Headlines

ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಶಿವಮೊಗ್ಗ : ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿ ಅಶಾಂತಿ  ಮೂಡಿಸಿರುವ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ನ ಜಿಡಿ ಮಂಜುನಾಥ್ ನೇತೃತ್ವದಲ್ಲಿ ಎಸ್ಪಿ ಮಿಥುನ್ ಕುಮಾರ್ ಗೆ ಮನವಿ ಸಲ್ಲಿಸಲಾಯಿತು.  ಜು.21 ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ…

Read More

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ ಶಿವಮೊಗ್ಗ, ಜುಲೈ 23 – ಇಂದು ಸಂಜೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶರಾವತಿ ನಗರದಲ್ಲೊ ನಡೆದಿದೆ. ಶಬ್ದದ ತೀವ್ರತೆಗೆ ನೆರೆಮನೆಯವರು ಭಯದಿಂದ ಓಡಿ ಬಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿ ವಾಸಿಸುತ್ತಿರುವ ಎಂ.ಬಿ. ಪೀರಾನ್ ಸಾಬ್ (48) ಅವರ ಮನೆಯಲ್ಲಿ…

Read More

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ…

Read More

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು…

Read More

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ಶಿವಮೊಗ್ಗ  ಜು. 22: ಮನೆ ಮುಂಭಾಗ ನಿಲ್ಲಿಸಿದ್ದ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕೃಷಿಕ ಓಂಕಾರಪ್ಪ ಎಂಬುವರ ಮನೆಯ ಬಳಿ ತಡರಾತ್ರಿ 1 ಗಂಟೆ ಸರಿಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆಯ ಹೊರಭಾಗದಲ್ಲಿ ಭಾರೀ ಪ್ರಮಾಣದ ಹೊಗೆ ಬರುತ್ತಿರುವುದನ್ನು ಗಮನಿಸಿದ ಓಂಕಾರಪ್ಪ ಅವರು, ಹೊರಬಂದು ಗಮನಿಸಿದಾಗ ಬೈಕ್…

Read More

ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ ಶಿವಮೊಗ್ಗ : ಅನಾಮಧೇಯ ವ್ಯಕ್ತಿಯೋರ್ವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವಕೀಲ ಕೆ.ಪಿ. ಶ್ರೀಪಾಲ್ ಆಗ್ರಹಿಸಿದರು. ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,೮ ವರ್ಷದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ೯೮ ಪ್ರಕರಣ ಅಸಹಜ ಸಾವೆಂದು ವರದಿಯಾಗಿದೆ. ಹೂತಿಟ್ಟಿರುವ ನೂರಾರು ಶವಗಳಲ್ಲಿ ೧೨ ರಿಂದ ೧೫ ವರ್ಷದ ಹೆಣ್ಣು ಮಕ್ಕಳು, ಪುರುಷರು, ಮಹಿಳೆಯರು…

Read More

ಪ್ರಾಚೀನ ನರಸಿಂಹ ದೇವರ ವಿಗ್ರಹ ಕಿಡಿಗೇಡಿಗಳಿಂದ ಭಗ್ನ – ಭಕ್ತರ ಆಕ್ರೋಶ

ಪ್ರಾಚೀನ ನರಸಿಂಹ ದೇವರ ವಿಗ್ರಹ ಕಿಡಿಗೇಡಿಗಳಿಂದ ಭಗ್ನ – ಭಕ್ತರ ಆಕ್ರೋಶ ಸೊರಬ: ಅಪೂರ್ವ ಪ್ರಾಚೀನ ನರಸಿಂಹ ವಿಗ್ರಹವನ್ನು ಭಗ್ನಗೊಳಿಸಿದ ಘಟನೆ ತಾಲ್ಲೂಕಿನ ಕುಬಟೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ನರಸಿಂಹ ಕ್ಷೇತ್ರವೆನ್ನಲಾದ ಸೊರಬ ತಾಲ್ಲೂಕಿನಲ್ಲಿ ಅನೇಕ ನರಸಿಂಹ ದೇಗುಲಗಳಿವೆ. ಸುಮಾರು ಎರಡನೇ ಶತಮಾನದಿಂದ ನಾಲ್ಕನೆ ಶತಮಾನದ ಅವಧಿಯ ವಿಗ್ರಹಗಳು ಗಮನಸೆಳೆದಿದ್ದು ಕುಬಟೂರು ವಿಗ್ರಹ ಜಿಲ್ಲೆಯ ಕೆಲವೇ ಕೆಲವು ಪ್ರಾಚೀನ ವಿಗ್ರಹಗಳಲ್ಲಿ ಒಂದು. ಇತಿಹಾಸ ಆರಂಭಿಕ ಹಂತದ ವಿಗ್ರಹಗಳಾಗಿರುವ ಇವು ಕುಳಿತು ಮಣಿಯನ್ನು ಹಿಡಿದಿರುವ ಭಂಗಿಯಲ್ಲಿದ್ದು ಅನೇಕರ ಆರಾಧ್ಯ…

Read More

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ!

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ! ಶಿವಮೊಗ್ಗ ಜಿಲ್ಲೆ, ಸಾಗರ: ಸಾಗರ ತಾಲ್ಲೂಕಿನ ಶಿಕ್ಷಣ ಪ್ರೇಮಿಗಳಿಗೆ ಸಂತಸದ ಸುದ್ದಿಯಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಿರಂತರ ಪ್ರಯತ್ನ ಫಲ ನೀಡಿದ್ದು, ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ದ್ವಿಭಾಷಾ ಮಾಧ್ಯಮದಡಿ ಇಂಗ್ಲಿಷ್‌ ತರಗತಿಗಳನ್ನೂ ಆರಂಭಿಸಲು…

Read More

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ…

Read More

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ ಅಂತ್ಯಸಂಸ್ಕಾರ ನೆರವೇರಿದ ನಂತರ, ಗಂಭೀರ ಆರೋಪಗಳ ಹಿನ್ನೆಲೆ ಆನಂದಪುರ ಪೊಲೀಸರು ಪತಿ ಶ್ರೀಕಾಂತ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ ಶ್ರೀಕಾಂತ್…

Read More