ಪ್ರೀತಿಯನ್ನು ತಂದೆಯ ಬಳಿ ಒಪ್ಪಿಸಲು ಹೋದ ಮಗನ ನಡುವೆ ನಡೆದ  ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಗಳದಲ್ಲಿ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಮುಸ್ತಾಫ ಬೇಗ್(42) ಸಾವನ್ನಪ್ಪಿದ್ದಾನೆ.ಶಾಹಿದ್…

Read More

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ ತಂದೆ ಲಿಂಗಾನಾಯ್ಕ್ ಜೊತೆಗೆ ಆಸ್ತಿ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಲಿಂಗಾನಾಯ್ಕ್ ಕುಡಗೋಲಿನಿಂದ ಮಗನ ಎದೆ ಭಾಗಕ್ಕೆ ಚುಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಗಂಗಾನಾಯ್ಕ್ ಮೃತಪಟ್ಟಿದ್ದಾನೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ!

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ! ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಇಂದು ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಅವರ ನಿಧನದಿಂದ ಅವರ ಅಪಾರ ಭಕ್ತ ಸಮೂಹ ಶೋಕದ ಕಡಲಲ್ಲಿ ಮುಳುಗಿದೆ. ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಸ್ವಾಮೀಜಿಗಳು, ಅನೇಕ ಗಣ್ಯರು‌ ಸಂತಾಪ ಸೂಚಿಸಿದ್ದಾರೆ. ಸ್ವಾಮೀಜಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ…

Read More

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಬಿದ್ದು ಮೃತಪಟ್ಟಿದೆ. ಮೃತ ಮಗು ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್ ಪುತ್ರ ಮೊಹಮದ್ ಅಯಾನ್(3) ಎಂದು ತಿಳಿದು ಬಂದಿದೆ. ಇಮ್ರಾನ್ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಂಬಂಧಿಕರ ಆರೋಗ್ಯ ವಿಚಾರಿಸಲು ಮಗುವನ್ನು ಜೊತೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು…

Read More