NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ ಶಿವಮೊಗ್ಗ:  ಬಿ.ಆರ್.ಅಂಬೇಡ್ಕರ್  ಜಗತ್ತು ಕಂಡ ಅಪ್ರತಿಮ ಹೋರಾಟಗಾರರು, ಅವರು ಸಂವಿಧಾನ ರಚಿಸದೇ ಇದ್ದಿದ್ದರೆ ಇಂದು ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. ಇದನ್ನು ಅರಿತುಕೊಳ್ಳದ ಅಮಿತ್‌ ಶಾ  ಈ ದೇಶದ ಕೇಂದ್ರ ಗೃಹ ಸಚಿವರಾಗಿರುವುದು ನಮ್ಮೆಲ್ಲರ ದುರ್ದೈವ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಆರ್ ಪ್ರಸನ್ನಕುಮಾರ್ ಹೇಳಿದರು. ಒಬ್ಬ ಜನಪ್ರತಿನಿಧಿಯಾಗಿ ಅಂಬೇಡ್ಕರ್‌ರವರಂತಹವರ ಮಹಾನ್ ನಾಯಕರ ಹೋರಾಟದ ಫಲವಾಗಿ ಸೃಷ್ಟಿಯಾಗಿರುವ ಸಂಸತ್ತಿನಲ್ಲೇ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್,…

Read More

Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ಶಿವಮೊಗ್ಗ:ಕಾಲೇಜಿನಲ್ಲಿಯೇ ವಿದ್ಯಾರ್ಥಿನಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ  ನಂಜಪ್ಪ ಲೇ ಔಟ್ ನಲ್ಲಿರುವ ಖಾಸಗಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ದ್ವಿತಿಯ ಪಿಯು ವಿದ್ಯಾರ್ಥಿನಿ ಮೂರ್ಛೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಕಾಲೇಜಿನಲ್ಲಿ ಇದ್ದಕ್ಕಿದ್ದ ಹಾಗೆ ಅಸ್ವಸ್ಥಗೊಂಡು ಪ್ರಿನ್ಸಿಫಾಲರ ರೂಮ್‌ನ ಬಾಗಿಲಲ್ಲಿಯೇ ವಿದ್ಯಾರ್ಥಿನಿ ಕುಸಿದುಬಿದ್ದಿದ್ದಳು. ತಕ್ಷಣವೇ ಅಲ್ಲಿಂದ ಕಾರೊಂದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿ ಓದಿದ್ದ…

Read More

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ !

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ ! ತೀರ್ಥಹಳ್ಳಿ : ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಯುವಕನೋರ್ವ ವಾರಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಂಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತನು ವಾರಳ್ಳಿ ದಿನೇಶ್ ರವರ ಮಗ ಎಂದು ತಿಳಿದು ಬಂದಿದೆ.ಕುರುವಳ್ಳಿ ಪ್ರಮೋದ್ ಪೂಜಾರಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆಗುಂಬೆ ಪೊಲೀಸ್…

Read More

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್ ಲಾಡ್ಜ್‌ವೊಂದ ಮೇಲೆ ಪೊಲೀಸರು ದಾಳಿ ನಡೆಸಿ ಅಂದರ್‌ ಬಾಹರ್‌ ಆಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿರುವ ಲಾಡ್ಜ್‌ನ ಕೊಠಡಿ ಸಂಖ್ಯೆ 303ರಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಮೇರೆಗೆ ದಾಳಿ ನಡೆಸಿದ ಪೊಲೀಸರು ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದು ಕೇಸ್ ದಾಖಲೊಸಿದ್ದಾರೆ. ದೊಡ್ಡಪೇಟೆ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಆರೋಪಿಗಳ ವಿರುದ್ಧ…

Read More

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ  ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವ ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ವಿಭಾಗಿಯ ಮಟ್ಟದಲ್ಲಿ  ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ…

Read More

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ

ವಿಷ  ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ ಶಿವಮೊಗ್ಗ:  ಗಾಡಿಕೊಪ್ಪದ ಸೇವಾಲಾಲ್ ಬೀದಿಯ ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬ ಇದು ಆತ್ಮಹತ್ಯೆ ಅಲ್ಲ, ಅನುಮಾನಾಸ್ಪದ ಸಾವು ಎಂದು ಆರೋಪಿಸಿದೆ. ಗಾಡಿಕೊಪ್ಪದ ನಿವಾಸಿ ಭೋಜ್ಯ ನಾಯ್ಕ (೫೮) ಆತ್ಮಹತ್ಯೆ ಮಾಡಿಕೊಂಡಿರುವವರು.  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೂ ಅವರ ಕುತ್ತಿಗೆಯಲ್ಲಿ ನೇಣು  ಬಿಗಿದ ಕಲೆ ಇರುವುದರಿಂದ ಕುಟುಂಬ ಇದೊಂದು ಅನುಮಾನಸ್ಪದ ಸಾವು ಎಂದು ಆರೋಪಿಸಿದೆ. ಭೋಜ್ಯ ನಾಯ್ಕ್ ಅಣ್ಣ ತಮ್ಮಂದಿರ ನಡುವೆ ಆಸ್ತಿ…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಪಂ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ನಿಟ್ಟೂರು ಗ್ರಾಮದ ಸಾರ್ವಜನಿಕರು ನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ಬಿಜೆಪಿ ಕಾರ್ಯಕರ್ತ…

Read More

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು ಶಿವಮೊಗ್ಗ: ದಾರಿಯಲ್ಲಿ ಸಿಗುವ ವ್ಯಕ್ತಿಗಳು ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಹೇಗೆಲ್ಲಾ ಯಾಮಾರಿಸುತ್ತಾರೆ ಎಂಬುದಕ್ಕೆ ಸಾಕ್ಷಿ ಎನ್ನುವಂತಹ ಪ್ರಕರಣವೊಂದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ವೀರಶೈವ ರುದ್ರಭೂಮಿಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮಾತನಾಡಿಸಿದ್ದಾರೆ. ಕರುಬರಪಾಳ್ಯದ ದುರ್ಗಮ್ಮನ ದೇವಸ್ಥಾನದ ಹುಂಡಿಗೆ ಹಣ ಹಾಕಬೇಕು. ಆದರೆ ದೇವಸ್ಥಾನದ ಬಾಗಿಲು ಹಾಕಿದೆ. ಆ ದುಡ್ಡನ್ನ ನಿಮಗೆ ಕೊಡುತ್ತೇವೆ. ಸಂಜೆ ನೀವೆ ಹಾಕಬಹುದಾ ಎಂದು ಕೇಳಿದ್ದಾರೆ….

Read More

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ  ಮೊಹಮದ್ ಬಿಲಾಲ್ ಆಯ್ಕೆ

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ  ಮೊಹಮದ್ ಬಿಲಾಲ್ ಆಯ್ಕೆ ಶಿವಮೊಗ್ಗ: SGFI ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ  ಶಿವಮೊಗ್ಗದ  ಮೊಹಮದ್ ಬಿಲಾಲ್ ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್‌ ನಲ್ಲಿ ಡಿಸೆಂಬರ್ 19ರಿಂದ 24ರವರೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಾನೆ. ದಾವಣಗೆರೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಪೈಕಿ ಮಹಮದ್ ಬಿಲಾಲ್ ಪದಕ ಪಡೆದಿರುವ ಏಕೈಕ ಕ್ರೀಡಾಪಟುವಾಗಿದ್ದಾನೆ. ಕಳೆದ ವರ್ಷ ಸಹ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸಹ ಬಿಲಾಲ್ ಪ್ರಥಮ ಸ್ಥಾನ…

Read More