ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ನೆರವೇರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಲಿಂಗಪ್ಪ ಕಗ್ಗಲಿ, ಮೋಹನ್,ಜಯಲಕ್ಷಿ, ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ, ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು.

Read More

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ಜಾವಲಿನ್ ಸ್ಪರ್ಧೆಯಲ್ಲಿ ಈತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಹೆದ್ದಾರಿಪುರದ ಆಶಾ ಮತ್ತು ಈಶ್ವರ್ ದಂಪತಿಗಳ ಪುತ್ರನಾದ ಸಾತ್ವಿಕ್ ಗೌಡ…

Read More

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.!

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.! ಹೊಸನಗರ : ಬದುಕಿ ಬಾಳಬೇಕಿದ್ದ ಪುಟ್ಟ ಕಂದಮನೊಬ್ಬ ತನ್ನದಲ್ಲದ ತಪ್ಪಿಗೆ ದುರಂತ ಅಂತ್ಯ ಕಂಡ ಕರುಳು ಹಿಂಡುವ ಘಟನೆ ನಡೆದಿದೆ. ಹೊಸನಗರ ತಾಲೂಕು ನಗರ ಸಮೀಪದ ಹಿರೀಮನೆಯಲ್ಲಿ ಕಳೆದ ಅ.24 ಗುರುವಾರ ಇಂತಹ ದುರಂತಕ್ಕೊಂದು ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮ ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ದುರ್ಧೈವಿಯಾಗಿದ್ದಾನೆ. ಶಾಸಕ…

Read More

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ ರಿಪ್ಪನ್ ಪೇಟೆ : ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿರುವ ಮೂಲಕ ಸೌಹಾರ್ಧತೆ ಮೆರೆದಿರುವ ಘಟನೆ ನಡೆದಿದೆ. ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (‌ತನ್ವಿ ಮೊಬೈಲ್ ವರ್ಲ್ಡ್)‌ ಅಂಗಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ…

Read More

RIPPONPETE |ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ – ಕನ್ನಡಪರ ಹೋರಾಟಗಾರರ ಆಕ್ರೋಶ

ರಿಪ್ಪನ್‌ಪೇಟೆ : ನಾಡಿನಾದ್ಯಂತ ದೀಪಾವಳಿ ಹಬ್ಬದ ನಡುವೆಯೂ ಸಡಗರ ಹಾಗೂ ಸಂಭ್ರದಿಂದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತಿದ್ದು ಅದಕ್ಕೆ ತದ್ವಿರುದ್ಧ ಎಂಬುವಂತೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ 800 ಕ್ಕೂ ಅಧಿಕ ವಿದ್ಯಾರ್ಥಿಗಳಿರುವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೇ ನಿರ್ಲಕ್ಷ್ಯ ತೋರಿರುವ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತಿದ್ದಾರೆ.ಈ ಕಾಲೇಜು ಕಲೆ, ಸಾಹಿತ್ಯ,ವಿಜ್ಞಾನ ಮತ್ತು ಕ್ರೀಡೆಯಲ್ಲಿ ತನ್ನದೇ ಆದ ಛಾಫು…

Read More

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಗುರುವಾರ ಲಕ್ಷ್ಮಿ ಪೂಜೆ ನೆರವೇರಿಸಲಾಯಿತು.  ಅಂಗಡಿಗಳು, ಶೋರೂಮ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ಅಮವಾಸ್ಯೆಯ ದಿನವಾದ ಗುರುವಾರ ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ,…

Read More

ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸುಮಂತ ಎಲ್. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ   ಕ್ರೀಡಾ ಕೂಟದ ಬಾಲಕರ ತಟ್ಟೆ ಎಸೆತ ಸ್ಪರ್ಧೆಯಲ್ಲಿ ಈತ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ…

Read More

ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ ರಿಪ್ಪನ್‌ಪೇಟೆ : ಬೆಳೆಯುವ ಮಕ್ಕಳಲ್ಲಿ ಕ್ರೀಡಾ ಶಕ್ತಿ ಬೆಳೆಸುವ ಅಗತ್ಯವಿದ್ದು, ಉಲ್ಲಸಿತ ಜೀವನಕ್ಕೆ ಸದೃಢ ಶರೀರಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ. ಇಂದಿನ ಮಕ್ಕಳಲ್ಲಿ ಕ್ರೀಡಾ ಪ್ರವೃತ್ತಿ ಬೆಳೆದು ಬರುವ ಅಗತ್ಯವಿದೆ ಎಂದು ಶಾಸಕ ರಾಜ್ಯ ಅರಣ್ಯ ಅಭಿವೃದ್ದಿ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶ್ರೀಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರೀಡಾಪಟುಗಳನ್ನು ಸನ್ಮಾನಿಸಿ ಮಾತನಾಡಿ, ಮಕ್ಕಳಲ್ಲಿ ಶಿಕ್ಷಣದೊಂದಿಗೆ…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಅ.25 ರಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ  ಮಾದಕ ವಸ್ತುಗಾಂಜಾವನ್ನು  ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕುಂಸಿ ಪೊಲೀಸರು ಖಡಕ್ ದಾಳಿ ನಡೆಸಿ ಓರ್ವನನ್ನ ಬಂಧಿಸಿದ್ದಾರೆ. ಆರೋಪಿಯಿಂದ ಅಂದಾಜು ಮೌಲ್ಯ 15,000/- ರೂಗಳ 640  ಗ್ರಾಂ ತೂಕದ ಒಣ ಗಾಂಜಾ ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ 0213/2024 ಕಲಂ  20(b), 8(c) NDPS…

Read More