Headlines

ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ – ಕುಂಕುಮೋತ್ಸವ , ಭಕ್ತಿ ಸಿಂಚನ

ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ – ಕುಂಕುಮೋತ್ಸವ , ಭಕ್ತಿ ಸಿಂಚನ ಹೊಂಬುಜ (ಮಾ.14): ಪಾರಂಪರಿಕ ಜಿನಾಗಮೋಕ್ತ ಶಾಸ್ತದನ್ವಯ ಧ್ವಜಾರೋಹಣ ಮಾಡಿ, ಆರು ದಿವಸಗಳ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವವು ಇಂದು ಧ್ವಜಾವರೋಹಣ ಮಾಡುವ ಮೂಲಕ ಸಂಪನ್ನಗೊಂಡಿತ್ತು. ಶ್ರೀ ಜೈನಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ವಿವಿಧ ಆರಾಧನೆಗಳು, ನಾಗವಾಹನೋತ್ಸವ, ಸಿಂಹವಾಹನೋತ್ಸವ, ಬೆಳ್ಳಿ ರಥೋತ್ಸವ, ಪುಷ್ಪರಥೋತ್ಸವ, ಬಲಿ ಉತ್ಸವಾದಿಗಳು ಸಾಂಗವಾಗಿ ಪೂರ್ವಪರಂಪರೆಯಂತೆ ನೆರವೇರಿತು….

Read More

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ – ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ನವೋದಯ ಮತ್ತು ಮೊರಾರ್ಜಿ ಶಿಬಿರ – ಹುಂಚ ಸಂಸ್ಥೆಯಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ 14 ಮಕ್ಕಳಿಗೆ ಮತ್ತು ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕ ವೃಂದಕ್ಕೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರದ ಸ್ವಾಮೀಜಿಯವರು “ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ…

Read More

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ ಚಂದ್ರಶಾಲೆಯಲ್ಲಿ ಫೆ. 18ರಂದು ಸಾಯಂಕಾಲ ಶೋಡೋಪಚಾರ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಷ್ಟವಿದಾರ್ಚನೆ ಪೂಜೆಯಲ್ಲಿ ವಿವಿಧ ಪುಷ್ಪ, ಫಲ, ಸುಗಂಧ ದ್ರವ್ಯಗಳಿಂದ ಶ್ರೀ ಪದ್ಮಾವತಿ ದೇವಿಯನ್ನು ಆರಾಧಿಸಿ, ಪದ್ಮಾವತಿ ದೇವಿ ಸ್ತುತಿಗಳೊಂದಿಗೆ ಶಾಸ್ತ್ರೋಕ್ತ ವಿಧಾನದಲ್ಲಿ ಉಯ್ಯಾಲೆ ಸೇವೆಯಲ್ಲಿ ಊರ-ಪರವೂರ ಭಕ್ತರು ಸಮರ್ಪಿಸಿಕೊಂಡರು. ಸ್ವರ್ಣ ಪಲ್ಲಕ್ಕಿಯಲ್ಲಿ ಉತ್ಸವ ಶ್ರೀ ಪದ್ಮಾವತಿ ದೇವಿ…

Read More

ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು

ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು ಶ್ರೀಕ್ಷೇತ್ರ ಹೊಂಬುಜದಲ್ಲಿ ಯಜ್ಞೋಪವೀತ ಧಾರಣೆ ಹೊಂಬುಜ : ಜೈನ ಧರ್ಮದ ಸಿದ್ಧಾಂತಗಳನ್ನು ಜೀವನದಲ್ಲಿ ರೂಢಿಸಿಕೊಂಡು ಸಮ್ಯಕ್ ಜ್ಞಾನ, ದರ್ಶನ, ಚಾರಿತ್ರ್ಯದ ನೈಜ ಪಥವು ಸಾತ್ವಿಕವೂ, ಆಪ್ತವೂ ಆಗಿ ಉತ್ತಮ ಪರಿಣಾಮವುಂಟಾಗುವುದು ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಉಪಕರ್ಮದ ಕುರಿತು ತಿಳಿಸಿದರು. ಪ್ರಾತಃ ಕಾಲದಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ…

Read More