ಲೈಂಗಿಕ ಕಿರುಕುಳದ ಆರೋಪ : ಮೆಗ್ಗಾನ್ ಭೋಧನಾ ಆಸ್ಪತ್ರೆಯ ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ

ಲೈಂಗಿಕ ಕಿರುಕುಳದ ಆರೋಪ: ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ ಶಿವಮೊಗ್ಗ: ನಗರದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ|| ಅಶ್ವಿನ್ ಹೆಬ್ಬಾರ್  ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ  ಆರೋಪದ ಹಿನ್ನೆಲೆಯಲ್ಲಿ  ಅವರನ್ನು ಬಂಧಿಸಿ ಕ್ರಮ ಜರುಗಿಸಬೇಕೆಂದು ಪೀಪಲ್ ಲಾಯರ್ಸ್ ಗೀಲ್ಡ್‌ನ ಮುಖ್ಯಸ್ಥ ಕೆ.ಪಿ. ಶ್ರೀಪಾಲ್ ಆಗ್ರಹಿಸಿದ್ದಾರೆ. ಬುಧವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಕರಣ ದಾಖಲಾಗುತ್ತಿದ್ದಂತೆ ಡಾ|| ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದಾರೆ. ಆತನನ್ನು ಹುಡುಕಿ ಬಂಧಿಸಬೇಕು. ಪೊಲೀಸರು ಕೂಡ ಸುಮ್ಮನಿದ್ದಾರೆ. ಜಿಲ್ಲಾಧಿಕಾರಿ ಮತ್ತು…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ಸಂಚಾರ ವ್ಯತ್ಯಯವಾಗಿದೆ.ಮರ ಬಿದ್ದ ಪಕ್ಕದಲ್ಲಿಯೇ ಪಿಕಪ್ ವಾಹನವೊಂದು ನಿಂತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಸಾಗರ ರಸ್ತೆಯ ಮುಸ್ಲಿಂ ಖಬರ್ ಸ್ಥಾನ್ ಮುಂಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ.ಈ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ…

Read More

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ ರಿಪ್ಪನ್ ಪೇಟೆ : ಅಳಿವಿನಂಚಿನಲ್ಲಿರುವ ಅಪರೂಪದ ಜೀವಿ ಹಾರುವ ಓತಿ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಹಾರೋಹಿತ್ತಲು ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಶಿಕ್ಷಕ ಮಾಲತೇಶ್ ಅವರ ಮನೆ ಸಮೀಪ ಕಾಣಿಸಿಕೊಂಡ ಓತಿ ಕೆಲಕಾಲ ಮಕ್ಕಳು ಮತ್ತು ಹಿರಿಯರಿಗೆ ಆಕರ್ಷಣೀಯವಾಗಿದ್ದು, ತನ್ನ ವಿಶಿಷ್ಟ ಸೌಂದರ್ಯದ ದರ್ಶನ ನೀಡಿತು. ಜನರ ಸದ್ದು ಗದ್ದಲ ಹೆಚ್ಚಾಗುತ್ತಿದ್ದಂತೆ ತನಗೆ ಪ್ರಾಶಸ್ಯವಾದ ಅಡವಿಯನ್ನು ಸೇರಿಕೊಂಡಿತು. ಸರಿಸೃಪಗಳ ಪ್ರಭೇದಕ್ಕೆ ಸೇರಿರುವ ಈ…

Read More

RIPPONPETE |ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ

ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ ರಿಪ್ಪನ್ ಪೇಟೆ : ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ ಭ್ರಷ್ಟಾಚಾರದ ಕೂಪಗಳಾಗಿ ಮಾರ್ಪಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಆಘಾತಕಾರಿ ಘಟನೆಯೊಂದು ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರದಲ್ಲಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ…

Read More

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ ಶಿವಮೊಗ್ಗ ನಗರದ ಹಳೆ ಬೊಮ್ಮನಕಟ್ಟೆಯ ಕೆಂಚಮ್ಮನ ದೇವಸ್ಥಾನದ ಹಿಂಬದಿಯ ಕೆರೆ ಏರಿಯ ಮೇಲೆ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಳೇಬೊಮ್ಮನಕಟ್ಟೆಯ ಶೇಖರಪ್ಪ ಎಂಬುವವರ ಪುತ್ರ ಅವಿನಾಶ್ (32) ಕೊಲೆಗೀಡಾದವ. ಅವಿನಾಶ್ 10 ವರ್ಷಗಳ ಹಿಂದೆ ನಡೆದ ರೌಡಿ ಶೀಟರ್ ತಮಿಳುಗಿರಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ನಂತರ ನ್ಯಾಯಾಲಯ ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪೆರೋಲ್ ಮೇಲೆ ಅವಿನಾಶ್ ಈಚೆಗೆ ಮನೆಗೆ ಬಂದಿದ್ದನು ಎಂದು ತಿಳಿದುಬಂದಿದೆ.ಕೊಲೆ…

Read More

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು ಸ್ನೇಹಿತನ ತೋಟದ ಮನೆಯಲ್ಲಿ ಪಾರ್ಟಿ ನಡೆಸಲು ತೆರಳಿದ್ದ ವೇಳೆ ತಾಲ್ಲೂಕಿನ ಯಡವಾಲದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಶನಿವಾರ ತಡರಾತ್ರಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯಡವಾಲ ಗ್ರಾಮದ ಕುಮಾರನಾಯ್ಜ ಅವರ ಪುತ್ರ, ಬಿ.ಕಾಂ ಓದುತ್ತಿದ್ದ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಚೌಡಮ್ಮನ ದೇವಸ್ಥಾನ ಸಮೀಪದ ನಿವಾಸಿ ವಿಜಯ್ ಅವರ ಪುತ್ರ ಚಿರಂಜೀವಿ (22) ಸಾವಿಗೀಡಾದವರು. ಸ್ನೇಹಿತ ಗೌತಮ್ ಸಹೋದರಿ…

Read More

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ ಶಿವಮೊಗ್ಗ : ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿವಾಸಿ ಪಾಲಾಕ್ಷಮ್ಮ  ಅವರ  ಮಗಳು ಅಡಮಾನವಿಟ್ಟಿದ್ದ ಒಡವೆಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ಹೇಳಿದ್ದರಿಂದ ತಮ್ಮ ಗ್ರಾಮದ ಬಳಿ ಇರುವ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ೧,೭೫,೦೦೦ ಹಣವನ್ನು ಬಿಡಿಸಿಕೊಂಡು ಜೂನ್ ೧೪ರಂದು ಎನ್‌ಆರ್ ಪುರದಲ್ಲಿರುವ ಅವಳ…

Read More

ANANDAPURA | ಸಾಲಬಾಧೆಗೆ ಬೇಸತ್ತು ಗ್ರಾಪಂ ಮಾಜಿ ಸದಸ್ಯ ಆತ್ಮಹತ್ಯೆ

ಸಾಲಬಾಧೆಗೆ ಬೇಸತ್ತು ಗ್ರಾಪಂ ಮಾಜಿ ಸದಸ್ಯ ಆತ್ಮಹತ್ಯೆ ಸಾಗರ : ಸಾಲ ಬಾಧೆ ತಾಳಲಾರದೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮೇಘರಾಜ್ ಬಿ ಎಚ್ (43) ಗೌತಮಪುರ  ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತರಾಗಿರುವ ಮೇಘರಾಜ್  5 ಲಕ್ಷಕ್ಕೂ ಅಧಿಕ ಸಾಲವನ್ನು  ಬೆಳೆಗಾಗಿ ಮಾಡಿರುವ ಮಾಹಿತಿ ತಿಳಿದು ಬಂದಿದೆ. ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗೋಲ್ಡ್ ಲೋನ್ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ….

Read More

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..!

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..! ತೀರ್ಥಹಳ್ಳಿ :  ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದು ರೀಲ್ಸ್ ಮಾಡಿದ ಘಟನೆ ಬಗ್ಗೆ ಹಲವು ಮಾದ್ಯಮಗಳಲ್ಲಿ ವರದಿಯಾಗಿತ್ತು. ವರದಿ ಬೆನ್ನಲ್ಲೇ ರೀಲ್ಸ್ ಮಾಡಿದ ಯುವಕನನ್ನು ತೀರ್ಥಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುಷ್ಮಾ ರವರು ಕರೆದು ವಿಚಾರಿಸಿ ಎಚ್ಚರಿಕೆ ನೀಡಿದ್ದಾರೆ. ರೀಲ್ಸ್ ಮಾಡಿದ ಯುವಕನ ಮೇಲೆ ಸಣ್ಣದೊಂದು ಕೇಸ್…

Read More