ಅಂಧ ವ್ಯಕ್ತಿಗೆ ಕೆಲಸ ಕೊಡಿಸುವುದಾಗಿ ಪತ್ರಕರ್ತನಿಂದ ವಂಚನೆ ಆರೋಪ
ಕೆಲಸ ಕೊಡಿಸುವುದಾಗಿ ಹೇಳಿ ಪತ್ರಕರ್ತನೊಬ್ಬ ಅಂಧರೊಬ್ಬರಿಗೆ 2 ಲಕ್ಷದ 30 ಸಾವಿರ ರೂ. ವಂಚಿಸಿರುವುದು ಆರೋಪ ಕೇಳಿ ಬಂದಿದೆ. ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಂಧ ಬಸವರಾಜ್ ತನ್ನ ಮಗ ಗಗನ್ ದೀಪ್ಗೆ ನಗರಸಭೆಯಲ್ಲಿ ಕೆಲಸ ಖಾಲಿಯಿದೆ. ಇಲ್ಲವೆಂದರೆ ಪತ್ರಕರ್ತರ ಕಚೇರಿಯೊಂದರಲ್ಲಿ ಕೆಲಸ ಆಗಲಿದೆ ಎಂದು ತಿಳಿಸಿದ್ದರು. ಡಾಟಾ ಆಪರೇಟರ್ ಕೆಲಸಕ್ಕೆ 7-8 ಲಕ್ಷ ರೂ. ಬೇಡಿಕೆ ಇದೆ ಎಂದಿದ್ದರು. ಬೇಡ ಎಂದಾಗ ನಿಮ್ಮ ಹತ್ತಿರ ಎಷ್ಟು ಇದ್ದರೂ ಕೊಡಿ ಎಂದು ಹೇಳಿ 2 ಲಕ್ಷ…