ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು TVS ಎಕ್ಸ್‌ಎಲ್‌ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರ ವ್ಯಾಪ್ತಿಯ ಗೌತಮಪುರದಲ್ಲಿ ಸಂಭವಿಸಿದೆ. ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ…

Read More

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ವಾಸಿಸುತಿದ್ದ ವೃದ್ದೆಯನ್ನು ಪಿಎಸ್‌ಐ ಪ್ರವೀಣ್ ಹಾಗೂ ಪತ್ರಕರ್ತರು ವೃದ್ದಾಶ್ರಮಕ್ಕೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾಗ್ಯಲಕ್ಷ್ಮಿ ಕೋಂ ನಾರಾಯಣಸ್ವಾಮಿ ಮೂಲತಃ ಅರಸಾಳಿನವರು. ಶಿಕ್ಷಕರಾಗಿದ್ದ ಇವರ ಪತಿ ಕಳೆದ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು.ಮಕ್ಕಳಿಲ್ಲದ ಅವರು ಕಳೆದ ಎಂಟು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ದುಸ್ತರವಾಗಿರುವ ಈಗಲೋ ಆಗಲೋ…

Read More

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….

Read More

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ : 17 ವರ್ಷದ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಪಟ್ಟಣಕ್ಕೆ ಆಗಮಿಸಿದ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಅಕ್ಟೋಬರ್ 18 ಮತ್ತು 19 ರಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ…

Read More

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಐದು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅ 18 ಮತ್ತು 19 ರಂದು  ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು  ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…

Read More

ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು

ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ತೀರ್ಥಹಳ್ಳಿ : ಹಲವಾರು ಅಪರಾಧಗಳಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಚಿನ್ನವನ್ನು ಕದ್ದು ತೀರ್ಥಹಳ್ಳಿಯ ತನ್ನ ಮನೆಯ ಹಿಂದೆ ಹೂತಿಟ್ಟಿದ್ದ ಆರೋಪಿಯನ್ನು ಮಾಗಡಿ ಪೊಲೀಸರು ತೀರ್ಥಹಳ್ಳಿಗೆ ಕರೆ ತಂದು ಕೆಜಿ ಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ  ನಡೆದಿದೆ. ಹಮೀದ್ ಹಂಜ ಎಂಬ ಆರೋಪಿ ಬೆಂಗಳೂರಿನ ಮಾಗಡಿಯಲ್ಲಿ ಕಳ್ಳತನ ಮಾಡಿ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ತಮ್ಮ ಮನೆಯ ಹಿತ್ತಲಿನಲ್ಲಿ ತಂದು ಹೂತಿಟ್ಟಿದ್ದ. ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆರೋಪಿಯನ್ನು ಕರೆ ತಂದಿದ್ದ ಮಾಗಡಿ…

Read More

ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು

ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು ಶಿವಮೊಗ್ಗ ನಗರ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆವರೆಗೂ ಮಳೆ ಆರ್ಭಟಿಸಿದೆ. ಬೆಳಿಗ್ಗೆಯೂ ಅರ್ಧ ಗಂಟೆ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸುಗೊಂಡಿದೆ. ಕುಂಭದ್ರೋಣ ಮಳೆಗೆ ರಾತ್ರಿಯಿಡೀ ಶಿವಮೊಗ್ಗ ನಗರ ಅಕ್ಷರಶಃ ನಲುಗಿದೆ.ನಗರದ ರಸ್ತೆಗಳು ಹಳ್ಳಗಳಾಗಿ ಬದಲಾಗಿವೆ. ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯೆಲ್ಲ ನಿದ್ರೆಗೆಟ್ಟರು. ಮನೆಯಿಂದ ನೀರು ಹೊರ ಹಾಕುವಲ್ಲಿ ಹೈರಾಣಾದರು. ಮಳೆಯ ಆರ್ಭಟ ಮುಂಜಾನೆವರೆಗೂ ಒಂದೇ…

Read More

ಅಂಧ ವ್ಯಕ್ತಿಗೆ ಕೆಲಸ ಕೊಡಿಸುವುದಾಗಿ ಪತ್ರಕರ್ತನಿಂದ ವಂಚನೆ ಆರೋಪ

ಕೆಲಸ ಕೊಡಿಸುವುದಾಗಿ ಹೇಳಿ ಪತ್ರಕರ್ತನೊಬ್ಬ ಅಂಧರೊಬ್ಬರಿಗೆ 2 ಲಕ್ಷದ 30 ಸಾವಿರ ರೂ. ವಂಚಿಸಿರುವುದು ಆರೋಪ ಕೇಳಿ ಬಂದಿದೆ. ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಂಧ ಬಸವರಾಜ್ ತನ್ನ ಮಗ ಗಗನ್ ದೀಪ್‌ಗೆ ನಗರಸಭೆಯಲ್ಲಿ  ಕೆಲಸ ಖಾಲಿಯಿದೆ. ಇಲ್ಲವೆಂದರೆ ಪತ್ರಕರ್ತರ ಕಚೇರಿಯೊಂದರಲ್ಲಿ ಕೆಲಸ ಆಗಲಿದೆ ಎಂದು ತಿಳಿಸಿದ್ದರು. ಡಾಟಾ ಆಪರೇಟರ್ ಕೆಲಸಕ್ಕೆ 7-8 ಲಕ್ಷ ರೂ. ಬೇಡಿಕೆ ಇದೆ ಎಂದಿದ್ದರು. ಬೇಡ ಎಂದಾಗ ನಿಮ್ಮ ಹತ್ತಿರ ಎಷ್ಟು ಇದ್ದರೂ ಕೊಡಿ ಎಂದು ಹೇಳಿ  2 ಲಕ್ಷ…

Read More