Headlines

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು…

Read More

ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು

ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರಿನಗೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕನ ಸಾವು ಆಘಾತ ಮೂಡಿಸಿದೆ. ಮೇ 26 ರಂದು ಸುರೇಶ್ ಎಂಬುವರ ಪುತ್ರ ಸುಬ್ರಹ್ಮಣ್ಯ(14) ಮನೆಯ ಸಮೀಪದ ಶುಂಠಿ ತೋಟದಲ್ಲಿದ್ದ ಕೃತಕ ನೀರಿನ ಹೊಂಡದಲ್ಲಿ ನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ದುರಂತದ ಕರಿ ನೆರಳನ್ನು ಬೀರಿದೆ. ಪೊಲೀಸರು ಇದನ್ನು “ಆಕಸ್ಮಿಕ ಸಾವು”…

Read More

ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು

ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂ. 52/2 ರಲ್ಲಿ ರಾಮಪ್ಪ ಬಿನ್ ಮರಿಯಪ್ಪ ಅವರ ಅಡಿಕೆ ತೋಟದ ಹೊಂಡದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆಯಾಗಿದ್ದು, ಈ ಘಟನೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಸೋಮವಾರ ಬೆಳಿಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಹೊರಬಿದ್ದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ…

Read More

HUMACHA | ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ವಿಷಪ್ರಯೋಗ ಶಂಕೆ!

HUMACHA | ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಕಳೇಬರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ತೋಟವೊಂದರ ಹೊಂಡದಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂಬರ 52 /2 ರ ರಾಮಪ್ಪ ಬಿನ್ ಮರಿಯಪ್ಪ ಎಂಬುವವರ ಅಡಿಕೆ ತೋಟದ ಹೊಂಡವೊಂದರಲ್ಲಿ ಎರಡು ಕಾಡುಕೋಣಗಳ ಮೃತದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಕಾಡುಕೋಣ ಮೃತಪಟ್ಟು ನಾಲ್ಕೈದು ದಿನಗಳಾಗಿರಬಹುದು ಎನ್ನಲಾಗುತಿದ್ದು , ವಿಷಪ್ರಾಶನ…

Read More

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ಸಾಗರ: “ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು. ಅವರಿಗೆ ಈ ನೆಲದಲ್ಲಿ ಬದುಕುವ ಹಕ್ಕಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅತ್ಯಂತ ಖಂಡನೀಯ ಕೃತ್ಯ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಈ…

Read More

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ 1.06 ಕೋಟಿ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ವ್ಯಕ್ತಿಗೆ ಕರೆ ಮಾಡಿದ ಅಪರಿಚಿತನೊಬ್ಬ ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಿ ವಾಟ್ಸ್‌ಆಪ್ ಗ್ರೂಪ್‌ಗೆ ಸೇರುವಂತೆ ಲಿಂಕ್ ಕಳುಹಿಸಿದ್ದ. ವಾಟ್ಸ್‌ಆಪ್ ಗ್ರೂಪ್‌ನಲ್ಲಿ ತನಿಷ್ಕಾ ಸನ್ಯಾಮ್ ಎಂದು ಪರಿಚಯ ಮಾಡಿಕೊಂಡು, ಟ್ರೇಡಿಂಗ್ ಮಾಡುವ ಮೊಬೈಲ್…

Read More

ಉಕ್ಕಡ ಮಗುಚಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ – ಮುಳುಗು ತಜ್ಞ ಈಶ್ವರ್ ಮಲ್ಪೆ ನೇತ್ರತ್ವದ ಕಾರ್ಯಾಚರಣೆ

ಹೊಸನಗರ : ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈ‍ಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಉಕ್ಕಡ ಮಗುಚಿ ಪೂರ್ಣೇಶ್‌ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್‌ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್‌ ಮತ್ತು ರಂಜನ್‌ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್ ಹಾಗೂ ಉಬೇದುಲ್ಲಾ ಷರೀಫ್ ನೇಮಕ

ಶಿವಮೊಗ್ಗ: ಜಿಲ್ಲೆಯ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ, ಯುವ ಮುಖಂಡ ನಾಗೋಡಿ ವಿಶ್ವನಾಥ್ ಹಾಗೂ ಕೆಂಚನಾಲ ಗ್ರಾಪಂ ಮಾಜಿ ಅಧ್ಯಕ್ಷ ಉಬೇದುಲ್ಲಾ ಷರೀಫ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ( KPCC) ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ಹೊಸನಗರ ಬ್ಲಾಕ್…

Read More

ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು

ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ ಬೆಳಗಿನ ಜಾವ ಅಕಸ್ಮಾತ್ ಸಂಭವಿಸಿದ ಘಟನೆಯಲ್ಲಿ ಹಸುವೊಂದು ಬಾವಿಗೆ ಬಿದ್ದು ಆಕಸ್ಮಿಕವಾಗಿ ಪ್ರಾಣಾಪಾಯಕ್ಕೆ ಸಿಲುಕಿತು. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ತುರ್ತು ಕ್ರಮ ಕೈಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸ್ವತಃ ಸಹಕಾರ ನೀಡಿದ ಕಾರಣದಿಂದ ಹಸು ಸುರಕ್ಷಿತವಾಗಿ ಪಾರಾಯಿತು. ಜುಮ್ಮಾ ಮಸೀದಿ ಹಿಂಭಾಗದ ಪ್ರದೇಶದಲ್ಲಿ ಮೇಯುತ್ತಿದ್ದ ಹಸು, ಅಜಾಗರೂಕತೆಯಿಂದ ಬಾವಿಯೊಳಗೆ…

Read More

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ ರಿಪ್ಪನ್ ಪೇಟೆ : ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವದಲ್ಲಿ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಿಹಿ ಹಾಗೂ ಪಾನೀಯ ವಿತರಿಸಿ ಸೌಹಾರ್ಧ ಮೆರೆಯಲಾಯಿತು. ಗಣಪತಿಯ ರಾಜಬೀದಿ ಉತ್ಸವ ಹೊಸನಗರ…

Read More